Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಮಾಧ್ಯಮದ ಬ್ರಾಹ್ಮಣ ವಿರೋಧಿ...

ಸಾಮಾಜಿಕ ಮಾಧ್ಯಮದ ಬ್ರಾಹ್ಮಣ ವಿರೋಧಿ ಪೋಸ್ಟ್‌ಗೆ ದಲಿತ ವಕೀಲನ ಹತ್ಯೆ

ವಿಶೇಷ ತನಿಖಾ ತಂಡದ ತನಿಖೆಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ19 Oct 2020 11:08 PM IST
share
ಸಾಮಾಜಿಕ ಮಾಧ್ಯಮದ ಬ್ರಾಹ್ಮಣ ವಿರೋಧಿ ಪೋಸ್ಟ್‌ಗೆ ದಲಿತ ವಕೀಲನ ಹತ್ಯೆ

ರಾಜ್‌ಕೋಟ್, ಅ. 19: ಸಾಮಾಜಿಕ ಮಾಧ್ಯಮದ ಬ್ರಾಹ್ಮಣ ವಿರೋಧಿ ಪೋಸ್ಟ್‌ಗಳು ದಲಿತ ವಕೀಲ ದೇವ್‌ಜಿ ಮಹೇಶ್ವರಿ ಅವರ ಹತ್ಯೆಗೆ ಕಾರಣವಾಯಿತು ಎಂಬುದು ವಿಶೇಷ ತನಿಖಾ ತಂಡ (ಸಿಟ್)ತನಿಖೆಯಿಂದ ಬಹಿರಂಗಗೊಂಡಿದೆ. ಸಾಮಾಜಿಕ ಮಾಧ್ಯಮದಲ್ಲಿ ದೇವ್‌ಜಿ ಮಹೇಶ್ವರಿ ಹಾಕಿದ ಪೋಸ್ಟ್ ಕುರಿತಂತೆ ಪ್ರಿಂಟರ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುವ 22 ವರ್ಷದ ಭರತ್ ರಾವಲ್ ಹಾಗೂ ದೇವ್‌ಜಿ ಮಹೇಶ್ವರಿ ನಡುವೆ ಫೋನ್‌ನಲ್ಲಿ ವಾಗ್ವಾದ ನಡೆದಿತ್ತು. ಒಂದು ದಿನದ ಬಳಿಕ ಅಂದರೆ ಸೆಪ್ಟಂಬರ್ 25ರಂದು ಕಛ್ನ ರಾಪರ್ ಪಟ್ಟಣದಲ್ಲಿ ಭರತ್ ರಾವಲ್ ದೇವ್‌ಜಿ ಮಹೇಶ್ವರಿ ಅವರನ್ನು ಇರಿದು ಹತ್ಯೆಗೈದಿದ್ದಾನೆ.

  ಮಹೇಶ್ವರಿ ಅವರ ಹತ್ಯೆ ನಡೆದ ಒಂದು ದಿನದ ಬಳಿಕ ಮುಂಬೈ ಪೊಲೀಸರು ಪ್ರಧಾನ ಆರೋಪಿ ಭರತ್ ರಾವಲ್‌ನನ್ನು ಬಂಧಿಸಿದ್ದಾರೆ. ವಿಚಾರಣೆ ಸಂದರ್ಭ ಭರತ್ ರಾವಲ್, ಸಾಮಾಜಿಕ ಜಾಲ ತಾಣದಲ್ಲಿನ ಬ್ರಾಹ್ಮಣರ ಕುರಿತು ಪೂರ್ವಾಗ್ರಹ ಹೊಂದಿದ ಪೋಸ್ಟ್‌ಗೆ ಸಂಬಂಧಿಸಿ ಮಹೇಶ್ವರಿಯನ್ನು ಹತ್ಯೆಗೈದಿದ್ದಾನೆ ಎಂದು ತಿಳಿಸಿದ್ದಾನೆ. ಮಹೇಶ್ವರಿ ಅವರ ಪತ್ನಿ ಮೀನಾಕ್ಷಿಬೆನ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ 8 ಮಂದಿಯ ವಿರುದ್ಧದ ಪುರಾವೆಗಳು ಪೊಲೀಸರಿಗೆ ಇದುವರೆಗೆ ಪತ್ತೆಯಾಗಿಲ್ಲ.

‘‘ಮಹೇಶ್ವರಿ ಅವರು ತನ್ನ ಫೇಸ್‌ಬುಕ್ ಖಾತೆಯಲ್ಲಿ ಬ್ರಾಹ್ಮಣರಿಗೆ ವಿರುದ್ಧವಾದ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಆಗಾಗ ಅಪ್‌ಲೋಡ್ ಮಾಡುತ್ತಿದ್ದರು. ಈ ಬಗ್ಗೆ ಭರತ್ ರಾವಲ್ ಮಹೇಶ್ವರಿಗೆ ಫೋನ್ ಕರೆ ಮಾಡಿದ್ದ. ಫೋನಿನಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಬ್ರಾಹ್ಮಣ ಸಮುದಾಯದ ವಿರುದ್ಧ ಸಾಮಾಜಿಕ ಮಾಧ್ಯಮದ ಪೋಸ್ಟ್‌ನ ಕಾರಣಕ್ಕೆ ಹುಟ್ಟಿಕೊಂಡ ವಿವಾದದ ಹಿನ್ನೆಲೆಯಲ್ಲಿ ಭರತ್ ರಾವಲ್, ಮಹೇಶ್ವರಿ ಅವರನ್ನು ಹತ್ಯೆಗೈದಿದ್ದಾನೆ ಎಂಬುದು ತನಿಖೆಯ ಸಂದರ್ಭ ಸಂಗ್ರಹಿಸಲಾದ ಪುರಾವೆಯಿಂದ ಬೆಳಕಿಗೆ ಬಂದಿದೆ’’ ಎಂದು ವಿಶೇಷ ತನಿಖಾ ತಂಡ ರವಿವಾರ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ. ಡಿಐಜಿ ಜೆ.ಆರ್. ಮೊಥಾಲಿಯಾ ನೇತೃತ್ವದ 7 ಸದಸ್ಯರ ವಿಶೇಷ ತನಿಖಾ ತಂಡ (ಸಿಟ್)ದಲ್ಲಿ ಗಡಿ ವಲಯದ ಡಿಐಜಿ, ಕಛ್ (ಪೂರ್ವ), ಕಛ್ (ಪಶ್ಚಿಮ) ಹಾಗೂ ಪಟನ್ ಜಿಲ್ಲಾ ಪೊಲೀಸ್‌ನ ಅಧಿಕಾರಿಗಳು ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X