Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ.ಬಂಗಾಳದಲ್ಲಿ ದುರ್ಗಾ ಪೂಜಾ ಮಂಟಪಗಳಿಗೆ ...

ಪ.ಬಂಗಾಳದಲ್ಲಿ ದುರ್ಗಾ ಪೂಜಾ ಮಂಟಪಗಳಿಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ19 Oct 2020 11:49 PM IST
share

ಕೋಲ್ಕತಾ,ಅ.19: ಪ.ಬಂಗಾಳದ ನಾಡಹಬ್ಬವಾಗಿರುವ ದುರ್ಗಾ ಪೂಜೆಗೆ ಇನ್ನು ಮೂರು ದಿನಗಳು ಬಾಕಿಯಿರುವಂತೆ ಸೋಮವಾರ ನಿರ್ದೇಶವೊಂದನ್ನು ಹೊರಡಿಸಿರುವ ಕಲ್ಕತ್ತಾ ಉಚ್ಚ ನ್ಯಾಯಾಲಯವು,ಸಾರ್ವಜನಿಕರಿಗೆ ಪೂಜಾ ಮಂಟಪಗಳಲ್ಲಿ ಪ್ರವೇಶವನ್ನು ನಿಷೇಧಿಸಿದೆ. ಸಂಘಟಕರು ಮಾತ್ರ ಮಂಟಪವನ್ನು ಪ್ರವೇಶಿಸಬಹುದು ಎಂದು ಅದು ಹೇಳಿದೆ. ಕೊರೋನ ವೈರಸ್ ಪಿಡುಗಿನ ಹಿನ್ನೆಲೆಯಲ್ಲಿ ಪ್ರವೇಶಾವಕಾಶವನ್ನು ದೊಡ್ಡ ಮಂಟಪಗಳಲ್ಲಿ 25 ಮತ್ತು ಸಣ್ಣ ಮಂಟಪಗಳಲ್ಲಿ 15 ಸಂಘಟಕರಿಗೆ ಸೀಮಿತಗೊಳಿಸಲಾಗಿದೆ.

 ಎಲ್ಲ ಪೂಜಾ ಮಂಟಪಗಳ ಪ್ರವೇಶದ್ವಾರಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಮತ್ತು ಇವು ಸಣ್ಣ ಮಂಟಪಗಳಿಗೆ ಐದು ಮೀಟರ್ ಹಾಗೂ ದೊಡ್ಡ ಮಂಟಪಗಳಾದರೆ ಹತ್ತು ಮೀಟರ್ ದೂರದಲ್ಲಿರಬೇಕು ಎಂದು ನ್ಯಾಯಾಲಯವು ತಿಳಿಸಿದೆ.

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮಾರ್ಗಸೂಚಿಗಳ ಪಾಲನೆಗೆ ಒತ್ತು ನೀಡಿರುವ ನ್ಯಾಯಾಲಯವು,ನಗರದಲ್ಲಿಯ 3,000ಕ್ಕೂ ಅಧಿಕ ದುರ್ಗಾ ಪೂಜಾ ಮಂಟಪಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಕೋಲ್ಕತಾದಲ್ಲಿ ಪೊಲೀಸರ ಕೊರತೆಯಿದೆ ಎಂದು ತಿಳಿಸಿದೆ.

ಕಳೆದ ಕೆಲವು ವಾರಗಳಲ್ಲಿ ಜನರು ಕೋವಿಡ್ ಶಿಷ್ಟಾಚಾರಗಳನ್ನು ಕಡೆಗಣಿಸಿ ದುರ್ಗಾ ಪೂಜೆಗೆ ಖರೀದಿಗಳಲ್ಲಿ ತೊಡಗಿರುವುದರಿಂದ ನಗರದಲ್ಲಿ ಕೊರೋನ ವೈರಸ್ ಪ್ರಕರಣಗಳು ಹೆಚ್ಚತೊಡಗಿವೆ. ಮಾಸ್ಕ್ ಧಾರಣೆ,ಸುರಕ್ಷಿತ ಅಂತರ ಇತ್ಯಾದಿ ಎಚ್ಚರಿಕೆಗಳನ್ನು ಗಾಳಿಗೆ ತೂರಿರುವ ಜನರು ಮಾರುಕಟ್ಟೆಗಳಲ್ಲಿ ಗುಂಪುಗುಂಪಾಗಿ ಸೇರುತ್ತಿದ್ದಾರೆ.

 ನಗರದ ರಸ್ತೆಗಳಲ್ಲಿ ಜನಸಾಗರ ಆರೋಗ್ಯ ತಜ್ಞರಲ್ಲಿ ಆತಂಕ ಸೃಷ್ಟಿಸಿದೆ. ಸಾಮೂಹಿಕ ಸೋಂಕು ಹರಡಬಹುದು ಮತ್ತು ರಾಜ್ಯದಲ್ಲಿ ಕೊರೋನ ವೈರಸ್‌ನ ಎರಡನೇ ಅಲೆ ಏಳಬಹುದು ಎಂಬ ಭೀತಿಯನ್ನು ಅವರು ವ್ಯಕ್ತಪಡಿಸಿದ್ದಾರೆ.

ರವಿವಾರದವರೆಗೆ ಪ.ಬಂಗಾಳದಲ್ಲಿ ಒಟ್ಟು 3,21,036 ಕೋವಿಡ್ ಪ್ರಕರಣಗಳು ದಾಖಲಾಗಿದ್ದು,6,000ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X