Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮಸೂದೆಯ...

ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮಸೂದೆಯ ಪ್ರತಿಗಾಗಿ ವಿಧಾನಸಭೆಯಲ್ಲಿ ಆಪ್ ಶಾಸಕರಿಂದ ಅಹೋರಾತ್ರಿ ಧರಣಿ

ವಾರ್ತಾಭಾರತಿವಾರ್ತಾಭಾರತಿ20 Oct 2020 9:42 PM IST
share
ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮಸೂದೆಯ ಪ್ರತಿಗಾಗಿ ವಿಧಾನಸಭೆಯಲ್ಲಿ ಆಪ್ ಶಾಸಕರಿಂದ ಅಹೋರಾತ್ರಿ ಧರಣಿ

ಚಂಡಿಗಡ,ಅ.20: ಕೇಂದ್ರದ ಕೃಷಿಕಾನೂನುಗಳ ವಿರುದ್ಧ ಪಂಜಾಬಿನ ಕಾಂಗ್ರೆಸ್ ಸರಕಾರವು ತರುತ್ತಿರುವ ಮಸೂದೆ ಹಾಗೂ ಸದನದಲ್ಲಿ ಮಂಡಿಸಲಾಗಿರುವ ಇತರ ಮಸೂದೆಗಳ ಪ್ರತಿಗಳನ್ನು ತಮಗೆ ಒದಗಿಸದ್ದನ್ನು ಪ್ರತಿಭಟಿಸಿ ಆಪ್ ಶಾಸಕರು ಸೋಮವಾರ ಅಹೋರಾತ್ರಿ ವಿಧಾನಸಭಾ ಸಂಕೀರ್ಣದಲ್ಲಿ ಧರಣಿ ನಡೆಸಿದರು.

ಕೇಂದ್ರದ ಕೃಷಿ ಕಾನೂನುಗಳನ್ನು ಕಡೆಗಣಿಸುವ ಮಸೂದೆಯ ಅಂಗೀಕಾರಕ್ಕಾಗಿ ಕರೆಯಲಾದ ವಿಶೇಷ ವಿಧಾನಸಭಾ ಅಧಿವೇಶನದ ಮೊದಲ ದಿನವಾದ ಸೋಮವಾರ ಮಸೂದೆಗಳ ಪ್ರತಿಗಳಿಗಾಗಿ ಆಗ್ರಹಿಸಿ ಆಪ್ ಸದಸ್ಯರು ಸದನದ ಬಾವಿಯಲ್ಲಿ ಧರಣಿ ಕುಳಿತಿದ್ದರು. ಆದರೆ ಸದನವನ್ನು ಕೋವಿಡ್ ಸೋಂಕುಮುಕ್ತಗೊಳಿಸಬೇಕಿದೆ,ಇಲ್ಲದಿದ್ದರೆ ಮಂಗಳವಾರ ಅಧಿವೇಶನ ನಡೆಸುವುವಂತಿಲ್ಲ ಎಂದು ವಿಧಾನಸಭಾ ಸಿಬ್ಬಂದಿಗಳು ತಿಳಿಸಿದ ಬಳಿಕ ಆಪ್ ಶಾಸಕರು ತಮ್ಮ ಧರಣಿಯನ್ನು ಸದಸ್ಯರ ಲಾಂಜ್‌ಗೆ ಸ್ಥಳಾಂತರಿಸಿದ್ದರು.

ಸಂಜೆ ಐದು ಗಂಟೆಯೊಳಗೆ ಮಸೂದೆಯ ಪ್ರತಿಗಳನ್ನು ಒದಗಿಸುವುದಾಗಿ ವಿಧಾನಸಭಾ ಸಿಬ್ಬಂದಿಗಳು ಭರವಸೆ ನೀಡಿದ್ದರಾದರೂ ಅದು ಈಡೇರಿರಲಿಲ್ಲ. ಆಪ್ ಪ್ರತಿಭಟನೆಯು 2016ರಲ್ಲಿ ಆಗಿನ ಎಸ್‌ಎಡಿ-ಬಿಜೆಪಿ ಸರಕಾರದ ವಿರುದ್ಧ ಸದನದಲ್ಲಿ ಕಾಂಗ್ರೆಸ್‌ನ ಅಹೋರಾತ್ರಿ ಪ್ರತಿಭಟನೆಯನ್ನು ನೆನಪಿಸಿದೆ.

ವಿಶೇಷ ಅಧಿವೇಶನವನ್ನು ಕರೆಯುವ ಮುನ್ನ ಸರಕಾರವು ಎಲ್ಲ ರಾಜಕೀಯ ಪಕ್ಷಗಳು ಮತ್ತು ರೈತರ ಪ್ರತಿನಿಧಿಗಳು,ಕಾನೂನು ಮತ್ತು ಸಂವಿಧಾನ ತಜ್ಞರು ಹಾಗೂ ಕೃಷಿ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ಅಭಿಪ್ರಾಯಗಳನ್ನು ಪಡೆದುಕೊಳ್ಳಬೇಕಿತ್ತು ಎಂದು ಆಪ್ ಶಾಸಕ ಅಮನ್ ಅರೋರಾ ಹೇಳಿದರು.

ಕೇಂದ್ರದ ಕಾನೂನುಗಳ ವಿರುದ್ಧ ತಾನು ತರಲು ಬಯಸಿರುವ ಮಸೂದೆಗಳ ಕರಡು ಪ್ರತಿಯನ್ನು ಸರಕಾರವು ಪ್ರತಿಪಕ್ಷಗಳಿಗೆ ಅಥವಾ ರೈತರಿಗೆ ಒದಗಿಸದಿರುವುದು ವಿಷಾದಕರವಾಗಿದೆ. ಅದು ರೈತರ ರಕ್ಷಣೆಗಾಗಿ ಕಾನೂನು ತರುವಂತೆ ಕಂಡು ಬರುತ್ತಿಲ್ಲ. ಅದು 2022ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ರಕ್ಷಿಸಲು ಕಾನೂನು ತರುತ್ತಿರುವಂತಿದೆ ಎಂದರು.

ಕೃಷಿ ಕಾನೂನುಗಳ ಕುರಿತು ವಿಶೇಷ ಅಧಿವೇಶನವನ್ನು ಕರೆದಿರುವ ಅಮರಿಂದರ್ ಸಿಂಗ್ ಸರಕಾರವು ಅವುಗಳನ್ನು ಎದುರಿಸಲು ಏನು ಮಾಡಬೇಕು ಎಂಬ ಬಗ್ಗೆ ಶಾಸಕರಿಗೆ ಮಾಹಿತಿ ನೀಡದಿರುವುದು ಅಚ್ಚರಿಯ ವಿಷಯವಾಗಿದೆ. ಅದು ತರುತ್ತಿರುವ ಮಸೂದೆಯಾದರೂ ಏನು? ಕೋವಿಡ್ ನಿಯಮಗಳ ನೆಪದಲ್ಲಿ ಮಾಧ್ಯಮಗಳನ್ನೂ ಸದನದಿಂದ ಹೊರಗಿಡಲಾಗಿದೆ ಎಂದು ಇನ್ನೋರ್ವ ಆಪ್ ಶಾಸಕ ಕುಲ್ತಾರ್ ಸಿಂಗ್ ಸಂಧ್ವಾನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X