ವಿದ್ಯಾಧೀಶ ತೀರ್ಥ ಸ್ವಾಮೀಜಿಗೆ ಡಾಕ್ಟರೇಟ್ ಪದವಿ ಪ್ರದಾನ
![ವಿದ್ಯಾಧೀಶ ತೀರ್ಥ ಸ್ವಾಮೀಜಿಗೆ ಡಾಕ್ಟರೇಟ್ ಪದವಿ ಪ್ರದಾನ ವಿದ್ಯಾಧೀಶ ತೀರ್ಥ ಸ್ವಾಮೀಜಿಗೆ ಡಾಕ್ಟರೇಟ್ ಪದವಿ ಪ್ರದಾನ](/images/placeholder.jpg)
ಮಂಗಳೂರು, ಅ.21: ಉಡುಪಿಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿಗೆ ಶ್ರೀನಿವಾಸ್ ವಿವಿಯು ಮಂಗಳವಾರ ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನಿಸಿತು.
ಶ್ರೀನಿವಾಸ್ ವಿವಿಯ ಕುಲಾಧಿಪತಿ ಸಿಎ. ಎ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್, ಕುಲಪತಿ ಡಾ. ಪಿ.ಎಸ್. ಐತಾಳ್, ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ಜಯಲಕ್ಷ್ಮಿ ಆರ್. ರಾವ್, ಪ್ರೊ. ಎ.ಮಿತ್ರಾ ಎಸ್. ರಾವ್, ಕುಲಸಚಿವರಾದ ಡಾ. ಅನಿಲ್ ಕುಮಾರ್, ಡಾ. ಶ್ರೀನಿವಾಸ್ ಮಯ್ಯ (ಮೌಲ್ಯಮಾಪನ), ಡಾ. ಅಜಯ್ ಕುಮಾರ್ (ಅಭಿವೃದ್ಧಿ), ಆದಿತ್ಯ ಕುಮಾರ್ (ಶೈಕ್ಷಣಿಕ ಮತ್ತು ಅಭಿವೃದ್ಧಿ) ಉಪಸ್ಥಿತರಿದ್ದರು.
Next Story