Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ವಿದೇಶಿ ಉಮ್ರಾ ಯಾತ್ರಿಕರನ್ನು...

ವಿದೇಶಿ ಉಮ್ರಾ ಯಾತ್ರಿಕರನ್ನು ಸ್ವಾಗತಿಸಲು ಸೌದಿ ಅರೇಬಿಯದಿಂದ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ22 Oct 2020 9:18 PM IST
share
ವಿದೇಶಿ ಉಮ್ರಾ ಯಾತ್ರಿಕರನ್ನು ಸ್ವಾಗತಿಸಲು ಸೌದಿ ಅರೇಬಿಯದಿಂದ ಸಿದ್ಧತೆ

ರಿಯಾದ್ (ಸೌದಿ ಅರೇಬಿಯ), ಅ. 22: ವಿದೇಶಿ ಉಮ್ರಾ ಯಾತ್ರಿಕರನ್ನು ಸ್ವಾಗತಿಸಲು ಸೌದಿ ಅರೇಬಿಯದ ಹಜ್ ಮತ್ತು ಉಮ್ರಾ ಸಚಿವಾಲಯ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ‘ಸೌದಿ ಗಝೆಟ್’ ಪತ್ರಿಕೆ ವರದಿ ಮಾಡಿದೆ.

ದೇಶದ ನಾಗರಿಕರು ಮತ್ತು ದೇಶದಲ್ಲೇ ವಾಸಿಸುತ್ತಿರುವ ವಲಸಿಗರಿಗಾಗಿ ಯಶಸ್ವಿ ಯಾತ್ರೆಯನ್ನು ಏರ್ಪಡಿಸಿದ ಬಳಿಕ, ವಿದೇಶೀಯರ ಆಗಮನಕ್ಕೆ ಅನುಮತಿ ನೀಡುವ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಪತ್ರಿಕೆ ಹೇಳಿದೆ.

ವಿದೇಶಿ ಯಾತ್ರಿಕರನ್ನು ಸ್ವಾಗತಿಸಲು 700ಕ್ಕೂ ಅಧಿಕ ಉಮ್ರಾ ಕಂಪೆನಿಗಳು ಸಿದ್ಧವಾಗಿವೆ ಎಂದು ಹಜ್ ಮತ್ತು ಉಮ್ರಾ ವ್ಯವಹಾರಗಳ ಸಹಾಯಕ ಸಚಿವ ಅಬ್ದುಲ್ ರಹ್ಮಾನ್ ಶಾಮ್ಸ್ ಹೇಳಿದ್ದಾರೆ ಎಂದು ‘ಅಲ್ ಅಕ್ಬರಿಯ’ ಚಾನೆಲ್ ವರದಿ ಮಾಡಿದೆ.

ಈವರೆಗೆ ಸುಮಾರು 1.20 ಲಕ್ಷ ಯಾತ್ರಿಕರು ಉಮ್ರಾ ಯಾತ್ರೆ ಮಾಡಿದ್ದಾರೆ ಎಂದು ‘ಸೌದಿ ಗಝೆಟ್’ ತಿಳಿಸಿದೆ. ಅದೂ ಅಲ್ಲದೆ, ಅಕ್ಟೋಬರ್ 18ರಿಂದ ಆರಂಭವಾಗಿರುವ ಎರಡನೇ ಹಂತದ ಉಮ್ರಾ ಯಾತ್ರೆಯ ಅವಧಿಯಲ್ಲಿ ಈವರೆಗೆ 45,000 ಮಂದಿ ಮಕ್ಕಾದ ಪ್ರಧಾನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ವಿದೇಶಿ ಯಾತ್ರಿಕರು ಉಮ್ರಾದಲ್ಲಿ ತಮ್ಮ ಸ್ಥಾನವನ್ನು ನೋಂದಾಯಿತ ಕಂಪೆನಿಗಳ ಮೂಲಕ ಕಾದಿರಿಸಬೇಕಾಗಿದೆ. ಅದೂ ಅಲ್ಲದೆ, ವಿದೇಶೀಯರು ಗುಂಪುಗಳಲ್ಲಿ ಬರಬೇಕು ಹಾಗೂ ಒಬ್ಬೊಬ್ಬರಾಗಿ ಬರುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.

‘EATMARNA’ ಮೊಬೈಲ್ ಆ್ಯಪ್ ಸೌದಿ ಅರೇಬಿಯದ ಒಳಗಿನ ಯಾತ್ರಿಕರಿಗಾಗಿ ಮೀಸಲಾಗಿದೆ. ವಿದೇಶಿ ಯಾತ್ರಿಕರನ್ನು ನಿರ್ಬಂಧ ನಿವಾರಣೆಯ ಮೂರನೇ ಹಂತದಲ್ಲಿ ಸ್ವಾಗತಿಸಲು ಸಚಿವಾಲಯವು ಉಮ್ರಾ ಕಂಪೆನಿಗಳು ಮತ್ತು ಅವರ ಅನುಮೋದಿತ ವಿದೇಶಿ ಪ್ರತಿನಿಧಿಗಳೊಂದಿಗೆ ಸಿದ್ಧತೆಗಳನ್ನು ಆರಂಭಿಸಿದೆ. ಮೂರನೇ ಹಂತದ ಕೊರೋನ ವೈರಸ್ ನಿರ್ಬಂಧ ನಿವಾರಣೆಯು ನವೆಂಬರ್ 1ರಂದು ಆರಂಭಗೊಳ್ಳಲಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X