Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸೋಂಕು ದೇಶಕ್ಕೆ ಹಂಚಿದ್ದೆ ಕೇಂದ್ರ...

ಕೊರೋನ ಸೋಂಕು ದೇಶಕ್ಕೆ ಹಂಚಿದ್ದೆ ಕೇಂದ್ರ ಸರಕಾರ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ23 Oct 2020 8:24 PM IST
share
ಕೊರೋನ ಸೋಂಕು ದೇಶಕ್ಕೆ ಹಂಚಿದ್ದೆ ಕೇಂದ್ರ ಸರಕಾರ: ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.23: ಕೇಂದ್ರ ಸರಕಾರ ಬಿಹಾರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಉಚಿತ ಕೊರೋನ ಲಸಿಕೆ ನೀಡುವುದಾಗಿ ಹೇಳಿದೆ. ಮೊದಲು ಕೊರೋನ ಸೋಂಕಿಗೆ ಲಸಿಕೆ ತಯಾರು ಮಾಡಿರುವುದಾಗಿ ಹೇಳಲಿ. ಈ ಸೋಂಕನ್ನು ದೇಶದಲ್ಲಿ ಹಂಚಿದ್ದೇ ಕೇಂದ್ರ ಸರಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಶುಕ್ರವಾರ ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಚುನಾವಣಾ ಪ್ರಚಾರ ನಡೆಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಸಂದರ್ಭದಲ್ಲಿ ಸರಕಾರ ಜನರಿಗೆ ಏನೆಲ್ಲಾ ಭರವಸೆ ಕೊಟ್ಟಿತ್ತು. ಗಾಣಿಗ, ಸವಿತಾ ಸಮಾಜದವರಿಗೆ 5 ಸಾವಿರ ರೂ.ಕೊಡುತ್ತೇವೆ ಎಂದು ಹೇಳಿ ಕೊಟ್ಟರೇ? ಬ್ಯಾಂಕುಗಳಿಂದ ಪಡೆದಿರುವ ಸಾಲ ಪಾವತಿಯ ಅವಧಿಯನ್ನಾದರೂ ವಿಸ್ತರಿಸಿದ್ರಾ? ತೆರಿಗೆ ಪ್ರಮಾಣವನ್ನು ಏನಾದರೂ ಕಡಿಮೆ ಮಾಡಿದ್ರಾ? ಜೀವ ಇದ್ದರೆ ಜೀವನ, ಮೊದಲು ಈ ಬಗ್ಗೆ ಸರಕಾರ ಆಲೋಚನೆ ಮಾಡಲಿ ಎಂದು ಹೇಳಿದರು.

ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಯಾವ ರೀತಿ ನಡೆಯಿತು ಎಂಬುದು ಎಲ್ಲರೂ ನೊಡಿದ್ದಾರೆ. ಗೌರವಯುತವಾಗಿ ಅಂತ್ಯಕ್ರಿಯೆ ನಡೆಸಲು ಅವಕಾಶ ನೀಡಿಲ್ಲ, ಕುಟುಂಬ ಸದಸ್ಯರು ಅಂತಿಮ ದರ್ಶನ ಪಡೆಯಲು ಸಾಧ್ಯವಾಗಿಲ್ಲ. ವಿಶೇಷ ವಿಮಾನದ ಮೂಲಕ ಅವರ ಮೃತದೇಹವನ್ನು ರಾಜ್ಯಕ್ಕೆ ತರಬಹುದಾಗಿತ್ತು. ಈ ಸರಕಾರ ಯಾರೊಬ್ಬರ ನೆರವಿಗೂ ಧಾವಿಸಿಲ್ಲ. ಕೇವಲ ದುಡ್ಡು ಹೊಡೆಯೋಕೆ ಕುಳಿತಿದ್ದಾರೆ ಎಂದು ಶಿವಕುಮಾರ್ ಟೀಕಿಸಿದರು.

ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ಅರೆಸೇನಾ ಪಡೆಯನ್ನು ನಿಯೋಜಿಸಿರುವ ಸರಕಾರದ ಕ್ರಮಕ್ಕೆ ಪ್ರತಿಕ್ರಿಯಿಸಿದ ಅವರು, ನನಗೆ ಬಹಳ ಸಂತೋಷವಾಗಿದೆ. ಇಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಏನು ಸಮಸ್ಯೆ ಇಲ್ಲ ಅನ್ನೋದು ಸರಕಾರ, ಅಭ್ಯರ್ಥಿ ಹಾಗೂ ಜನರಿಗೂ ಮನವರಿಕೆಯಾಗಿದೆ. ಆದರೆ, ಬಿಜೆಪಿ ಅಭ್ಯರ್ಥಿ ಏನು ಮಾಡುತ್ತೇವೆ ಅನ್ನೋದನ್ನ ತಿಳಿಸಿದ್ದಾರೆ. ಏನು ಮಾಡಬೇಕು, ಏನು ಮಾಡಿಸಬೇಕು ಅದು ಅವರ ಬಾಯಿಂದ ಬಂದಿದೆ. ಇಲ್ಲಿ ನಡೆಯುತ್ತಿರುವ ಅಧಿಕಾರ ದುರ್ಬಳಕೆ ಚುನಾವಣಾ ಆಯೋಗದ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದರು.

ಸಂಸದ ಡಿ.ಕೆ.ಸುರೇಶ್ ಒಬ್ಬ ಜನಪ್ರತಿನಿಧಿಯಾಗಿ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಅವರು ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದರೆ ಪ್ರಕರಣ ದಾಖಲಿಸಿ, ಬಂಧಿಸಲಿ. ವಿನಾಕಾರಣ ಅವರ ವಿರುದ್ಧ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಶಿವಕುಮಾರ್ ಹೇಳಿದರು.

ಮೀರ್ ಸಾದಿಕ್ ಯಾರು ಅನ್ನೋದನ್ನು ಡಿಸಿಎಂ ಅಶ್ವತ್ಥ ನಾರಾಯಣ ಅವರೇ ಹೇಳಬೇಕು. ಬಿಜೆಪಿಯಲ್ಲೆ ಹಲವರು ಮೀರ್ ಸಾದಿಕ್ ಇದ್ದಾರೆ. ಅಶ್ವತ್ಥ ನಾರಾಯಣ ಮೀರ್ ಸಾದಿಕ್ ಅಲ್ವೇ? ಪಾಪ ಆಪರೇಷನ್ ಕಮಲ ಮಾಡಿದ್ದು ಯಾರೂ? ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡರಿಗೆ 5 ಕೋಟಿ ರೂ.ಕೊಟ್ಟಿದ್ದು ಯಾರು? ಇದೇ ಅಶ್ವಥ್ ನಾರಾಯಣ ಅಲ್ವೇ ಅವರ ಮನೆಗೆ ಹೋಗಿದ್ದು. ಸದನದಲ್ಲೇ ಶ್ರೀನಿವಾಸ ಗೌಡ ಇದನ್ನ ಹೇಳಿದ್ದರು. ನನಗೆ ಎಲ್ಲವೂ  ಗೊತ್ತಿದೆ, ಯಾರು ಮೀರ್ ಸಾದಿಕ್ ಅನ್ನೋದು ಎಂದು ಶಿವಕುಮಾರ್ ತಿರುಗೇಟು ನೀಡಿದರು.

ಆರ್.ಆರ್.ನಗರಕ್ಕೆ ಅರೆಸೇನಾ ಪಡೆಯನ್ನು ಕರೆಸುವ ಅವಶ್ಯಕತೆ ಇರಲಿಲ್ಲ. ಎಲ್ಲವೂ ಶಾಂತಯುತವಾಗಿಯೇ ನಡೆಯುತ್ತಿತ್ತು. ಕೊಲೆಮಾಡುವ ಬೆದರಿಕೆ ಕಾಂಗ್ರೆಸ್ ಮಾಡಲ್ಲ. ನಮ್ಮ ಸಂಸದರು ಸ್ವಲ್ಪ ಗಟ್ಟಿಯಾಗಿ ಕೇಳಿರಬಹುದು. ಅವರು ಕೇಳಿರೋದ್ರಲ್ಲಿ ತಪ್ಪೇನಿದೆ? ನಮ್ಮ ಮತಯಾಚನೆಗೆ ಅಡ್ಡಿಪಡಿಸಿದವರು ಯಾರು? ಬಿಜೆಪಿಯವರ ಬಗ್ಗೆ ಎಲ್ಲವೂ ಗೊತ್ತಿದೆ. ಅವರು ಏನೇ ಮಾಡಿದರೂ ಗೆಲ್ಲೋದು ನಾವೇ? ಎಂದು ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X