Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಮೊದಲ ಕೋವಿಡ್ ಲಸಿಕೆ ಕನಿಷ್ಠ...

ದೇಶದ ಮೊದಲ ಕೋವಿಡ್ ಲಸಿಕೆ ಕನಿಷ್ಠ ಶೇ.60ರಷ್ಟು ಪರಿಣಾಮಕಾರಿಯಾಗಲಿದೆ: ಭಾರತ್ ಬಯೊಟೆಕ್

ವಾರ್ತಾಭಾರತಿವಾರ್ತಾಭಾರತಿ23 Oct 2020 8:34 PM IST
share
ದೇಶದ ಮೊದಲ ಕೋವಿಡ್ ಲಸಿಕೆ ಕನಿಷ್ಠ ಶೇ.60ರಷ್ಟು ಪರಿಣಾಮಕಾರಿಯಾಗಲಿದೆ: ಭಾರತ್ ಬಯೊಟೆಕ್

ಹೊಸದಿಲ್ಲಿ,ಅ.23: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಭಾಗಿತ್ವದೊಂದಿಗೆ ಹೈದರಾಬಾದ್‌ನ ಭಾರತ ಬಯೊಟೆಕ್ ಅಭಿವೃದ್ಧಿಗೊಳಿಸುತ್ತಿರುವ ದೇಶದ ಮೊದಲ ಕೊರೋನ ವೈರಸ್ ಕೊವ್ಯಾಕ್ಸಿನ್ ಕನಿಷ್ಠ ಶೇ.60ರಷ್ಟು ಪರಿಣಾಮಕಾರಿಯಾಗುವ ಸಾಧ್ಯತೆಗಳಿವೆ.

ಭಾರತೀಯ ಔಷಧಿಗಳ ಮಹಾ ನಿಯಂತ್ರಕರ ಕಚೇರಿ (ಡಿಸಿಜಿಐ)ಯು ಲಸಿಕೆಯ ಪರಿಣಾಮಕಾರಿತ್ವವನ್ನು ಸಾಬೀತುಗೊಳಿಸಲು ಅದರ ಮೂರನೆಯ ಹಂತದ ಕ್ಲಿನಿಕಲ್ ಟ್ರಯಲ್‌ಗಾಗಿ ಗುರುವಾರ ಭಾರತ್ ಬಯೊಟೆಕ್‌ಗೆ ಅನುಮತಿಯನ್ನು ನೀಡಿದೆ.ಮೂರನೇ ಹಂತದ ಟ್ರಯಲ್‌ನ ಮಧ್ಯಂತರ ಫಲಿತಾಂಶಗಳು ಮುಂದಿನ ವರ್ಷದ ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಯಿದೆ.

‘ನಮ್ಮ ಕೋವಿಡ್-19 ನಿಗ್ರಹ ಲಸಿಕೆಯ ಪರಿಣಾಮಕಾರಿತ್ವ ಕನಿಷ್ಠ ಶೇ.60ರಷ್ಟಿರುತ್ತದೆ ಎನ್ನುವುದು ನಮ್ಮ ಗುರಿಯಾಗಿದೆ. ಕೊವ್ಯಾಕ್ಸಿನ್‌ಗಾಗಿ ಅತ್ಯಂತ ದೊಡ್ಡದಾದ ಮೂರನೇ ಹಂತದ ಟ್ರಯಲ್‌ನ್ನು ನಾವು ನಡೆಸುತ್ತಿದ್ದೇವೆ ’ ಎಂದು ಭಾರತ್ ಬಯೊಟೆಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಸಾಯಿಪ್ರಸಾದ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು. ಪ್ರಸಾದ ಕಂಪನಿಯ ಉತ್ಪನ್ನ ಅಭಿವೃದ್ಧಿ ತಂಡದ ಸದಸ್ಯರೂ ಆಗಿದ್ದಾರೆ.

ಶ್ವಾಸಕೋಶ ಲಸಿಕೆಗಳಿಗೆ ಸಂಬಂಧಿಸಿದ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯು ಕನಿಷ್ಠ ಶೇ.50ರಷ್ಟು ಪರಿಣಾಮಕಾರಿತ್ವ ಹೊಂದಿರುವ ಲಸಿಕೆಗಳಿಗೆ ಮಂಜೂರಾತಿಯನ್ನು ನೀಡುತ್ತದೆ. ಅಮೆರಿಕದ ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟರೇಷನ್ ಮತ್ತು ಭಾರತದ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನ್ಯೆಸೇಷನ್ ಕೂಡ ಇದೇ ಮಾನದಂಡವನ್ನು ಅನುಸರಿಸುತ್ತಿವೆ. ಕೊವ್ಯಾಕ್ಸಿನ್‌ಗೆ ನಮ್ಮ ಪರಿಣಾಮಕಾರಿತ್ವ ಗುರಿ ಶೇ.60 ಆಗಿದೆ. ನಮ್ಮ ಈವರೆಗಿನ ಪ್ರಯೋಗಗಳು ಸೂಚಿಸಿರುವಂತೆ ಲಸಿಕೆಯ ಪರಿಣಾಮಕಾರಿತ್ವ ಶೇ.50ಕ್ಕಿಂತ ಕಡಿಮೆಯಿರುವ ಸಾಧ್ಯತೆಯಿಲ್ಲ ಎಂದು ಪ್ರಸಾದ್ ಹೇಳಿದರು.

ಸದ್ಯದ ಯೋಜನೆಯಂತೆ ಕಂಪನಿಯು ನವಂಬರ್‌ನ ಮೊದಲ ಎರಡು ವಾರಗಳಲ್ಲಿ ಲಸಿಕೆಯ ಪರಿಣಾಮಕಾರಿತ್ವವನ್ನು ನಿರ್ಧರಿಸಲು ಮೂರನೇ ಹಂತದ ಟ್ರಯಲ್ ಆರಂಭಿಸಲಿದೆ. ಇದಕ್ಕಾಗಿ 13-14 ರಾಜ್ಯಗಳಲ್ಲಿಯ 25-30 ಸ್ಥಳಗಳಲ್ಲಿ 26,000 ಜನರ ಮೇಲೆ ಪ್ರಯೋಗಗಳನ್ನು ನಡೆಸಲಾಗುವುದು. ಮೊದಲ ಹಂತದ ಟ್ರಯಲ್‌ನಲ್ಲಿ 375 ಮತ್ತು ಎರಡನೇ ಹಂತದ ಟ್ರಯಲ್‌ನಲ್ಲಿ 2,400 ಜನರು ಪಾಲ್ಗೊಂಡಿದ್ದರು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X