ಲಾರಿ ಢಿಕ್ಕಿ: ರಸ್ತೆ ದಾಟುತ್ತಿದ್ದ ವಾಚ್ಮೆನ್ ಮೃತ್ಯು
ಕೋಟ, ಅ.23: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅ. 22ರಂದು ಸಂಜೆ 7ಗಂಟೆ ಸುಮಾರಿಗೆ ಮಣೂರಿನಲ್ಲಿರುವ ಇಂದ್ರಪ್ರಸ್ಥ ಹೊಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಇಂದ್ರಪ್ರಸ್ಥ ಹೊಟೇಲಿನ ವಾಚ್ಮೆನ್ ಲಕ್ಷ್ಮಣ ಪೂಜಾರಿ (47) ಎಂದು ಗುರುತಿಸಲಾಗಿದೆ. ಇವರು ಕೆಲಸ ಮುಗಿಸಿ ಮನೆಗೆ ಹೋಗಲು ಹೊಟೇಲ್ ಎದುರು ರಸ್ತೆ ದಾಟಲು ನಿಂತಿದ್ದರು. ಆಗ ಬ್ರಹ್ಮಾವರ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಲಾರಿಯು ಲಕ್ಷ್ಮಣ ಪೂಜಾರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story