Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಧಿವಾತದ ಔಷಧಿಯ ಅಡ್ಡಪರಿಣಾಮ ತಗ್ಗಿಸುವ...

ಸಂಧಿವಾತದ ಔಷಧಿಯ ಅಡ್ಡಪರಿಣಾಮ ತಗ್ಗಿಸುವ ವಿಧಾನ : ಭಾರತೀಯ ವಿಜ್ಞಾನಿಗಳ ಸಾಧನೆ

ವಾರ್ತಾಭಾರತಿವಾರ್ತಾಭಾರತಿ26 Oct 2020 9:08 PM IST
share
ಸಂಧಿವಾತದ ಔಷಧಿಯ ಅಡ್ಡಪರಿಣಾಮ ತಗ್ಗಿಸುವ ವಿಧಾನ : ಭಾರತೀಯ ವಿಜ್ಞಾನಿಗಳ ಸಾಧನೆ

ಹೊಸದಿಲ್ಲಿ, ಅ.26: ಸಂಧಿವಾತ ರೋಗದ ಔಷಧ ಸಲ್ಫಪಿರಿಡೀನ್‌ನ ಅಡ್ಡ ಪರಿಣಾಮವನ್ನು ತಗ್ಗಿಸುವ ನಿಟ್ಟಿನಲ್ಲಿ ನವೀನ ವಿಧಾನವನ್ನು ಭಾರತೀಯ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ ಎಂದು ವರದಿಯಾಗಿದೆ.

ಸಂಧಿವಾತ ರೋಗದಿಂದ ಬಳಲುತ್ತಿರುವವರು ಉಪಯೋಗಿಸುವ ಸಲ್ಫಪಿರಿಡೀನ್ ಔಷಧದ ನಿರಂತರ ಸೇವನೆಯಿಂದ ವಾಂತಿ, ವಾಕರಿಕೆ, ತಲೆ ಸುತ್ತಿದಂತಾಗುವುದು, ಆತಂಕದ ಭಾವನೆ, ಕಿಬ್ಬೊಟ್ಟೆ ನೋವು ಮುಂತಾದ ಅಡ್ಡ ಪರಿಣಾಮ ಕಂಡುಬರುತ್ತದೆ. ಈ ಹಿನ್ನೆಲೆಯಲ್ಲಿ, ಭಾರತೀಯ ವಿಜ್ಞಾನಿಗಳು ನವೀನ ವಿಧಾನವನ್ನು ಅಭಿವೃದ್ಧಿಪಡಿಸಿದ್ದಾರೆ.

ಈ ವಿಧಾನದ ಮೂಲಕ ಸಲ್ಫಪಿರಿಡೀನ್ ಔಷಧವನ್ನು ನೇರವಾಗಿ ನೋವಿರುವ ಸ್ಥಳಕ್ಕೇ ನೀಡಲಾಗುತ್ತದೆ . ಸಂಧಿವಾತದ ರೋಗ ಅಂಟಿದ ಸ್ಥಳಕ್ಕೆ ನೇರವಾಗಿ ಇಂಜಕ್ಷನ್ ಮೂಲಕ ಔಷಧವನ್ನು ತಲುಪಿಸುವ ವಿಧಾನ ಇದಾಗಿದೆ. ಇದರಿಂದ ಮದ್ದಿನ ಪ್ರಭಾವ ಆ ಸ್ಥಳಕ್ಕಷ್ಟೇ ಸೀಮಿತವಾಗಿರುತ್ತದೆ . ಇದುವರೆಗೆ ಔಷಧವನ್ನು ದ್ರವ ರೂಪದಲ್ಲಿ ಬಾಯಿಯ ಮೂಲಕ ಸೇವಿಸಬೇಕಿತ್ತು. ಇದು ಅತ್ಯಂತ ಸುರಕ್ಷಿತ ವಿಧಾನವಾಗಿದೆ ಎಂದು ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ(ಎಲ್‌ಪಿಯು)ಯ ಅಸೋಸಿಯೇಟ್ ಪ್ರೊಫೆಸರ್ ಭೂಪಿಂದರ್ ಕಪೂರ್ ಹೇಳಿದ್ದಾರೆ. ಎಲ್‌ಪಿಯುನ ಸಂಶೋಧಕ ವಿಜ್ಞಾನಿಗಳು ಈ ನವೀನ ವಿಧಾನವನ್ನು ಅಭಿವೃದ್ಧಿಗೊಳಿಸಿದ್ದಾರೆ. ಸಂಶೋಧಕರು ಸಲ್ಫಪಿರಿಡೀನ್‌ಗೆ ಪೂರ್ವಸೂಚಕ (ಜೈವಿಕವಾಗಿ ನಿಷ್ಕ್ರಿಯವಾಗಿರುವ ಸಂಯೋಜನೆ)ವನ್ನು ಅಭಿವೃದ್ಧಿಗೊಳಿಸಿದ್ದು ಬಳಿಕ ಅದನ್ನು ನವೀನ ವಿಧಾನದಲ್ಲಿ ವಿನ್ಯಾಸಗೊಳಿಸಲಾಗಿದೆ . ಇದು ಲಿಪೋಸೋಮ್‌ಗಳಲ್ಲಿ ಉತ್ತಮ ಧಾರಣ ಶಕ್ತಿಯನ್ನು ಪ್ರದರ್ಶಿಸುತ್ತದೆ ಮತ್ತು ಉರಿಯೂತದ ಲಕ್ಷಣಗಳನ್ನು ಕಡಿಮೆಗೊಳಿಸುತ್ತದೆ ಎಂದು ‘ಮೆಟೀರಿಯಲ್ಸ್ ಸೈಯನ್ಸ್ ಆ್ಯಂಡ್ ಇಂಜಿನಿಯರಿಂಗ್ ಸಿ’ ನಿಯತಕಾಲಿಕದಲ್ಲಿ ಪ್ರಕಟವಾದ ಸಂಶೋಧನೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. (ಲಿಪೋಸೋಮ್ ಎಂಬುದು ಔಷಧಗಳ ಸಂಚಲನಕ್ಕೆ ಬಳಸಲಾಗುವ ಗೋಳಾಕಾರದ ಕೋಶಕವಾಗಿದೆ).

ಭೂಪಿಂದರ್ ಕಪೂರ್, ಮೋನಿಕಾ ಗುಲಾಟಿ ಮತ್ತು ಸಚಿನ್ ಕೆ. ಸಿಂಗ್ ಸಂಶೋಧನಾ ತಂಡದಲ್ಲಿದ್ದರು. ಇದೊಂದು ಭರವಸೆಯ ಸಂಶೋಧನೆಯಾಗಿದೆ ಎಂದು ಸಿಲಿಗುರಿಯ ನಾರ್ತ್‌ ಬೆಂಗಾಲ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡಾ ಅರೂಪ್ ಕುಮಾರ್ ಬ್ಯಾನರ್ಜಿ ಪ್ರಶಂಸಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X