Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊರನಾಡು ದೇವಾಲಯದ ಧರ್ಮದರ್ಶಿ...

ಹೊರನಾಡು ದೇವಾಲಯದ ಧರ್ಮದರ್ಶಿ ಕುಟುಂಬದವರಿಂದ ಗನ್‍ಗಳ ದುರ್ಬಳಕೆ: ಆರೋಪ

ವಿಜಯದಶಮಿಯಂದು ದೇವಾಲಯದ ಆವರಣದಲ್ಲಿ ಆರ್ಭಟಿಸಿದ ಪಾಯಿಂಟ್ ಗನ್‍ಗಳು

ವಾರ್ತಾಭಾರತಿವಾರ್ತಾಭಾರತಿ26 Oct 2020 9:51 PM IST
share
ಹೊರನಾಡು ದೇವಾಲಯದ ಧರ್ಮದರ್ಶಿ ಕುಟುಂಬದವರಿಂದ ಗನ್‍ಗಳ ದುರ್ಬಳಕೆ: ಆರೋಪ

ಚಿಕ್ಕಮಗಳೂರು, ಅ.26: ವಿಜಯದಶಮಿ ಹಬ್ಬದ ಅಂಗವಾಗಿ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿರುವ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಆವರಣದಲ್ಲಿ ಸೋಮವಾರ ಬಂದೂಕುಗಳ ಆರ್ಭಟ ನಡೆದಿರುವ ಬಗ್ಗೆ ವರದಿಯಾಗಿದೆ.

ಸಾಮಾನ್ಯವಾಗಿ ಆಯುಧ ಪೂಜೆಯ ಮಾರನೆ ದಿನ ನಡೆಯುವ ವಿಜಯದಶಮಿಯ ದಿನದಂದು ಮಲೆನಾಡಿಗರು ನಾಡ ಕೋವಿಗಳಿಂದ ತೆಂಗಿನಕಾಯಿಗೆ ಗುರಿ ಹೊಡೆಯುವ ಇಂಬು ಹೊಡೆಯುವಂತಹ ಪದ್ಧತಿಯನ್ನು ಆಚರಿಸುತ್ತಾರೆ. ಜಿಲ್ಲೆಯ ಮಲೆನಾಡು ಹಾಗೂ ಬಯಲು ಭಾಗದ ತಾಲೂಕುಗಳ ವ್ಯಾಪ್ತಿಯಲ್ಲಿ ವಿಜಯದಶಮಿಯ ದಿನದಂದು ಇಂದಿಗೂ ಈ ಪದ್ಧತಿಯನ್ನು ಆಚರಿಸುತ್ತಾರೆ. ನಾಡ ಬಂದೂಕು ಅಥವಾ ಕೋವಿಗಳಿಂದ ಕಾಯಿಗೆ ಗುಂಡು ಹೊಡೆಯುವ ಪದ್ಧತಿ ಸಾಂಪ್ರದಾಯದಂತೆ ನಡೆಯುತ್ತಿರುವುದರಿಂದ ಇದಕ್ಕೆ ಪೊಲೀಸ್ ಇಲಾಖೆಯ ಅನುಮತಿ ಪಡೆಯುವ ವಾಡಿಕೆಯೇ ಇಲ್ಲ ಎನ್ನಲಾಗಿದೆ.
ಆದರೆ, ಜಿಲ್ಲೆಯ ಹೆಸರಾಂತ ಧಾರ್ಮಿಕ ಕ್ಷೇತ್ರವಾಗಿರುವ ಹಾಗೂ ರಾಜ್ಯದಲ್ಲೇ ಪ್ರಸಿದ್ಧವಾಗಿರುವ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಆವರಣದಲ್ಲಿ ವಿಜಯದಶಮಿಯ ದಿನದಂದು ಪ್ರತೀ ವರ್ಷ ನಾಡಬಂದೂಕಿನೊಂದಿಗೆ, ಪಾಯಿಂಟ್‌ಗನ್‌ಗಳೂ ಆರ್ಭಟಿಸುತ್ತಿರುತ್ತವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ದೇವಾಲಯದ ಧರ್ಮದರ್ಶಿ ಮತ್ತು ಅವರ ಕುಟುಂಬಸ್ಥರು ಸೋಮವಾರ ಬೆಳಗ್ಗೆ ಇಂಬು ಹೊಡೆಯುವ ಪದ್ಧತಿ ಆಚರಿಸಿದ್ದು, ಈ ವೇಳೆ ಕೋವಿಯಲ್ಲದೇ ಪಾಯಿಂಟ್‌ಗನ್‌ಗಳಿಂದಲೂ ಗುಂಡು ಹಾರಿಸಿದ್ದಾರೆ ಎನ್ನಲಾದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಗನ್‌ಗಳು ಪರವಾನಿಗೆ ಹೊಂದಿವೆಯೇ ಅಥವಾ ಅನಧೀಕೃತ ಗನ್‌ಗಳೇ ಎಂಬುದು ತಿಳಿದು ಬಂದಿಲ್ಲ. ದೇವಾಲಯದ ಎದುರಿನ ರಸ್ತೆಯ ಬಳಿ ಮರಳಿನ ಮೂಟೆಗಳನ್ನು ಜೋಡಿಸಿಟ್ಟು ಅವುಗಳತ್ತ ಧರ್ಮದರ್ಶಿ ಸೇರಿದಂತೆ ಅವರ ಕುಟುಂಬಸ್ಥರು, ಮಹಿಳೆಯರು ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಈ ವೇಳೆ ಧರ್ಮದರ್ಶಿ ಹಾಗೂ ಅವರ ಸಹೋದರರು ಪಾಯಿಂಟ್ ಗನ್‌ಗಳಿಂದ ಗುಂಡು ಹಾರಿಸಿರುವುದು ವಿಡಿಯೋಗಳಲ್ಲಿ ಕಂಡು ಬರುತ್ತಿದೆ. ಗುಂಡು ಹಾರಿಸುತ್ತಿದ್ದ ವೇಳೆ ಅಕ್ಕಪಕ್ಕ ಭಾರೀ ಸಂಖ್ಯೆಯಲ್ಲಿ ಜನರು ಸೇರಿರುವುದು ವೀಡಿಯೊದಲ್ಲಿ ಕಂಡುಬಂದಿದೆ.

ದೇವಾಲಯದಲ್ಲಿ ವಿಜಯದಶಮಿಯನ್ನು ಪ್ರತೀ ವರ್ಷ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಈ ವೇಳೆ ಪ್ರತೀ ವರ್ಷ ನಾಡಬಂದೂಕು ಹಾಗೂ ಪಾಯಿಂಟ್‌ಗನ್‌ಗಳಿಂದ ಗುಂಡಿನ ಮಳೆಸುರಿಸಲಾಗುತ್ತಿದೆ ಎನ್ನಲಾಗಿದೆ. ಇದನ್ನು ಸ್ಥಳೀಯ ಪೊಲೀಸರಾಗಲೀ, ಜಿಲ್ಲಾಡಳಿತವಾಗಲೀ ಪ್ರಶ್ನಿಸುವ ಗೋಜಿಗೆ ಇದುವರೆಗೂ ಹೋಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಂಪ್ರದಾಯದ ಹೆಸರಿನಲ್ಲಿ ಬಂದೂಕುಗಳನ್ನು ಹೀಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹಾರಿಸಲು ಪೊಲೀಸ್ ಇಲಾಖೆ ಅನ್ನಪೂರ್ಣೇಶ್ವರಿ ದೇವಾಲಯದ ಮುಖ್ಯಸ್ಥರ ಕುಟುಂಬಕ್ಕೆ ಅನುಮತಿ ನೀಡಿದೆಯೇ? ಎಂಬುದನ್ನು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮಲೆನಾಡಿನಲ್ಲಿ ವಿಜಯದಶಮಿ ಹಬ್ಬದ ಸಂದರ್ಭ ಅಂಬುಹೊಡೆಯುವ ಪದ್ಧತಿ ಆಚರಣೆಯಲ್ಲಿದೆ. ಈ ವೇಳೆ ಕೆಲವರು ನಾಡಕೋವಿಗಳನ್ನು ಬಳಸುತ್ತಾರೆ ಇನ್ನೂ ಕೆಲವರು ಬಾಣ ಬಿಲ್ಲು ಬಳಸಿ ಗುರಿ ಹೊಡೆಯುವ ಆಚರಣೆ ಚಾಲ್ತಿಯಲ್ಲಿದೆ. ಇಂತಹ ಸಂದರ್ಭ ರಿವಾಲ್ವರ್‌ಗಳನ್ನು ಬಳಸಲು ಕಾನೂನಿನಲ್ಲಿ ಅವಕಾಶವಿಲ್ಲ. ಹೊರನಾಡು ದೇವಾಲಯದ ಆವರಣದಲ್ಲಿ ರವಿವಾರ ಅಂಬು ಹೊಡೆಯಲು ರಿವಾಲ್ವರ್ ಬಳಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದು ಕ್ರಮವಹಿಸಲಾಗುವುದು.
-ರಾಜು, ಡಿವೈಎಸ್ಪಿ, ಕೊಪ್ಪ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X