Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ-ಅಮೆರಿಕಾ ರಕ್ಷಣಾ ಸಚಿವರು ಸಹಿ...

ಭಾರತ-ಅಮೆರಿಕಾ ರಕ್ಷಣಾ ಸಚಿವರು ಸಹಿ ಹಾಕಲಿರುವ ಮಹತ್ವದ ರಕ್ಷಣಾ ಒಪ್ಪಂದ BECA ಬಗ್ಗೆ ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ27 Oct 2020 4:18 PM IST
share
ಭಾರತ-ಅಮೆರಿಕಾ ರಕ್ಷಣಾ ಸಚಿವರು ಸಹಿ ಹಾಕಲಿರುವ ಮಹತ್ವದ ರಕ್ಷಣಾ ಒಪ್ಪಂದ BECA ಬಗ್ಗೆ ಇಲ್ಲಿದೆ ಮಾಹಿತಿ

ಹೊಸದಿಲ್ಲಿ: ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ಇಂದು ಸಹಿ ಹಾಕಲಿರುವ ಹಲವು ಮಹತ್ವದ ರಕ್ಷಣಾ ಒಪ್ಪಂದಗಳಲ್ಲಿ ಪ್ರಮುಖವಾದ BECA ಕೂಡ ಸೇರಿದೆ. ಬಿಇಸಿಎ ಅಂದರೆ ಬೇಸಿಕ್ ಎಕ್ಸ್‍ಚೇಂಜ್ ಎಂಡ್ ಕೊ-ಆಪರೇಶನ್ ಅಗ್ರೀಮೆಂಟ್ ಆಗಿದೆ. ಇದರ ಭಾಗವಾಗಿ ಅಮೆರಿಕಾದ ಮಿಲಿಟರಿ ಉಪಗ್ರಹಗಳ ಮುಖಾಂತರ ಭಾರತಕ್ಕೆ ಅತ್ಯಂತ ನಿಖರ ಮಾಹಿತಿ ಹಾಗೂ ಸ್ಥಳಗಳ ಚಿತ್ರಗಳು ನೈಜ ಸಮಯ ಆಧಾರದಲ್ಲಿ (ರಿಯಲ್ ಟೈಮ್ ಬೇಸಿಸ್) ಲಭ್ಯವಾಗಲಿವೆ.

ಈ ಬಿಇಸಿಎ ಭಾರತಕ್ಕೆ ಗೌಪ್ಯ ಭೌಗೋಳಿಕ-ಬಾಹ್ಯಾಕಾಶ ಕುರಿತಾದ ದತ್ತಾಂಶ ಹಾಗೂ ಮಿಲಿಟರಿಗೆ ಮಹತ್ವವಾಗಿರುವ ಇತರ ಮಾಹಿತಿಗಳನ್ನು ಒದಗಿಸಲಿದೆ. ಈ ಒಪ್ಪಂದದ ಅನುಸಾರ ಎರಡೂ ದೇಶಗಳು ತಮ್ಮ ಭೂಪಟ, ನಾಟಿಕಲ್ ಮತ್ತು ಏರೋನಾಟಿಕಲ್ ಚಾರ್ಟ್‍ಗಳು ವಾಣಿಜ್ಯ ಮತ್ತಿತರ ಚಿತ್ರಗಳು ಹಾಗೂ ಇತರ ಕೆಲವೊಂದು ಗೌಪ್ಯವಲ್ಲದೆ ದತ್ತಾಂಶಗಳನ್ನೂ ವಿನಿಮಯ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಭಾರತಕ್ಕೆ ತನ್ನ ಮಿಲಿಟರಿ ಗುರಿಗಳನ್ನು ನಿಖರವಾಗಿ ತಲುಪಲು ಅನುವಾಗುವಂತಹ ಅತ್ಯಂತ ಸೂಕ್ಷ್ಮ ಉಪಗ್ರಹ ಮತ್ತು ಸೆನ್ಸಾರ್ ದತ್ತಾಂಶಗಳನ್ನೂ ಈ ಒಪ್ಪಂದದನ್ವಯ ಅಮೆರಿಕಾ ಭಾರತದೊಂದಿಗೆ ಹಂಚಲಿದೆ.

ಇದರಿಂದಾಗಿ ಭಾರತವು ಹಿಂದೂ ಮಹಾಸಾಗರದಲ್ಲಿ ಚೀನೀ ಯುದ್ಧನೌಕೆಗಳ ಚಲನವಲನಗಳ ಮೇಲೆ ನಿಗಾ ಇಡಬಹುದಾಗಿದೆ.

ಬಾಲಾಕೋಟ್ ದಾಳಿಯಂತಹುದೇ ಇನ್ನೊಂದು ದಾಳಿ ನಡೆದಿದ್ದೇ ಆದಲ್ಲಿ ತನ್ನ ಗುರಿ ನಿಖರವಾಗಿದೆಯೇ ಎಂದು ತಿಳಿಯಲು ಅಮೆರಿಕಾದಿಂದ ದೊರೆಯುವ ಉಪಗ್ರಹ ಚಿತ್ರ ಮತ್ತಿತರ ಮಾಹಿತಿಗಳಿಂದ ಭಾರತಕ್ಕೆ ಗೊತ್ತಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X