Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಏರ್‌ಪೋರ್ಟ್‌ನಲ್ಲಿ ‘ಸೈಬರ್...

ಮಂಗಳೂರು ಏರ್‌ಪೋರ್ಟ್‌ನಲ್ಲಿ ‘ಸೈಬರ್ ಅಪರಾಧ’ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ27 Oct 2020 9:03 PM IST
share
ಮಂಗಳೂರು ಏರ್‌ಪೋರ್ಟ್‌ನಲ್ಲಿ ‘ಸೈಬರ್ ಅಪರಾಧ’ ಕಾರ್ಯಾಗಾರ

ಮಂಗಳೂರು, ಅ.27: ಇಲ್ಲಿನ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಅಧಿಕಾರಿಗಳಿಗೆ ಸೈಬರ್ ಅಪರಾಧಗಳ ಕುರಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಸಹ್ಯಾದಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ, ಸೈಬರ್ ತಜ್ಞ ಡಾ.ಅನಂತ ಪ್ರಭು ಜಿ. ಸಮಗ್ರ ವಾಗಿ ಮಾಹಿತಿ ನೀಡಿದರು.

ಸೈಬರ್ ತಜ್ಞ ಡಾ.ಅನಂತ ಪ್ರಭು ಮಾತನಾಡಿ, ಸೈಬರ್ ದಾಳಿಗಳು ವಾಯುಯಾನ ಕ್ಷೇತ್ರಕ್ಕೆ ಅತಿದೊಡ್ಡ ಅಪಾಯಗಳಲ್ಲಿ ಒಂದಾಗಿದೆ. ನಿರ್ವಹಣಾ ವ್ಯವಸ್ಥೆಗೆ ಗಂಭೀರವಾದ ಹಾನಿಯನ್ನು ಉಂಟುಮಾಡಿ ಲಕ್ಷಾಂತರ ರೂಪಾಯಿಗಳನ್ನು ದೋಚುವುದಲ್ಲದೆ, ಉಗ್ರ ಸಂಘಟನೆಗಳು ವಿಮಾನವನ್ನು ಏರುವ ಅಗತ್ಯವೂ ಇಲ್ಲದೆ ತಮ್ಮ ಗುರಿ ಸಾಧಿಸಲು ಈ ಸೈಬರ್ ದಾಳಿಗಳು ಬಳಕೆಯಾಗುತ್ತವೆ. ಕೆಲವು ವರ್ಷಗಳಿಂದ ಈಚೆಗೆ ಸೈಬರ್ ದಾಳಿಗಳ ಪ್ರಮಾಣ ಜಾಗತಿಕವಾಗಿ ಗರಿಷ್ಠ ಏರಿಕೆ ಕಂಡಿರುವುದು ದುರಂತ ಎಂದರು.

ವಾಣಿಜ್ಯ ಉದ್ದೇಶದ ವಿಮಾನ ನಿಲ್ದಾಣಗಳಲ್ಲಿ ಸೈಬರ್ ಸುರಕ್ಷತಾ ಕ್ರಮಗಳ ಅನುಷ್ಠಾನದ ಪ್ರಮಾಣ, ‘ಐಒಟಿ’ ಮತ್ತು ಸ್ಮಾರ್ಟ್ ಸಾಧನಗಳ ಸ್ಥಾಪನೆ ಹಾಗೂ ಬಳಕೆಯಿಂದ ಒದಗುವ ದುರುದ್ದೇಶಪೂರಿತ ಬೆದರಿಕೆಗಳು, ದುರುದ್ದೇಶಪೂರಿತ ದಾಳಿಗಳಿಂದ ಆಗಬಹುದಾದ ಅಪಾಯಗಳ ವಿಶ್ಲೇಷಣೆ ಮತ್ತು ಅಪಾಯ ತಗ್ಗಿಸುವ ಕ್ರಮಗಳು, ಕಾರ್ಯಾಚರಣೆ ಮತ್ತು ಅತ್ಯಾಧುನಿಕ ವಿಮಾನ ನಿಲ್ದಾಣಗಳಲ್ಲಿ ಬಲಿಷ್ಠ ಸೈಬರ್ ಸುರಕ್ಷತೆ ಆಡಳಿತವನ್ನು ಅಭಿವೃದ್ಧಿಪಡಿಸುವ ತಂತ್ರಗಳು, ಕಾರ್ಯಾಚರಣೆ ಮೂಲಕ ಸೈಬರ್ ಸೆಕ್ಯೂರಿಟಿ ವಿಧಾನ ಬಲಪಡಿಸಿ, ಸೈಬರ್ ದಾಳಿಯ ಅಪಾಯ ನಿವಾರಿಸುವ ಕ್ರಮಗಳ ಬಗ್ಗೆ ಕಾರ್ಯಾಗಾರದಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.

ಮಂಗಳೂರಿನ ಹಳೆಯ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ವಿವಿಧ ಹಂತಗಳ ಸುಮಾರು 150 ಅಧಿಕಾರಿಗಳು ಭಾಗವಹಿಸಿದ್ದರು.

ಸಿಐಎಸ್‌ಎಫ್/ಸಿಎಎಸ್‌ಒ ಡೆಪ್ಯೂಟಿ ಕಮಾಂಡೆಂಟ್ ಕೃಷ್ಣ ಪ್ರಕಾಶ್, ಸಿಐಎಸ್‌ಎಸ್ ಸಹಾಯಕ ಕಮಾಂಡೆಂಟ್ ಸಮರ್ಥ ರಂಗಿ ನೀಲಕಂಠ್, ಸಂಪರ್ಕ ಅಧಿಕಾರಿ ಗೋಪಾಲಕೃಷ್ಣ, ಕೀರ್ತನ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X