Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತ್ಯಾಜ್ಯ ವಿಂಗಡಿಸದೆ ಪಚ್ಚನಾಡಿಗೆ...

ತ್ಯಾಜ್ಯ ವಿಂಗಡಿಸದೆ ಪಚ್ಚನಾಡಿಗೆ ತರುವಂತಿಲ್ಲ : ಮನಪಾ ಕಟ್ಟುನಿಟ್ಟಿನ ಕ್ರಮ

ವಾರ್ತಾಭಾರತಿವಾರ್ತಾಭಾರತಿ28 Oct 2020 3:11 PM IST
share
ತ್ಯಾಜ್ಯ ವಿಂಗಡಿಸದೆ ಪಚ್ಚನಾಡಿಗೆ ತರುವಂತಿಲ್ಲ :  ಮನಪಾ ಕಟ್ಟುನಿಟ್ಟಿನ ಕ್ರಮ

ಮಂಗಳೂರು, ಅ.28: ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಮಂಗಳೂರು ಮಹಾನಗರ ಪಾಲಿಕೆ, ಪಚ್ಚನಾಡಿ ಸಂಸ್ಕರಣಾ ಘಟಕಕ್ಕೆ ನಗರದ ಹೊರಗಿನಿಂದ ಬರುತ್ತಿರುವ ತ್ಯಾಜ್ಯ ವಿಂಗಡೆಯಾಗದೆ ಸ್ವೀಕರಿಸದಿರಲು ನಿರ್ಧರಿಸಿದೆ.

ಮೇಯರ್ ದಿವಾಕರ ಪಾಂಡೇಶ್ವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮನಪಾ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಈಗಾಗಲೇ ಮನೆಗಳ ತ್ಯಾಜ್ಯ ವಿಂಗಡಣೆ ಮೂಲಕ ಸಂಗ್ರಹಿಸಲು ಕ್ರಮ ವಹಿಸಲಾಗಿದೆ. ಇದೀಗ ಬಂಟ್ವಾಳ, ಉಳ್ಳಾಲ, ಕೋಟೆಕಾರು ಹಾಗೂ ಇತರ 15 ಗ್ರಾಮ ಪಂಚಾಯತ್‌ಗಳ ತ್ಯಾಜ್ಯವನ್ನು ವಿಂಗಡಿಸದೆ ತರುವ ವಾಹನಗಳನ್ನು ಪಚ್ಚನಾಡಿ ತ್ಯಾಜ್ಯ ಘಟಕಕ್ಕೆ ಪ್ರವೇಶಿದಂತೆ ಕ್ರಮ ವಹಿಸಲಾಗುವುದು ಎಂದು ಆಯುಕ್ತ ಅಕ್ಷಯ್ ಶ್ರೀಧರ್‌ರವರು ಸಭೆಯಲ್ಲಿ ತಿಳಿಸಿದರು.

ಸಭೆಯ ಆರಂಭದಲ್ಲಿ ಮೇಯರ್ ದಿವಾಕರ ಪಾಂಡೇಶ್ವರ ಮಾತನಾಡುತ್ತಾ, ಪಚ್ಚನಾಡಿ ತ್ಯಾಜ್ಯ ಕುಸಿತವಾದ ಮಂದಾರ ಪ್ರದೇಶದ ಸಂತ್ರಸ್ತ ರಿಗೆ ಪರಿಹಾರ ನೀಡುವ ಸಲುವಾಗಿ ಸರಕಾರದಿಂದ 20 ಕೋಟಿ ರೂ. ಬಿಡುಗಡೆಯಾಗಿರುವ ಬಗ್ಗೆ ಅಭಿನಂದನೆ ಸಲ್ಲಿಸಿದರು.

ಮಾಜಿ ಮೇಯರ್ ಭಾಸ್ಕರ್ ಕೂಡಾ ಅನುದಾನ ಬಿಡುಗಡೆಗೆ ಅಭಿನಂದನೆ ಸಲ್ಲಿಸುತ್ತಾ, ಸಂತ್ರಸ್ತರ ಭೂಮಿಗೆ ಉತ್ತಮ ಮೌಲ್ಯ ನೀಡಬೇಕು. ತಾತ್ಕಾಲಿಕ ವಸತಿ ಸಮುಚ್ಚಯದಲ್ಲಿ ವಾಸಿಸುತ್ತಿರುವವರಿಗೆ ಅದನ್ನ ಉಚಿತವಾಗಿ ನೀಡಬೇಕು ಎಂದು ಒತ್ತಾಯಿಸಿದರು.

ವಿಪಕ್ಷ ನಾಯಕ ಅಬ್ದುಲ್ ರವೂಫ್ ಪ್ರತಿಕ್ರಿಯಿಸಿ, ಮಂದಾರ ವಿಷಯದಲ್ಲಿ ಸರಕಾರ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದಾಗ ಸಂತ್ರಸ್ತರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಆ ಸಂದರ್ಭ ನ್ಯಾಯಾಲಯ ಪಾಲಿಕೆಗೆ ಛೀಮಾರಿ ಹಾಕಿದ್ದಲ್ಲದೆ, ಪಾಲಿಕೆಯನ್ನು ಅಡವಿಟ್ಟಾದರೂ ಪರಿಹಾರ ನೀಡಬೇಕು ಎಂದು ಆದೇಶಿಸಿದಾಗ ಸರಕಾರ ಪರಿಹಾರ ನೀಡಲೇಬೇಕಾದ ಪರಿಸ್ಥಿತಿ ಎದುರಾಯಿತು. ಇಂತಹ ಪರಿಸ್ಥಿತಿಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಮನಪಾ ಏನು ಕ್ರವು ಕೈಗೊಂಡಿದೆ ಎಂದು ಪ್ರಶ್ನಿಸಿದರು.

ಸದಸ್ಯ ಸುಧೀರ್ ಶೆಟ್ಟಿ ಮಾತನಾಡಿ, ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಕಳೆದ 20 ವರ್ಷಗಳಿಂದ 6 ಲಕ್ಷ ಮೆಟ್ರಿಕ್ ಟನ್ ಕಸ ತುಂಬಿದೆ. ಪಾಲಿಕೆಯ ಹೊರಗಿನ ಗ್ರಾಮ ಪಂಚಾಯತ್‌ಗಳಿಂದಲೂ ಇಲ್ಲಿಗೆ ಕಸ ಬರುತ್ತಿದೆ ಎಂದು ಆಕ್ಷೇಪಿಸಿದರು.

ಈ ಸಂದರ್ಭ ವಿಪಕ್ಷ ನಾಯಕರಾದ ಅಬ್ದುಲ್ ರವೂಫ್, ಸದಸ್ಯರಾದ ಶಶಿಧರ ಹೆಗ್ಡೆ ಮೊದಲಾದವರು ನಾಳೆಯಿಂದ ಪಾಲಿಕೆ ವ್ಯಾಪ್ತಿಯ ಹೊರಗಿನಿಂದ ಬರುವ ತ್ಯಾಜ್ಯವನ್ನು ನಿಷೇಧಿಸೋಣ ಎಂದರು.

ಈ ಸಂದರ್ಭ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮಾತನಾಡಿ, ತಕ್ಷಣ ಹೊರಗಿನಿಂದ ಬರುವ ತ್ಯಾಜ್ಯ ನಿಲ್ಲಿಸಿದರೆ ಅವರಿಗೂ ತೊಂದರೆ ಆಗಲಿದೆ. ಹಾಗಾಗಿ ಕಾಲಾವಕಾಶ ನೀಡಿ ಕ್ರಮ ಕೈಗೊಳ್ಳಬಹುದಾಗಿದೆ. ತಕ್ಷಣಕ್ಕೆ ಶೇ. 100ರಷ್ಟು ಕಸ ವಿಂಗಡಿಸಿಯೇ ಪಚ್ಚನಾಡಿಗೆ ತರುವಂತೆ ನೋಟೀಸು ನೀಡಲಾಗುವುದು. ಜತೆಗೆ ಪಂಚಾಯತ್‌ಗಳಿಂದ ಬಾಕಿ ಇರುವ ತ್ಯಾಜ್ಯ ಸಂಸ್ಕರಣಾ ಶುಲ್ಕವನ್ನು ಪಾವತಿಸುವಂತೆಯೂ ನೋಟಿಸ್ ನಲ್ಲಿ ತಿಳಿಸಲಾಗುವುದು ಎಂದರು.

ಸಭೆಯಲ್ಲಿ ಉಪ ಮೇಯರ್ ಜಾನಕಿ ಯಾನೆ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್ ಕುಮಾರ್, ಪೂರ್ಣಿಮಾ, ಕಿರಣ್ ಕುಮಾರ್, ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು.

ಅಧಿಕಾರಿಗಳು ಪಕ್ಷಾಂತರವಾಗಿದ್ದಾರೆಯೇ ?

ರಾಜ್ಯದಲ್ಲಿ ಇತರ ಪಕ್ಷಗಳಿಂದ ಪಕ್ಷಾಂತರಗೊಂಡ ಸರಕಾರ ಆಡಳಿತ ನಡೆಸುತ್ತಿದೆ. ಅದರಂತೆ, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳೂ ಪಕ್ಷಾಂತರ ಗೊಂಡಿದ್ದಾರೆಯೇ ಎಂಬ ಸಂಶಯ ನನಗಿದೆ ಎಂದು ಮಾಜಿ ಮೇಯರ್ ಭಾಸ್ಕರ ಕೆ ಪ್ರಶ್ನಿಸಿದ ಪ್ರಸಂಗ ಸಭೆಯಲ್ಲಿ ನಡೆಯಿತು.

ಇತ್ತೀಚೆಗೆ ಅಳಕೆ ಮಾರುಕಟ್ಟೆ ಉದ್ಘಾಟನೆ ಸಂದರ್ಭ ವಿಪಕ್ಷ ನಾಯಕರ ಭಾವಚಿತ್ರವನ್ನು ಫ್ಲೆಕ್ಸ್‌ನಲ್ಲಿ ಹಾಕಲಾಗಿಲ್ಲ. ನಾವು 30 ವರ್ಷ ಆಡಳಿತ ಮಾಡಿದ್ದರೂ ವಿಪಕ್ಷವನ್ನು ಯಾವತ್ತೂ ಕಡೆಗಣಿಸಿಲ್ಲ. ಮನಪಾದಲ್ಲಿ ಸಂಜೆ ಹೊತ್ತು ಸಭೆ ನಡೆಸಲಾದರೂ ವಿಪಕ್ಷ ನಾಯಕರನ್ನೂ ಕರೆಯುತ್ತಿಲ್ಲ. ವಿಪಕ್ಷದ ಅಗತ್ಯವಿಲ್ಲ ಎಂದಾದರೆ ಪರಿಷತ್ ಸಭೆಯಲ್ಲೂ ನಾವು ಭಾಗವಹಿಸುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮಾಜಿ ಮೇಯರ್ ಶಶಿಧರ ಹೆಗ್ಡೆಯವರೂ ಅಸಮಾಧಾನ ವ್ಯಕ್ತಪಡಿಸುತ್ತಾ, ಹಿಂದಿನಿಂದಲೂ ಮನಪಾದಲ್ಲಿ ಶಿಷ್ಟಾಚಾರದ ಪ್ರಕಾರ ವಿಪಕ್ಷಕ್ಕೂ ಗೌರವ ನೀಡಲಾಗುತ್ತಿತ್ತು. ಆದರೆ ಪ್ರಸ್ತುತ ಪಕ್ಷದ ಜಿಲ್ಲಾಧ್ಯಕ್ಷರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಆದರೆ ವಿಪಕ್ಷ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ಷೇಪಿಸಿದರು.

ಈ ಸಂದರ್ಭ ಕೆಲ ನಿಮಿಷಗಳ ಕಾಲ ಸಭೆಯಲ್ಲಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಾಗ ವಿಪಕ್ಷ ನಾಯಕ ಅಬ್ದುಲ್ ರವೂಫ್ ಪ್ರತಿಕ್ರಿಯಿಸಿ, ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸಿ, ಶಿಷ್ಟಾಚಾರ ಪಾಲಿಸಿ ಎಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X