Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಂತ್ರಜ್ಞ ಉಡುಪಿ ಶ್ರೀನಿವಾಸ್‌ಗೆ...

ತಂತ್ರಜ್ಞ ಉಡುಪಿ ಶ್ರೀನಿವಾಸ್‌ಗೆ ರಾಜ್ಯೋತ್ಸವದ ಗರಿ

ವಾರ್ತಾಭಾರತಿವಾರ್ತಾಭಾರತಿ28 Oct 2020 6:55 PM IST
share
ತಂತ್ರಜ್ಞ ಉಡುಪಿ ಶ್ರೀನಿವಾಸ್‌ಗೆ ರಾಜ್ಯೋತ್ಸವದ ಗರಿ

ಉಡುಪಿ, ಅ. 28: ಹೊಂಗೆ ಎಣ್ಣೆಯನ್ನು ವಾಣಿಜ್ಯಿಕ ರೀತಿಯಲ್ಲಿ ಬಳಕೆಗೆ ತರಲು ಶ್ರಮಿಸಿದ ಉಡುಪಿ ಮೂಲದ ಬೆಂಗಳೂರು ನಿವಾಸಿ ತಂತ್ರಜ್ಞ ಪ್ರೊ. ಉಡುಪಿ ಶ್ರೀನಿವಾಸ್ ಅವರಿಗೆ ಈ ಬಾರಿಯ ವಿಜ್ಞಾನ-ತಂತ್ರಜ್ಞಾನ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಉಡುಪಿ ಚಿಟ್ಪಾಡಿಯ ಬೈಲೂರಿನವರಾದ 73 ವರ್ಷ ಪ್ರಾಯದ ಉಡುಪಿ ಶ್ರೀನಿವಾಸ್, ಆರಂಭಿಕ ಶಿಕ್ಷಣವನ್ನು ಉಡುಪಿಯ ಮಹಾತ್ಮ ಗಾಂಧಿ ಸ್ಕೂಲ್ , ಕ್ರಿಶ್ಚಿಯನ್ ಹೈ ಸ್ಕೂಲ್ ಹಾಗು ಎಂಜಿಎಂ ಕಾಲೇಜಿಗಳಲ್ಲಿ ಮುಗಿಸಿ 1969ರಲ್ಲಿ ಮದರಾಸಿನ ಐಐಟಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಬಿಟೆಕ್ ಪದವಿಯನ್ನು ಪಡೆದಿದ್ದು, ಅಲ್ಲೇ 1971ರಲ್ಲಿ ಎಂಟೆಕ್ ಪದವಿ ಪೂರ್ಣಗೊಳಿಸಿದ್ದರು. 1976ರಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸಾಯನ್ಸ್‌ನಲ್ಲಿ ಪಿಎಚ್‌ಡಿ ಪದವಿ ಪಡೆದ ಅವರು ಅಲ್ಲೇ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಾಧ್ಯಾಪಕರೂ, ವಿಭಾಗ ಮುಖ್ಯಸ್ಥರಾಗಿ 2012ರಲ್ಲಿ ಸೇವಾ ನಿವೃತ್ತರಾದರು. ಆ ಬಳಿಕ ಅವರು ಬೆಂಗಳೂರಿನಲ್ಲೇ ನೆಲೆಸಿದ್ದಾರೆ.

ಉಡುಪಿ ಶ್ರೀನಿವಾಸ್ ಅವರ 35ಕ್ಕೂ ಅಧಿಕ ಸಂಶೋಧನಾ ಪ್ರಬಂಧಗಳು ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ. 50ಕ್ಕೂ ಅಧಿಕ ಪ್ರಬಂಧಗಳನ್ನು ಅಂತಾರಾಷ್ಟ್ರೀಯ ಸೆಮಿನಾರುಗಳಲ್ಲಿ ಮಂಡಿಸಿದ್ದಾರೆ. ಇವರು ವೈಬ್ರೇಶನ್ ಅನಲಿಸಿಸ್ ಮತ್ತು ಮೆಶಿನ್ ಡೈನಾಮಿಕ್ಸ್‌ನಲ್ಲಿ ವಿಶೇಷ ಪರಿಣತಿ ಹೊಂದಿ ಕಾರ್ಯನಿರ್ವಹಿಸಿದ್ದಾರೆ.

ತಮ್ಮ ಸಂಶೋಧನೆ ಹಾಗೂ ಅನುಭವಗಳಿಂದ ಕೈಗಾರಿಕಾ ವಲಯಕ್ಕೆ ಸಲಹೆಗಳನ್ನು ನೀಡುವ ಜತೆಗೆ ಪರಿಸರಕ್ಕೆ ಪೂರಕವಾದ ಹೊಂಗೆ ಎಣ್ಣೆಯ ಬಳಕೆಯನ್ನು ಪೆಟ್ರೋಲಿಯಂ ಉತ್ಪನ್ನಗಳೊಂದಿಗೆ ಚಾಲ್ತಿಗೆ ತರುವಲ್ಲಿ ಅವರು ವಿಶೇಷ ಪರಿಶ್ರಮ ಪಟ್ಟಿದ್ದಾರೆ. ಹೊಂಗೆ ಎಣ್ಣೆಯನ್ನು ಪೆಟ್ರೋಲಿಯಂ ಉತ್ಪನ್ನ ಗಳೊಂದಿಗೆ ಮಿಶ್ರಣ ಮಾಡಿ ಬಳಸಲಾಗುತ್ತಿದೆ. ಇದು ಪರಿಸರ ಪೂರಕವಾದ ಒಂದು ಪ್ರಯೋಗವಾಗಿದೆ.

‘ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಸಂತೋಷವಾಗಿದೆ. ಸಮಾಜಕ್ಕೆ ನನ್ನಿಂದಾದ ಸೇವೆಯನ್ನು ಸಲ್ಲಿಸಿದ್ದೇನೆ’ ಎಂದು ಶ್ರೀನಿವಾಸ್ ತನ್ನನ್ನು ಸಂಪರ್ಕಿಸಿದ ಪತ್ರಕರ್ತರೊಂದಿಗೆ ಪ್ರಶಸ್ತಿಯ ಸಂತಸವನ್ನು ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X