Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಕ್ಯಾನ್ಸರ್ ರೋಗ ಮತ್ತು ನಿಯಮಿತ ವ್ಯಾಯಾಮ

ಕ್ಯಾನ್ಸರ್ ರೋಗ ಮತ್ತು ನಿಯಮಿತ ವ್ಯಾಯಾಮ

ವಾರ್ತಾಭಾರತಿವಾರ್ತಾಭಾರತಿ28 Oct 2020 7:11 PM IST
share
ಕ್ಯಾನ್ಸರ್ ರೋಗ ಮತ್ತು ನಿಯಮಿತ ವ್ಯಾಯಾಮ

ದೈಹಿಕ ಕ್ಷಮತೆಯು ನಮ್ಮ ಐಚ್ಛಿಕ ಆಯ್ಕೆಯಾಗಬಾರದು, ಬದಲು ಅದು ಜೀವನಶೈಲಿ ಅಭ್ಯಾಸವಾಗಿರಬೇಕು. ವ್ಯಾಯಾಮವು ಐಚ್ಛಿಕವಾಗಿರಬಾರದು,ಅದು ನಮ್ಮ ದಿನಚರಿಯ ಕಡ್ಡಾಯ ಭಾಗವಾಗಿರಬೇಕು. ಒಟ್ಟಾರೆ ಬಲ ಮತ್ತು ಕ್ಷಮತೆಯನ್ನು ಹೆಚ್ಚಿಸುವ ಜೊತೆಗೆ ಇತರ ಹಲವು ಅಚ್ಚರಿದಾಯಕ ಲಾಭಗಳನ್ನೂ ವ್ಯಾಯಾಮವು ನಮಗೆ ನೀಡುತ್ತದೆ. ನಿಯಮಿತವಾಗಿ ವ್ಯಾಯಾಮ ಮಾಡುವುದು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ ಎನ್ನುವುದನ್ನು ಇತ್ತೀಚಿಗೆ ಸಂಶೋಧಕರು ಕಂಡುಕೊಂಡಿದ್ದಾರೆ. ಇದನ್ನು ನೀವು ನಂಬದಿರಬಹುದು,ಆದರೆ ಸಂಶೋಧನೆಯು ಇದನ್ನು ಸಾಬೀತುಗೊಳಿಸಿದೆ.

ಕ್ಯಾನ್ಸರ್ ಮಾರಣಾಂತಿಕ ಕಾಯಿಲೆಗಳಲ್ಲಿ ಒಂದಾಗಿದ್ದು,ತಮ್ಮ ಶರೀರದಲ್ಲಿ ಕ್ಯಾನ್ಸರ್ ಮಾರಿಯನ್ನು ಆಹ್ವಾನಿಸಲು ಯಾರೂ ಬಯಸುವುದಿಲ್ಲ. ಕ್ಯಾನ್ಸರ್‌ನೊಂದಿಗೆ ಬದುಕು ಅತ್ಯಂತ ಕಷ್ಟದಾಯಕವಾಗಿದೆ ಮತ್ತು ಕ್ಯಾನ್ಸರ್ ರೋಗಿಗಳಿಗೆ ಈ ಹೋರಾಟ ಚೆನ್ನಾಗಿ ಗೊತ್ತು. ಕ್ಯಾನ್ಸರ್‌ನಿಂದ ಬಳಲುತ್ತಿರುವವರು ತಮ್ಮ ಶರೀರದಲ್ಲಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಲು ಪ್ರತಿದಿನ ವ್ಯಾಯಾಮವನ್ನು ಮಾಡಲೇಬೇಕು.

ದೈಹಿಕವಾಗಿ ಕ್ರಿಯಾಶೀಲರಾಗಿರುವ ಕ್ಯಾನ್ಸರ್ ರೋಗಿಗಳು ಇತರರಿಗಿಂತ ಉತ್ತಮ ಮುನ್ನರಿವನ್ನು ಹೊಂದಿರುತ್ತಾರೆ ಎನ್ನುವುದನ್ನು ಸಂಶೋಧನೆಗಳು ತೋರಿಸಿವೆ. ವ್ಯಾಯಾಮವು ಕ್ಯಾನ್ಸರ್ ಕೋಶಗಳ ಮೇಲೆ ದಾಳಿ ನಡೆಸಲು ಚಯಾಪಚಯ ದರವನ್ನು ಹೆಚ್ಚಿಸುವುದು ಇದಕ್ಕೆ ಕಾರಣ.

ಸ್ವೀಡನ್ ನ ಕ್ಯಾರೊಲಿಂಸ್ಕಾ ಇನ್‌ಸ್ಟಿಟ್ಯೂಟ್ ಇಲಿಗಳ ಮೇಲೆ ನಡೆಸಿರುವ ಪ್ರಯೋಗದಲ್ಲಿ ವ್ಯಾಯಾಮವು ಶರೀರದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ಕಡಿಮೆ ಮಾಡುತ್ತದೆ ಎನ್ನುವುದನ್ನು ತೋರಿಸಿದೆ. ದೈಹಿಕ ಚಟುವಟಿಕೆಯು ಕ್ಯಾನ್ಸರ್ ಕೋಶಗಳ ಮೇಲೆ ದಾಳಿ ನಡೆಸುವ ಸೈಟೊಟಾಕ್ಸಿಕ್ ಟಿ ಸೆಲ್‌ಗಳು ಅಥವಾ ನಿರೋಧಕ ಕೋಶಗಳ ಚಯಾಪಚಯವನ್ನು ಬದಲಿಸುತ್ತದೆ. ಬೆಳಗ್ಗಿನ ಸಮಯ ವ್ಯಾಯಾಮ ಮಾಡುವುದರಿಂದ ಸ್ತನ ಕ್ಯಾನ್ಸರ್ ತಡೆಗಟ್ಟಬಹುದು ಎನ್ನುವುದನ್ನು ಹಲವಾರು ಅಧ್ಯಯನಗಳು ತಿಳಿಸಿವೆ.

ವ್ಯಾಯಾಮದ ಧನಾತ್ಮಕ ಪರಿಣಾಮಗಳ ಹಿಂದಿನ ಜೀವಶಾಸ್ತ್ರವು ಶರೀರವು ಹೇಗೆ ಆರೋಗ್ಯವನ್ನು ಕಾಯ್ದುಕೊಳ್ಳುತ್ತದೆ ಎಂಬ ಬಗ್ಗೆ ಒಳನೋಟಗಳನ್ನು ನೀಡಬಲ್ಲದು ಹಾಗೂ ಕ್ಯಾನ್ಸರ್‌ಗೆ ಚಿಕಿತ್ಸೆಗಳನ್ನು ರೂಪಿಸಲು ಮತ್ತು ಅವುಗಳನ್ನು ಹೆಚ್ಚು ಉತ್ತಮಗೊಳಿಸಲು ನೆರವಾಗಬಲ್ಲದು ಎನ್ನುತ್ತಾರೆ ಸಂಶೋಧಕರು. ಸೈಟೊಟಾಕ್ಸಿಕ್ ಟಿ ಸೆಲ್‌ಗಳು ಪ್ರಾಥಮಿಕವಾಗಿ ಬಿಳಿಯ ರಕ್ತಕೋಶಗಳಾಗಿದ್ದು,ಒಟ್ಟಾರೆ ಆರೋಗ್ಯವನ್ನು ಕಾಯ್ದುಕೊಳ್ಳುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತವೆ. ಇಲಿಯ ಮೇಲೆ ಪ್ರಯೋಗ ನಡೆಸುವ ಮುನ್ನ ಸಂಶೋಧಕರು ಸೈಟೊಟಾಕ್ಸಿಕ್ ಟಿ ಸೆಲ್‌ಗಳ ಮಹತ್ವವನ್ನು ಅರಿಯಲು ಅವುಗಳನ್ನು ಇಲಿಯ ಶರೀರದಿಂದ ತೆಗೆದುಹಾಕಿದ್ದರು. ವ್ಯಾಯಾಮದಿಂದ ಕ್ಯಾನ್ಸರ್ ಕೋಶಗಳನ್ನು ದಮನಿಸುವಲ್ಲಿ ಟಿ ಸೆಲ್‌ಗಳು ಮಹತ್ವದ್ದಾಗಿವೆ ಎನ್ನುವುದನ್ನು ಅವರು ಕಂಡುಕೊಂಡಿದ್ದಾರೆ. ಕೆಲವು ಚಯಾಪಚಯಗಳು ಟಿ ಸೆಲ್‌ಗಳ ಚಯಾಪಚಯವನ್ನು ಬದಲಿಸುವ ಮೂಲಕ ಅವುಗಳ ಚಟುವಟಿಕೆಯನ್ನು ಹೆಚ್ಚಿಸುತ್ತವೆ. ಇಲಿ ಮಾತ್ರವಲ್ಲ,ಸಂಶೋಧಕರು ಮಾನವರ ಮೇಲೂ ಈ ಪ್ರಯೋಗವನ್ನು ನಡೆಸಿದ್ದು,ಫಲಿತಾಂಶಗಳಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿರಲಿಲ್ಲ.

ವ್ಯಾಯಾಮವು ಕ್ಯಾನ್ಸರ್ ವಿರುದ್ಧ ಹೋರಾಡುವ ನಿರೋಧಕ ಕೋಶಗಳನ್ನು ಕ್ರಿಯಾಶೀಲಗೊಳಿಸುವ ಹಲವಾರು ಮಾಲೆಕ್ಯೂಲ್‌ಗಳು ಮತ್ತು ಮೆಟಾಬೊಲೈಟ್‌ಗಳ ಉತ್ಪಾದನೆಯ ಮೇಲೆ ಪರಿಣಾಮವನ್ನು ಹೊಂದಿದೆ ಮತ್ತು ತನ್ಮೂಲಕ ಕ್ಯಾನ್ಸರ್ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ ಎನ್ನುವುದನ್ನು ಸಂಶೋಧನೆಯು ತೋರಿಸಿದೆ. ನಮ್ಮ ಜೀವನಶೈಲಿಯು ನಮ್ಮ ನಿರೋಧಕ ವ್ಯವಸ್ಥೆಯ ಮೇಲೆ ಹೇಗೆ ಪರಿಣಾಮವನ್ನು ಬೀರುತ್ತದೆ ಎನ್ನುವುದನ್ನು ಆಳವಾಗಿ ತಿಳಿದುಕೊಳ್ಳಲು ಸಂಶೋಧನೆಯ ಫಲಿತಾಂಶಗಳು ನೆರವಾಗಬಹುದು ಮತ್ತು ಕ್ಯಾನ್ಸರ್ ವಿರುದ್ಧ ಹೊಸ ಚಿಕಿತ್ಸಾ ಕ್ರಮಗಳನ್ನು ರೂಪಿಸಲು ಇಂಬು ನೀಡಬಹುದು ಎನ್ನುತ್ತಾರೆ ಸಂಶೋಧಕರು.

ವ್ಯಾಯಾಮವು ಕ್ಯಾನ್ಸರ್ ರೋಗಿಗಳ ಪಾಲಿಗೆ ಮುಖ್ಯವಾಗಿದೆ ಮತ್ತು ಪರಿಣಾಮಕಾರಿಯಾಗಿದೆ ಎನ್ನುವುದನ್ನು ಸಂಶೋಧನೆಯು ಸಿದ್ಧಪಡಿಸಿದೆ. ವ್ಯಾಯಾಮವನ್ನು ನಮ್ಮ ದಿನಚರಿಯ ಕಡ್ಡಾಯ ಭಾಗವಾಗಿಸಿಕೊಳ್ಳುವ ಅಗತ್ಯವಿದೆ. ದಿನಕ್ಕೆ ಕನಿಷ್ಠ 40 ನಿಮಿಷಗಳ ವ್ಯಾಯಾಮವು ಶರೀರದ ಆರೋಗ್ಯವನ್ನು ಸುಸ್ಥಿತಿಯಲ್ಲಿರಿಸುತ್ತದೆ ಎಂದು ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X