Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲೋಕಾಯುಕ್ತ ಬದಲು ಎಸಿಬಿ ರಚಿಸಿ...

ಲೋಕಾಯುಕ್ತ ಬದಲು ಎಸಿಬಿ ರಚಿಸಿ ಹಲ್ಲಿಲ್ಲದ ಹಾವಿನಂತೆ ಮಾಡಿದ ಸಿದ್ದರಾಮಯ್ಯ: ಬಿಜೆಪಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ28 Oct 2020 7:36 PM IST
share
ಲೋಕಾಯುಕ್ತ ಬದಲು ಎಸಿಬಿ ರಚಿಸಿ ಹಲ್ಲಿಲ್ಲದ ಹಾವಿನಂತೆ ಮಾಡಿದ ಸಿದ್ದರಾಮಯ್ಯ: ಬಿಜೆಪಿ ಟೀಕೆ

ಬೆಂಗಳೂರು, ಅ.28: ಸಿದ್ದರಾಮಯ್ಯ, ಭ್ರಷ್ಟಾಚಾರದ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತಿದ್ದ ಲೋಕಾಯುಕ್ತ ಸಂಸ್ಥೆಯ ಬದಲಾಗಿ ಎಸಿಬಿ ರಚಿಸಿ ಹಲ್ಲಿಲ್ಲದ ಹಾವಿನಂತೆ ಮಾಡಿದ ಕೀರ್ತಿ ನಿಮಗೆ ಸಲ್ಲಬೇಕು. ಇದೆಲ್ಲಾ ನಿಮ್ಮ ಹಾಗು ನಿಮ್ಮ ಪಕ್ಷದ ಭ್ರಷ್ಟಾಚಾರದ ಮಹಾನ್ ಇತಿಹಾಸವನ್ನು ರಕ್ಷಿಸಲು ಮಾಡಿಕೊಂಡ ಕುಟಿಲ ಉಪಾಯ ಅಲ್ಲವೇ? ಎಂದು ಬಿಜೆಪಿ ಸರಣಿ ಟ್ವೀಟ್‍ಗಳನ್ನು ಮಾಡುವ ಮೂಲಕ ಟೀಕಿಸಿದೆ.

ಸಿದ್ದರಾಮಯ್ಯ, ನಿಮ್ಮ ಮೇಲೆ 60ಕ್ಕೂ ಅಧಿಕ ಭ್ರಷ್ಟಾಚಾರದ ಪ್ರಕರಣಗಳಿದ್ದವು. ಆಡಳಿತ ಯಂತ್ರ ದುರುಪಯೋಗಪಡಿಸಿಕೊಂಡು ಹಲ್ಲಿಲ್ಲದ ಹಾವಿನಂತಿರುವ ಎಸಿಬಿಯ ಮೂಲಕ ಬಹುತೇಕ ಪ್ರಕರಣಗಳಿಗೆ ನೀವೇ ಅಂತ್ಯ ಹಾಡಿಸಿದಿರಿ. ಭ್ರಷ್ಟಾಚಾರದಲ್ಲಿ ರಾಜ್ಯವನ್ನು ಉನ್ನತ ಸ್ಥಾನಕ್ಕೇರಿಸಿದ್ದೇ ನಿಮ್ಮ ಸಾಧನೆಯಲ್ಲವೇ? ಎಂದು ಬಿಜೆಪಿ ಟೀಕಿಸಿದೆ.

ಸಿದ್ದರಾಮಯ್ಯ, 2016-17ನೇ ಸಾಲಿನಲ್ಲಿ ನೀವು ಮಂಡಿಸಿದ್ದ ಬಜೆಟ್‍ನಲ್ಲಿ ವಿವಿಧ ಇಲಾಖೆಗಳು 35 ಸಾವಿರ ಕೋಟಿ ರೂ.ಭ್ರಷ್ಟಾಚಾರ ನಡೆಸಿರುವುದು ಸಿಎಜಿ ವರದಿಯಲ್ಲಿ ಬಹಿರಂಗಗೊಂಡಿತ್ತು. ಹೋದಲ್ಲಿ ಬಂದಲ್ಲಿ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವುದು ಮತ್ತೊಮ್ಮೆ ಭಾರೀ ಭ್ರಷ್ಟಾಚಾರ ಮಾಡಲೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಸಿದ್ದರಾಮಯ್ಯ, ಬಡವರು ಹಸಿವಿನಿಂದಿರಬಾರದು ಎಂದು ಇಂದಿರಾ ಕ್ಯಾಂಟೀನ್ ಜಾರಿಗೆ ತಂದಿರಿ, ಆದರೆ ಬಡವರ ಹಸಿವಿಗಿಂತ ಹೆಚ್ಚಾಗಿ ನೀವು ತುಂಬಿಸಿದ್ದು ಮಾತ್ರ ಶ್ರೀಮಂತರ ತಿಜೋರಿಯನ್ನು. ಬಡವರ ಹೊಟ್ಟೆ ತುಂಬಿಸುತ್ತೇನೆಂದು ಕೋಟ್ಯಂತರ ರೂಪಾಯಿಗಳ ಭ್ರಷ್ಟಾಚಾರ ಮಾಡಿರುವ ನಿಮ್ಮನ್ನು ಬಡವರು ಕ್ಷಮಿಸಬಹುದೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಸಿದ್ದರಾಮಯ್ಯ, ಕರ್ನಾಟಕ್ಕೆ ನಿಮ್ಮ ಕೊಡುಗೆ ಒಮ್ಮೆ ಸ್ಮರಿಸಿಕೊಳ್ಳಿ. ಭ್ರಷ್ಟಾಚಾರ, ಹಿಂದೂ ಕಾರ್ಯಕರ್ತರ ಕೊಲೆ, ರೈತರ ಆತ್ಮಹತ್ಯೆ, ಸಮಾಜ ಒಡೆದದ್ದು, ಮೈತ್ರಿ ಸರಕಾರಕ್ಕಾಗಿ ನೀವು ಬಾಗಿಲು ಬಡಿದಿದ್ದ ದೇವೇಗೌಡರೇ ನಿಮ್ಮ ಸರಕಾರ ಭ್ರಷ್ಟಾತಿ ಭ್ರಷ್ಟ ಸರಕಾರ ಎಂದು ಜರೆದಿದ್ದು ನೆನಪಿದೆಯೇ? ಎಂದು ಬಿಜೆಪಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X