Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ್ಯಾಯವಾದಿ ಎಂ.ಕೆ.ವಿಜಯಕುಮಾರ್‌ಗೆ ಒಲಿದ...

ನ್ಯಾಯವಾದಿ ಎಂ.ಕೆ.ವಿಜಯಕುಮಾರ್‌ಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ28 Oct 2020 8:32 PM IST
share
ನ್ಯಾಯವಾದಿ ಎಂ.ಕೆ.ವಿಜಯಕುಮಾರ್‌ಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಕಾರ್ಕಳ, ಅ.28: ನ್ಯಾಯಾಂಗ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕಾರ್ಕಳದ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್ ಅವರನ್ನು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಳೆದ 52 ವರ್ಷಗಳ ಸುಧೀರ್ಘ ಕಾಲದಿಂದ ವಕೀಲ ವೃತ್ತಿ ಮಾಡಿಕೊಂಡು ಬಂದಿರುವ ಎಂ.ಕೆ.ವಿಜಯ ಕುಮಾರ್ ಅವರ 55 ಮಂದಿ ಶಿಷ್ಯರು ಇದೀಗ ದೇಶದ ವಿವಿಧೆಡೆಗಳಲ್ಲಿ ನ್ಯಾಯವಾದಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಯಾಗಿರುವ ಅಬ್ದುಲ್ ನಝೀರ್ ಕೂಡ ಇವರ ಶಿಷ್ಯರೇ.

ಸದಾ ಲವಲವಿಕೆಯಿಂದ ಜನತೆಯ ಜೊತೆ ಬೆರೆಯುವ ಇವರು, ಎಲ್ಲಾ ಕ್ಷೇತ್ರಗಳಲ್ಲೂ ಕ್ರೀಯಾಶೀಲ ಸಾಧಕರೆನಿಸಿಕೊಂಡಿದ್ದಾರೆ. ವಕೀಲ ವೃತ್ತಿಯನ್ನು ಜೀವನದ ಪ್ರಮುಖ ವೃತ್ತಿಯನ್ನಾಗಿಸಿಕೊಂಡರೂ, ಉಳಿದ ಕ್ಷೇತ್ರಗಳಲ್ಲಿ ಅವರ ಸಾಧನೆ ಸಣ್ಣದೇನಲ್ಲ. ಜಿಲ್ಲೆಯಲ್ಲಿ, ಅದರಲ್ಲೂ ಕಾರ್ಕಳ ತಾಲೂಕಿನಲ್ಲಿ ಎಂ.ಕೆ. ವಿಜಯಕುಮಾರ್ ಹೆಸರು ಕೇಳದವರೇ ಇರಲಿಕ್ಕಿಲ್ಲ. ನಿರಂತರ ಹಸನ್ಮುಖಿಯಾಗಿ ಎಲ್ಲರೊಂದಿಗೆ ಬೆರೆಯುವ ಇವರು ತಮ್ಮ ಸಹಕಾರ ಮನೋಭಾವದಿಂದ ಎಲ್ಲರ ಮನಸ್ಸನ್ನು ಗೆಲ್ಲುತ್ತಾರೆ.

ಮೈಸೂರು ಸಂಸ್ಥಾನದ ಆಸ್ಥಾನ ವಿದ್ವಾನ್ ಸುಬ್ಬಯ್ಯ ಶಾಸ್ತ್ರಿ ಮತ್ತು ಮಿಜಾರು ಕನಕಬೆಟ್ಟು ಮನೆತನದ ಲಕ್ಷ್ಮೀಮತಿ ಅಮ್ಮನವರ ಆರನೇ ಪುತ್ರನಾಗಿ 1944ರ ಜು.6ರಂದು ಜನಿಸಿದ ವಿಜಯಕುಮಾರ್, ಆರಂಭಿಕ ಶಿಕ್ಷಣವನ್ನು ಮೂಡಬಿದರೆ, ಕಾರ್ಕಳ, ಪೆರ್ವಾಜೆ, ಹಿರಿಯಂಗಡಿ, ಬೆಂಗಳೂರಿನಲ್ಲಿ ಪಡೆದಿದ್ದು, ಬಿಎಸ್ಸಿ ಪದವಿ ಹಾಗೂ ಕಾನೂನು ಪದವಿಯನ್ನು ಬೆಂಗಳೂರಿನ ಸರಕಾರಿ ಕಾನೂನು ಕಾಲೇಜಿನಿಂದ ಪಡೆದಿದ್ದರು.
1967ರಲ್ಲಿ ಕಾನೂನು ಪದವಿ ಮುಗಿಸಿ ಮಂಗಳೂರಿನ ಅಂದಿನ ಪ್ರಸಿದ್ಧ ಸಿವಿಲ್ ನ್ಯಾಯವಾದಿ ಮಂಜಯ್ಯ ಹೆಗ್ಡೆ ಅವರ ಶಿಷ್ಯರಾಗಿ ವಕೀಲಿ ವೃತ್ತಿ ಬದುಕು ಪ್ರಾರಂಭಿಸಿದರು. 1969ರಿಂದ ಅವರು ಸ್ವತಂತ್ರವಾಗಿ ವಕೀಲಿ ವೃತ್ತಿಯಲ್ಲಿದ್ದಾರೆ.

ತಮ್ಮ ವೃತ್ತಿ ಬದುಕಿನಲ್ಲಿ ಸಾಕಷ್ಟು ಎತ್ತರಕ್ಕೇರುವುದರ ಜೊತೆಗೆ ರಾಜಕೀಯ ದಲ್ಲೂ ಸಕ್ರಿಯರಾಗಿದ್ದಾರೆ. ಕಾರ್ಕಳದ ಹಲವು ಸಂಘಸಂಸ್ಥೆಗಳಲ್ಲಿ ಪದಾಧಿಕಾರಿ ಯಾಗಿ ಸಾರ್ವಜನಿಕ ರಂಗದಲ್ಲೂ ಸಕ್ರೀಯರಾಗಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ನಾಯಕರಾಗಿರುವ ಇವರು ನಾಲ್ಕು ಬಾರಿ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿ ಪರಾಭವ ಅನುಭವಿಸಿದ್ದಾರೆ. ಆದರೂ ರಾಜಕೀಯ ಕ್ಷೇತ್ರದಲ್ಲಿ ನೇಪಥ್ಯಕ್ಕೆ ಸರಿಯದೇ ಜನತೆಗೆ ನಿರಂತರ ಸೇವೆ ಒದಗಿಸಿದ್ದಾರೆ. ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ. 1977ರಲ್ಲಿ ಪ್ರಿಯಾಕಾರಿಣಿ ಅವರನ್ನು ವಿವಾಹವಾಗಿರುವ ಎಂ.ಕೆ.ವಿಜಯಕುಮಾರ್‌ಗೆ ಇಬ್ಬರು ಪುತ್ರರಿದ್ದಾರೆ.

''ಐವತ್ತು ವರ್ಷಗಳ ಕಾರ್ಯಸಾಧನೆ ವೃತ್ತಿ ಜೀವನದಲ್ಲಿ ತುಂಬು ತೃಪ್ತಿ ತಂದಿದೆ. ಹಲವು ಮಂದಿ ನನ್ನ ಶಿಷ್ಯರು ಇಂದು ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳಾಗಿ ಮೂಡಿ ಬಂದಿದ್ದಾರೆ. ಸುಪ್ರೀಂ ಕೋರ್ಟಿನ ಪ್ರಸಕ್ತ ನ್ಯಾಯಾಧೀಶರಾದ ಅಬ್ದುಲ್ ನಝೀರ್ ನನ್ನ ಶಿಷ್ಯರಲ್ಲಿ ಒಬ್ಬರು ಎನ್ನುವುದು ಬಹಳ ಆತ್ಮಾಭಿಮಾನದ ಸಂಗತಿ. ನನ್ನನ್ನು ಗುರುತಿಸಿದ ರಾಜ್ಯ ಸರಕಾರಕ್ಕೆ ಅಭಿನಂದನೆಗಳು''
-ಎಂ.ಕೆ.ವಿಜಯ ಕುಮಾರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X