Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವತಿ ಮೊಗದಲ್ಲಿ ಮೂಡಿದ ಸಿಂಹ ! :...

ಯುವತಿ ಮೊಗದಲ್ಲಿ ಮೂಡಿದ ಸಿಂಹ ! : ಸೌಂದರ್ಯ ಕಲಾವಿದೆ ಚೇತನಾ ಕೈಚಳಕಕ್ಕೆ ವ್ಯಾಪಕ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ29 Oct 2020 5:29 PM IST
share
ಯುವತಿ ಮೊಗದಲ್ಲಿ ಮೂಡಿದ ಸಿಂಹ ! : ಸೌಂದರ್ಯ ಕಲಾವಿದೆ ಚೇತನಾ ಕೈಚಳಕಕ್ಕೆ ವ್ಯಾಪಕ ಶ್ಲಾಘನೆ

ಮಂಗಳೂರು, ಅ.29: ನವರಾತ್ರಿಯ ವಿಶೇಷವಾಗಿ ನಗರದ ಸೌಂದರ್ಯ ಕಲಾವಿದೆ ಚೇತನಾ ಎಸ್.ರವರು ಯುವತಿಯ ಮುಖದಲ್ಲಿ ರಚಿಸಿದ ಸಿಂಹದ ಚಿತ್ರ ಇದೀಗ ಸದ್ದಿಲ್ಲದೆ ಸುದ್ದಿ ಮಾಡುತ್ತಿದೆ.

ನಗರದ ಚೇತನಾ ಬ್ಯೂಟಿ ಲಾಂಜ್ ಆ್ಯಂಡ್ ಅಕಾಡೆಮಿಯ ಮುಖ್ಯಸ್ಥರಾಗಿರುವ ಚೇತನಾ ಎಸ್. ತಮ್ಮ ಶಿಷ್ಯೆಯಾದ ಶ್ರೇಯಾ ಎಂ. ಭಟ್ ಎಂಬವರ ಮುಖ ಹಾಗೂ ಕೂದಲನ್ನು ಉಪಯೋಗಿಸಿಕೊಂಡು ಚಿತ್ರಿಸಿರುವ ಸಿಂಹದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದೆ.
ನವರಾತ್ರಿಯ ಸಂದರ್ಭ ಪೂಜಿಸಲ್ಪಡುವ ದುರ್ಗಾ ಮಾತೆಯ ವಾಹನವಾಗಿರುವ ಸಿಂಹದ ಮುಖದ ಚಿತ್ರವನ್ನು ಯುವತಿಯ ಮುಖದಲ್ಲಿ ಮೂಡಿಸಲಾಗಿದ್ದು, ಸುಮಾರು ಐದು ಗಂಟೆಗಳ ಅವಧಿಯಲ್ಲಿ ತಮ್ಮ ಕಲಾತ್ಮಕ ಕೈಚಳಕವನ್ನು ಚೇತನಾ ಹೊರಗೆಡಹಿದ್ದಾರೆ. ಇವರ ಈ ಕಲೆಯನ್ನು ಛಾಯಾಚಿತ್ರಗ್ರಾಹಕ ವಿವೇಕ್ ಸಿಕ್ವೇರಾ ಸೆರೆ ಹಿಡಿದಿದ್ದಾರೆ.

ವಿಶೇಷವೆಂದರೆ ಈ ಕಲೆಯಲ್ಲಿ ಸಿಂಹದ ಮುಖವನ್ನು ನೈಜವಾಗಿ ಚಿತ್ರಿಸಲು ಯಾವುದೇ ರೀತಿಯ ಕೃತಕ ಕೂದಲನ್ನು ಬಳಸಿಲ್ಲ. ವಿದೇಶಗಳಲ್ಲಿ ಈ ರೀತಿ ದೇಹದ ಮೇಲೆ ಪ್ರಾಣಿ ಪಕ್ಷಿ ಸೇರಿದಂತೆ ನಾನಾ ರೀತಿಯ ಪೇಯ್ಟಿಂಗ್ ಮಾಡುವಂತಹ ಕಲಾತ್ಮಕತೆಯನ್ನು ನಾವು ನೋಡುತ್ತಿ ರುತ್ತೇವೆ. ಆದರೆ ಅಪರೂಪದ ಫೇಸ್ ಪೇಯ್ಟಿಂಗ್ ಎಂದೇ ಕರೆಯಲ್ಪಡುವ ಈ ಕಲೆಯಲ್ಲಿ ಚೇತನಾ ಅವರು ಪ್ರಥಮ ಪ್ರಯತ್ನದಲ್ಲೇ ಸೈ ಅನ್ನಿಸಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೌಂದರ್ಯ, ರೂಪದರ್ಶಿ ತರಬೇತುದಾರರಾಗಿರುವ ಚೇತನಾ ತಮ್ಮ ಶಿಷ್ಯೆಯಾದ ಶ್ರೇಯಾ ಅವರ ಮುಖದ ಮೇಲೆ ಈ ಪ್ರಯೋಗ ಮಾಡಿದ್ದಾರೆ. ಕಾಲೇಜಿನಲ್ಲಿ ಹವ್ಯಾಸವಾಗಿ ಬ್ಯೂಟಿಶಿಯನ್ ಕಲೆಯನ್ನು ಕಲಿತುಕೊಂಡ ಚೇತನಾ ಬಿಎ (ಮನಶಾಸ್ತ್ರ) ಪದವೀಧರೆ. ಮೇಕಪ್ ಆರ್ಟ್, ಮೆಹೆಂದಿ ವಿನ್ಯಾಸದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಇವರು ಅದನ್ನೇ ತಮ್ಮ ವೃತ್ತಿಯನ್ನಾಗಿಸಿದವರು. ಏನಾದರೂ ಹೊಸತನವನ್ನು ಮಾಡಬೇಕೆಂಬ ನಿಟ್ಟಿನಲ್ಲಿ ನವರಾತ್ರಿಯ ಸಂದರ್ಭದಲ್ಲಿ ಸಿಂಹದ ಮುಖವನ್ನು ಯುವತಿಯ ಮುಖದಲ್ಲಿ ಚಿತ್ರಿಸಿ ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ.

‘‘ಈ ಚಿತ್ರದ ಕಲ್ಪನೆ ಕಳೆದ ಹಲವಾರು ತಿಂಗಳಿನಿಂದ ನನ್ನ ಮನದಲ್ಲಿ ಮೂಡುತ್ತಿತ್ತು. ಆದರೆ ಧೈರ್ಯ ಮಾಡಿರಲಿಲ್ಲ. ಆದರೆ ನವರಾತ್ರಿಯ ಸಂದರ್ಭ ಏನಾದರೂ ವಿಶೇಷ ಮಾಡಬೇಕೆಂಬ ಹುಮ್ಮಸ್ಸಿನೊಂದಿಗೆ ಈ ಕಾರ್ಯಕ್ಕೆ ಮುಂದಾದೆ. ಅ. 24ರಂದು ಸುಮಾರು 5 ಗಂಟೆಗಳ ಅವಧಿಯಲ್ಲಿ ಈ ಸಿಂಹದ ಮುಖವನ್ನು ಶ್ರೇಯಾ ಮುಖದ ಮೇಲೆ ಬಿಡಿಸಿದ್ದೇನೆ. ನೈಜತೆಯನ್ನು ಕಾಪಾಡುವ ದೃಷ್ಟಿಯಿಂದ ಆಕೆಯ ಕೂದಲನ್ನೇ ಸಿಂಹದ ಮುಖದ ಸುತ್ತಲಿನ ಕೂದಲನ್ನಾಗಿ ಪರಿವರ್ತಿಸಿದ್ದೇನೆ. ಆಕೆಯ ಕಣ್ಣುಗಳನ್ನು ಮುಚ್ಚಿ, ಕಣ್ಣಿನ ಹುಬ್ಬುಗಳಿಗೆ ವ್ಯಾಕ್ಸ್ ಹಚ್ಚಿ ಅದರ ಮೇಲೆ ಸಿಂಹದ ಕಣ್ಣನ್ನು ಚಿತ್ರಿಸಲಾಗಿದೆ. ನನಗೆ ಇದೊಂದು ಹೊಸ ಅನುಭವ. ಕಲಾಪ್ರಿಯ ನೋಡುಗರು ಇದನ್ನು ಇಷ್ಟಪಟ್ಟಿರುವುದು ಖುಷಿ ನೀಡಿದೆ’’


- ಚೇತನಾ ಎಸ್., ಸೌಂದರ್ಯ ಕಲಾವಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X