Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಕಾರ್ಯಕರ್ತ ದಿನೇಶ್ ಬಂಟ್ವಾಳ್...

ಬಿಜೆಪಿ ಕಾರ್ಯಕರ್ತ ದಿನೇಶ್ ಬಂಟ್ವಾಳ್ ಮೇಲಿನ ಹಲ್ಲೆ ಮತೀಯ ಗಲಭೆಯ ಸಂಚು: ನಳಿನ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ29 Oct 2020 9:25 PM IST
share
ಬಿಜೆಪಿ ಕಾರ್ಯಕರ್ತ ದಿನೇಶ್ ಬಂಟ್ವಾಳ್ ಮೇಲಿನ ಹಲ್ಲೆ ಮತೀಯ ಗಲಭೆಯ ಸಂಚು: ನಳಿನ್ ಕುಮಾರ್

ಚಿಕ್ಕಮಗಳೂರು, ಅ.29: ಬಿಜೆಪಿ ಕಾರ್ಯಕರ್ತ ದಿನೇಶ್ ಬಂಟ್ವಾಳ್ ಮೇಲಿನ ಹಲ್ಲೆ, ವೈಯಕ್ತಿಕ ದ್ವೇಷವಲ್ಲ. ಇದು ಮತೀಯ ಗಲಭೆ ಸೃಷ್ಟಿಸಲು ನಡೆಸಿದ ಸಂಚು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಪಕ್ಷದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗುರುವಾರ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆ ಘಟನೆ ಸಂಬಂಧ ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದು, ಹಲ್ಲೆ ಹಿಂದೆ ಯಾವ ಸಂಘಟನೆ ಇದೆ ಎಂಬುದನ್ನು ಪತ್ತೆ ಮಾಡಿ ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳ ಅಭಿವೃದ್ಧಿ ಕೆಲಸ ಮುಂದಿಟ್ಟು ಆರ್.ಆರ್.ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಜನರ ಬಳಿಗೆ ಹೋಗುತ್ತಿದ್ದೇವೆ. ದೇಶದ ಅಭಿವೃದ್ಧಿಗೆ ಬಿಜೆಪಿ ಅನಿವಾರ್ಯ ಎಂಬ ಮನೋಭಾವ ಮತದಾರಲ್ಲಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಕಟೀಲು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿಯನ್ನು ಮತದಾರರ ಮುಂದಿಟ್ಟಿದ್ದೇವೆ. ಈ ಕ್ಷೇತ್ರಗಳಲ್ಲಿ ಹಲವು ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೂ ಕ್ಷೇತ್ರಗಳ ಅಭಿವೃದ್ಧಿಗೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಅಲ್ಲಿನ ಮತದಾರರೇ ಹೇಳುತ್ತಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ವಿರುದ್ಧ ಅಲ್ಲಿನ ಜನರು ಆಕ್ರೋಶಗೊಂಡಿದ್ದು, ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದರು.

ಸೋಲಿನ ಭೀತಿಯಿಂದಾಗಿ ವಿಪಕ್ಷಗಳು ಜಾತಿ ರಾಜಕಾರಣ ಮಾಡುತ್ತಿವೆ. ಚುನಾವಣೆ ಬಂದಾಗ ಮಾತ್ರ ವಿಪಕ್ಷಗಳ ಮುಖಂಡರಿಗೆ ಜಾತಿ ನೆನಪಾಗುತ್ತದೆ. ಚುನಾವಣೆ ಮುಗಿದ ಮೇಲೆ ಅಧಿಕಾರ ಉಳಿಸಿಕೊಳ್ಳುವುದು ಹೇಗೆಂಬ ಚಿಂತೆ ಅವರದ್ದು. ಬಿಜೆಪಿ ಅಭಿವೃದ್ಧಿ ಮಂತ್ರದಿಂದ ಮಾತ್ರ ಗೆಲುವು ಸಾಧಿಸಲಿದೆಯೇ ಹೊರತು ಜಾತಿಯ ಆಧಾರದ ಮೇಲಲ್ಲ. ಆರ್.ಆರ್.ನಗರದಲ್ಲಿ ಚುನಾವಣೆ ವೇಗ ಪಡೆದುಕೊಂಡಿದೆ. 50 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಶಿರಾ ಕ್ಷೇತ್ರದಲ್ಲಿ 15 ರಿಂದ 20 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಪಡೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ವಿಶ್ವಾಸ ವ್ಯಕ್ತಪಡಿಸಿದರು.

ಉಪ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್‍ನೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ನಳಿನ್‍ಕುಮಾರ್ ಕಟೀಲು, ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದೆ. ರಾಜ್ಯದಲ್ಲಿ 117 ಸ್ಥಾನ ಪಡೆದುಕೊಂಡಿದ್ದು, ಉಪಚುನಾವಣೆಯಲ್ಲಿ ಒಳ ಒಪ್ಪಂದದ ಪ್ರಶ್ನೆಯೇ ಇಲ್ಲ. ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿಗೆ ಪ್ರಬಲ ಸ್ಫರ್ಧಿಯಾಗಿದೆ. ಜೆಡಿಎಸ್ ಮೂರನೇ ಸ್ಥಾನದಲ್ಲಿದೆ ಎಂದರು.

ರಾಜ್ಯಕ್ಕೆ ಹಿಂದೆಂದಿಗಿಂತಲೂ ಹೆಚ್ಚು ಅನುದಾನ ನೀಡಿದೆ
ಕೇಂದ್ರ ಸರಕಾರ ಅನುದಾನದ ಬಿಡುಗಡೆ ವಿಚಾರದಲ್ಲಿ ರಾಜ್ಯ ಸರಕಾರಕ್ಕೆ ತರತಮ್ಯ ಮಾಡುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ನಳಿನ್‍ ಕುಮಾರ್ ಕಟೀಲು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವಧಿಯಲ್ಲೂ ರಾಜ್ಯದಲ್ಲಿ ನೆರೆ ಬಂದಿತ್ತು. ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರೇ ಹೊರತು ನೆರೆ ಪರಿಹಾರ ನೀಡಿರಲಿಲ್ಲ. ಆದರೆ ಯಡಿಯೂರಪ್ಪ ನೇತೃತ್ವದ ಈಗಿನ ಸರಕಾರ ಎನ್‍ಡಿಆರ್‍ಎಫ್ ಗೈಡ್‍ಲೈನ್ ಮೀರಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಿದ್ದು, 1ಲಕ್ಷ ರೂ. ಪರಿಹಾರವನ್ನು ಆರಂಭದಲ್ಲೇ ಬಿಡುಗಡೆ ಮಾಡಿದೆ. ಸಂತ್ರಸ್ತರ ಪೈಕಿ ಕೆಲವರು ಮನೆ ನಿರ್ಮಾಣ ಕಾಮಗಾರಿ ನಡೆಸದಿರುವುದರಿಂದ ಹಣ ಬಂದಿಲ್ಲ. ಕೆಲವು ಕಡೆಗಳಲ್ಲಿ ನಿವೇಶನ ಸಮಸ್ಯೆಯಿಂದ ಮನೆ ನಿರ್ಮಾಣ ಕೆಲಸ ವಿಳಂಬವಾಗಿದೆ ಎಂದರು. 

ಕೇಂದ್ರ ಸರಕಾರ ಹಿಂದೆಂದಿಗಿಂತಲೂ ಈ ಬಾರಿ ರಾಜ್ಯ ಸರಕಾರಕ್ಕೆ ಹೆಚ್ಚು ಅನುದಾನ ನೀಡಿದೆ. ಎನ್‍ಡಿಆರ್‍ಎಫ್ ಗೈಡ್‍ಲೈನ್‍ನಂತೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಿದೆ. ಇತ್ತೀಚೆಗೆ ನೆರೆಬಂದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಯೊಂದಿಗೆ ನಾವಿದ್ದೇವೆ ಎಂದರು. ಹಾಗೆಂದ ಮಾತ್ರಕ್ಕೆ ಬೇಕಾಬಿಟ್ಟಿ ಹಣ ನೀಡಲು ಸಾಧ್ಯವಿಲ್ಲ, ವರದಿ ನೀಡಬೇಕು. ಕೇಂದ್ರ ತಜ್ಞರ ತಂಡ ಪರಿಶೀಲನೆ ಮಾಡಿ ವರದಿ ನೀಡಬೇಕು. ಎನ್.ಡಿ.ಆರ್.ಎಫ್ ಗೈಡ್‍ಲೈನ್ ಇರುತ್ತೆ, ಇದೆಲ್ಲ ಮುಖ್ಯಮಂತ್ರಿಯಾದವರಿಗೆ ಗೊತ್ತಿರುತ್ತದೆ. ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಕಟೀಲು ಆರೋಪಿಸಿದರು.

ಸಿದ್ದರಾಮಣ್ಣನಿಗೆ ಧಮ್ ಇರಲಿಲ್ವಾ: ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿತ್ತು. ಸಿದ್ದರಾಮಣ್ಣ ಮುಖ್ಯಮಂತ್ರಿಯಾಗಿದ್ದರು. ರಾಜ್ಯಕ್ಕೆ ಚಿದಂಬರಂ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಒಂದು ನಿಮಿಷದಲ್ಲಿ ಚಿದಂಬರಂ ಎದ್ದು ಹೋದರು. ಅನುದಾನ ಕೇಳಲು ಸಿದ್ದರಾಮಣ್ಣ ಅವರಿಗೆ ಧಮ್ ಇರಲಿಲ್ವಾ? ವೀರಪ್ಪ ಮೊಯ್ಲಿ, ಆಸ್ಕರ್ ಫರ್ನಾಡಿಸ್, ಹರಿಪ್ರಸಾದ್‍ನಂತಹ ದೊಡ್ಡ ನೇತಾರರು ಚಿದಂಬರಂ ಮನವೊಲಿಸಿ ರಾಜ್ಯಕ್ಕೆ ಅನುದಾನ ತರಲು ಏಕೆ ಸಾಧ್ಯವಾಗಲಿಲ್ಲ ಎಂದು ಇದೇ ವೇಳೆ ಕಟೀಲು ತಿರುಗೇಟು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X