Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಚಕುಲ ಗೋಶಾಲೆಯಲ್ಲಿ ವಿಷ ಆಹಾರ ಸೇವಿಸಿ...

ಪಂಚಕುಲ ಗೋಶಾಲೆಯಲ್ಲಿ ವಿಷ ಆಹಾರ ಸೇವಿಸಿ 70 ಜಾನುವಾರುಗಳು ಸಾವು

ವಾರ್ತಾಭಾರತಿವಾರ್ತಾಭಾರತಿ29 Oct 2020 11:54 PM IST
share

ಪಂಚಕುಲ (ಹರ್ಯಾಣ), ಅ. 29:  ಪಂಚಕುಲದ ಮನಸಾ ದೇವಿ ದೇವಾಲಯದ ಸಮೀಪ ಇರುವ ಹರ್ಯಾಣ ಸರಕಾರದ ಮಾತಾ ಮನಸಾ ದೇವಿ ಗೋಶಾಲೆಯಲ್ಲಿ ಬುಧವಾರ ವಿಷ ಆಹಾರ ಸೇವಿಸಿ 70 ಗೋವುಗಳು ಹಾಗೂ ಗೂಳಿಗಳು ಸಾವನ್ನಪ್ಪಿವೆ ಹಾಗೂ ಇತರ 30 ಜಾನುವಾರುಗಳು ಅಸ್ವಸ್ಥಗೊಂಡಿವೆ.

ಆಹಾರ ವಿಷವಾದುದರಿಂದ ಜಾನುವಾರುಗಳು ಸಾವನ್ನಪ್ಪಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ‘‘ನಾವು ಪರಿಶೀಲನೆಗೆ ಮೇವು ಸೇರಿದಂತೆ ಮಾದರಿಗಳನ್ನು ಪಡೆದುಕೊಂಡಿದ್ದೇವೆ. ಅಸ್ವಸ್ಥಗೊಂಡಿದ್ದ ಹಲವು ಜಾನುವಾರುಗಳು ಚಿಕಿತ್ಸೆಗೆ ಸ್ಪಂದಿಸುತ್ತಿವೆ ಹಾಗೂ ಚೇತರಿಸಿಕೊಳ್ಳುತ್ತಿವೆ. ಇದು ಆಹಾರ ವಿಷವಾಗಿರುವ ಪ್ರಕರಣವಾಗಿರುವ ಸಾಧ್ಯತೆ ಇದೆ. ಜಾನುವಾರುಗಳಿಗೆ ಉಸಿರುಕಟ್ಟುವಿಕೆ ಹಾಗೂ ಹೊಟ್ಟೆ ಊದಿಕೊಳ್ಳುವ ಲಕ್ಷಣ ಕಂಡು ಬಂದಿದೆ’’  ಎಂದು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ. ಅನಿಲ್ ಕುಮಾರ್ ಹೇಳಿದ್ದಾರೆ.

ಕೆಲವು ಗೋವುಗಳು ಚಡಪಡಿಸುವುದು ನಮಗೆ ಮಂಗಳವಾರ ರಾತ್ರಿ 9.15ಕ್ಕೆ ತಿಳಿಯಿತು. ಆದುದರಿಂದ ವೈದ್ಯರ ತಂಡವೊಂದನ್ನು ಇಲ್ಲಿಗೆ ಕರೆಸಲಾಯಿತು ಎಂದು ಟ್ರಸ್ಟ್‌ನ ಮ್ಯಾನೇಜರ್ ತಿಳಿಸಿದ್ದಾರೆ. ಈ ಘಟನೆಯನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲು ಮೂವರು ಸದಸ್ಯರ ಸಮಿತಿ ರೂಪಿಸಲಾಗಿದೆ.ಅಲ್ಲದೆ, ಮೂರು ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಹರ್ಯಾಣ ವಿಧಾನ ಸಭೆ ಸ್ಪೀಕರ್ ಗ್ಯಾನ್ ಚಂದ್ ಗುಪ್ತಾ ಹೇಳಿದ್ದಾರೆ. ‘‘ಗೋವುಗಳು ಚಡಪಡಿಸುತ್ತಿರುವುದು ಹಾಗೂ ಕೆಲವು ಗೋವುಗಳು ಕುಸಿದು ಬಿದ್ದಿರುವುದು ಗೋಶಾಲೆಯ ಮ್ಯಾನೇಜರ್‌ಗೆ ರಾತ್ರಿ 9.15ಕ್ಕೆ ತಿಳಿಯಿತು. ಎರಡು ಶೆಡ್‌ಗಳಲ್ಲಿ ಜಾನುವಾರುಗಳು ಅಸ್ವಸ್ಥವಾಗಿದ್ದವು. ಕೂಡಲೇ ವೈದ್ಯರ ತಂಡಕ್ಕೆ ಕರೆ ನೀಡಲಾಯಿತು. ವೈದ್ಯರ ತಂಡ ರಾತ್ರಿ ಪೂರ್ತಿ ಜಾನುವಾರುಗಳಿಗೆ ಚಿಕಿತ್ಸೆ ನೀಡಿತು’’ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X