Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೊಸ ಪದ್ಧತಿಯಡಿ ಆಸ್ತಿ ತೆರಿಗೆ...

ಹೊಸ ಪದ್ಧತಿಯಡಿ ಆಸ್ತಿ ತೆರಿಗೆ ಸಂಗ್ರಹಿಸಲು ಬಿಬಿಎಂಪಿ ತಯಾರಿ

ವಾರ್ತಾಭಾರತಿವಾರ್ತಾಭಾರತಿ30 Oct 2020 10:15 PM IST
share
ಹೊಸ ಪದ್ಧತಿಯಡಿ ಆಸ್ತಿ ತೆರಿಗೆ ಸಂಗ್ರಹಿಸಲು ಬಿಬಿಎಂಪಿ ತಯಾರಿ

ಬೆಂಗಳೂರು, ಅ.30: ಬಿಬಿಎಂಪಿಯು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸ್ವಂತ ಆದಾಯ ಮೂಲವನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ಹೊಸ ಪದ್ಧತಿ ಅಡಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಿಸಿ ಸಂಗ್ರಹಿಸಲು ತಯಾರಿ ನಡೆಸಲಾಗಿದೆ.

ತೆರಿಗೆ ಪರಿಷ್ಕರಣೆಯಿಂದಾಗಿ ಕಂದಾಯ ವಿಭಾಗದ ವಿಶೇಷ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿಯೊಂದನ್ನು ರಚಿಸಲಾಗಿದೆ. 2021-22 ನೇ ಆರ್ಥಿಕ ವರ್ಷದಿಂದ ಅನ್ವಯವಾಗುವಂತೆ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಲು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಯಾವ ಮಾದರಿಯಲ್ಲಿ ತೆರಿಗೆ ವಸೂಲಿ ಮಾಡಬೇಕು ಎಂಬುದರ ಕುರಿತು ಸಮಿತಿಯು ಒಂದು ತಿಂಗಳೊಳಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದು, ಮುಂದಿನ ವರ್ಷದಿಂದ ಆಸ್ತಿ ಮಾಲಕರ ಮೇಲೆ ತೆರಿಗೆಯ ಭಾರ ಬೀಳುವ ಸಾಧ್ಯತೆಗಳಿವೆ.

ಕೆಎಂಸಿ ಕಾಯಿದೆ ಪ್ರಕಾರ, ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಚಾಲ್ತಿಯಲ್ಲಿರುವ ಪ್ರದೇಶವಾರು ಯೂನಿಟ್ ದರಗಳ ಆಧಾರದಲ್ಲಿ ಕನಿಷ್ಠ ಶೇ.15 ರಿಂದ ಗರಿಷ್ಠ ಶೇ 30 ರಷ್ಟು ಆಸ್ತಿ ತೆರಿಗೆ ಹೆಚ್ಚಳ ಮಾಡಲು ಅವಕಾಶವಿದೆ. ಪಾಲಿಕೆಯು 2008 ರಿಂದ ಸುಮಾರು ಎಂಟು ವರ್ಷಗಳ ಕಾಲ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಿರಲಿಲ್ಲ. ಅದಕ್ಕೆ ಸರಕಾರ ಮತ್ತು ಲೆಕ್ಕ ಪರಿಶೋಧಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ 2016-17ರ ಎ.1ರಿಂದ ಜಾರಿಗೆ ಬರುವಂತೆ ವಸತಿ ಕಟ್ಟಡಗಳಿಗೆ ಶೇ 20 ಮತ್ತು ವಾಣಿಜ್ಯ ಸ್ವತ್ತುಗಳಿಗೆ ಶೇ.25 ರಷ್ಟು ತೆರಿಗೆ ಏರಿಕೆ ಮಾಡಲಾಯಿತು. ತೆರಿಗೆ ನಿಗದಿಗಾಗಿ ಆಸ್ತಿ ಮೌಲ್ಯದ ಲೆಕ್ಕಾಚಾರಕ್ಕೆ ಅನುಗುಣವಾಗಿ ವಲಯ ವರ್ಗೀಕರಣವನ್ನು ಪರಿಷ್ಕರಿಸಲಾಯಿತು. ಅದರ ಪರಿಣಾಮ, ತೆರಿಗೆ ಮೊತ್ತವು 2-3 ಪಟ್ಟು ಜಾಸ್ತಿಯಾಯಿತು. ಹೀಗಾಗಿ, ತೆರಿಗೆ ಹೆಚ್ಚಳಕ್ಕೆ ಸಾರ್ವಜನಿಕರು ಮತ್ತು ಪ್ರತಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ವಲಯ ವರ್ಗೀಕರಣ ಪರಿಷ್ಕರಣೆ ಕೈಬಿಡಲಾಗಿತ್ತು. ಆ ಬಳಿಕ ತೆರಿಗೆ ಹೆಚ್ಚಳ ಮಾಡಿಲ್ಲ. 

ಬಜೆಟ್‍ನಲ್ಲಿ ಘೋಷಿಸಿದ ಯೋಜನೆಗಳಿಗೂ ಹಣ ಇಲ್ಲ!: 2019-20ನೇ ಸಾಲಿನಿಂದಲೇ ಜಾರಿಗೆ ಬರುವಂತೆ ಆಸ್ತಿ ತೆರಿಗೆ ಪರಿಷ್ಕರಣೆ ಕುರಿತು ಆಯುಕ್ತರು 2018ರ ನವೆಂಬರ್ನಲ್ಲಿ ಟಿಪ್ಪಣಿ ಸಿದ್ಧಪಡಿಸಿ, ವಸತಿ ಕಟ್ಟಡಗಳಿಗೆ ಶೇ 20 ಮತ್ತು ವಾಣಿಜ್ಯ ಕಟ್ಟಡಗಳಿಗೆ ಶೇ 30ರಷ್ಟು ತೆರಿಗೆ ಹೆಚ್ಚಿಸುವ ಕುರಿತು ಪ್ರಸ್ತಾಪಿಸಿದ್ದರು. ಆದರೆ, ತೆರಿಗೆ ಪರಿಷ್ಕರಣೆ ಪ್ರಸ್ತಾವಕ್ಕೆ ಕೌನ್ಸಿಲ್ ಸಭೆಯು ಅನುಮೋದನೆ ನೀಡಲಿಲ್ಲ.

ಅಧಿಕ ತೆರಿಗೆ ಸಂಗ್ರಹಕ್ಕೆ ಕಾರ್ಯತಂತ್ರ!: ಪಾಲಿಕೆಯ ಕಂದಾಯ ವಿಭಾಗದ ವಿಶೇಷ ಆಯುಕ್ತರ ನೇತೃತ್ವದ ಸಮಿತಿಯು ಯಾವ ವಿಧಾನದಡಿ ಅಸ್ತಿ ತೆರಿಗೆ ಪರಿಷ್ಕರಣೆ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುತ್ತಿದೆ. ಪ್ರಸ್ತುತ ಪ್ರದೇಶವಾರು ಯೂನಿಟ್ ದರಗಳ ಆಧಾರದಲ್ಲಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ. ಇದರ ಬದಲಿಗೆ ಆಸ್ತಿಯ ಬಂಡವಾಳ ಮೌಲ್ಯ ಇಲ್ಲವೇ ಈಗಿನ ಮಾರ್ಗಸೂಚಿ ದರದ ಆಧಾರದ ಮೇಲೆ ತೆರಿಗೆ ಪರಿಷ್ಕರಣೆ ಮಾಡಲು ಚಿಂತಿಸಲಾಗಿದೆ.

ಅದರ ಜತೆಗೆ ಸ್ವತ್ತುಗಳ ಮಾರ್ಗಸೂಚಿ ದರಕ್ಕೆ ಅನುಗುಣವಾಗಿ ವಲಯ ವರ್ಗೀಕರಣವನ್ನು ಪರಿಷ್ಕರಿಸಲು ಉದ್ದೇಶಿಸಲಾಗಿದೆ. ಆ ಮೂಲಕ ಹೆಚ್ಚುವರಿಯಾಗಿ 1000 ಕೋಟಿ ರೂ. ತೆರಿಗೆ ವಸೂಲಾಗಬಹುದೆಂದು ನಿರೀಕ್ಷಿಸಲಾಗಿದೆ. ಸ್ವತ್ತುಗಳಲ್ಲಿನ ಕಟ್ಟಡದ ಮೌಲ್ಯ ಮತ್ತು ನಿವೇಶನದ ಮೌಲ್ಯವನ್ನು ಲೆಕ್ಕ ಹಾಕಿ ಶೇ.5ರಷ್ಟು ತೆರಿಗೆ ವಿಧಿಸುವ ಬಗ್ಗೆಯೂ ಚರ್ಚಿಸಲಾಗುತ್ತಿದೆ. ಅದೇ ರೀತಿ ಪ್ರತಿ ವರ್ಷವೂ ತೆರಿಗೆ ಪರಿಷ್ಕರಣೆ ಮಾಡುವುದರಿಂದಾಗುವ ಸಾಧಕ-ಬಾಧಕಗಳ ಕುರಿತಂತೆ ಕೂಡ ಪರಿಶೀಲನೆ ನಡೆಸಲಾಗುತ್ತಿದೆ. ವಲಯ ವರ್ಗೀಕರಣವನ್ನು ಜಾರಿಯಲ್ಲಿರುವ ಮಾರ್ಗಸೂಚಿ ದರದನ್ವಯ ಮಾಡಲಾಗುತ್ತದೆ.

ಆಸ್ತಿ ಮಾಲಕರಿಗೆ ತೆರಿಗೆ ಬರೆ: ಕೊರೋನದಿಂದ ಕಂಗಾಲಾಗಿರುವ ಆಸ್ತಿ ಮಾಲಕರಿಗೆ ಇದೀಗ ತೆರಿಗೆ ಭಾರದ ಬರೆ ಎಳೆಯಲು ಪಾಲಿಕೆ ತಯಾರಿ ನಡೆಸುತ್ತಿದೆ. ಇದರಿಂದ ದುಡಿಮೆ ಇಲ್ಲದೆ ಕಂಗೆಟ್ಟಿರುವ ಮಾಲಕರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ. ನಗರದಲ್ಲಿ ಸಾವಿರಾರು ಬಾಡಿಗೆ ಮನೆಗಳು ಖಾಲಿಯಾಗಿವೆ. ಅಂಗಡಿ ಮುಂಗಟ್ಟುಗಳು ಖಾಲಿ ಬಿದ್ದಿವೆ. ತೆರಿಗೆ ಏರಿಕೆಯಿಂದ ವಾಣಿಜ್ಯ ಕಟ್ಟಡಗಳ ಮಾಲಕರಿಗೆ ತೊಂದರೆಯಾಗಲಿದೆ. ಸದ್ಯ 2020-21ರ ಅವಧಿಯಲ್ಲಿ ಅಕ್ಟೋಬರ್ 29ರವರೆಗೆ 2125.47 ಕೋಟಿ ರೂಪಾಯಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X