Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚರ್ಚ್‌ ನಲ್ಲಿ ಮೂವರ ಹತ್ಯೆ: ಫ್ರಾನ್ಸ್...

ಚರ್ಚ್‌ ನಲ್ಲಿ ಮೂವರ ಹತ್ಯೆ: ಫ್ರಾನ್ಸ್ ಮುಸ್ಲಿಮರಿಂದ ಖಂಡನೆ

ವಾರ್ತಾಭಾರತಿವಾರ್ತಾಭಾರತಿ30 Oct 2020 10:37 PM IST
share
ಚರ್ಚ್‌ ನಲ್ಲಿ ಮೂವರ ಹತ್ಯೆ: ಫ್ರಾನ್ಸ್ ಮುಸ್ಲಿಮರಿಂದ ಖಂಡನೆ

ನೀಸ್ (ಫ್ರಾನ್ಸ್), ಅ. 30: ಫ್ರಾನ್ಸ್‌ನ ದಕ್ಷಿಣದ ನಗರ ನೀಸ್‌ನ ನೋಟ್ರ ಡಾಮ್ ಚರ್ಚ್‌ನಲ್ಲಿ ಗುರುವಾರ ಮೂವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಶಂಕಿತನನ್ನು ಟ್ಯುನೀಶಿಯ ದೇಶದ ವಲಸಿಗ ಇಬ್ರಾಹೀಮ್ ಇಸಾವುಯಿ ಎಂಬುದಾಗಿ ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವನು ಕಳೆದ ತಿಂಗಳು ವಲಸಿಗನಾಗಿ ದೋಣಿಯಲ್ಲಿ ಇಟಲಿಯ ಲ್ಯಾಂಪಡುಸ ದ್ವೀಪಕ್ಕೆ ಬಂದಿದ್ದನು. ಕ್ವಾರಂಟೈನ್ ಮುಗಿಸಿದ ಬಳಿಕ, ಮುಂದಕ್ಕೆ ಹೋಗುವಂತೆ ಅವನಿಗೆ ಸೂಚಿಸಲಾಗಿತ್ತು.

ಅವನು ಬಳಿಕ ನೀಸ್ ನಗರಕ್ಕೆ ರೈಲಿನಲ್ಲಿ ಬಂದಿದ್ದನು. ಅವನಲ್ಲಿ ಇಟಲಿಯಲ್ಲಿ ನೀಡಲಾದ ರೆಡ್‌ಕ್ರಾಸ್ ದಾಖಲೆಯೊಂದನ್ನು ಬಿಟ್ಟರೆ ಬೇರೆ ಯಾವುದೇ ದಾಖಲೆಯಿರಲಿಲ್ಲ ಎಂದು ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ.

ಅವನ ಹೆಸರು ಶಂಕಿತ ಭಯೋತ್ಪಾದಕರ ಪಟ್ಟಿಯಲ್ಲಿ ಇರಲಿಲ್ಲ ಎಂದು ಟ್ಯುನೀಶಿಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇನ್ನೊಂದು ಬೆಳವಣಿಗೆಯಲ್ಲಿ, ಶಂಕಿತನೊಂದಿಗೆ ಸಂಪರ್ಕದಲ್ಲಿದ್ದನೆಂದು ನಂಬಲಾದ 47 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ತಡರಾತ್ರಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಫ್ರಾನ್ಸ್ ಮಾಧ್ಯಮಗಳು ವರದಿ ಮಾಡಿವೆ.

 ಶಂಕಿತ ದಾಳಿಕೋರ ಇಬ್ರಾಹೀಮ್‌ಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಅವನು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವನ ಪರಿಸ್ಥಿತಿ ಗಂಭೀರವಾಗಿದೆಯೆನ್ನಲಾಗಿದೆ.

 ಈ ನಡುವೆ, ನೀಸ್ ನಗರದ ಚರ್ಚೊಂದರಲ್ಲಿ ಗುರುವಾರ ವ್ಯಕ್ತಿಯೊಬ್ಬ ಮೂವರನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿ ಫ್ರಾನ್ಸ್ ಮುಸ್ಲಿಮರು ಆಘಾತ ವ್ಯಕ್ತಪಡಿಸಿದ್ದಾರೆ. ಈ ಅಪರಾಧವು ತಮ್ಮ ಧರ್ಮವನ್ನಾಗಲಿ, ಮೌಲ್ಯಗಳನ್ನಾಗಲಿ ಪ್ರತಿನಿಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

‘‘ಇಂಥ ಕೃತ್ಯಗಳನ್ನು ಮಾಡುವವರು ಮುಸ್ಲಿಮರೂ ಅಲ್ಲ, ಕ್ರೈಸ್ತರೂ ಅಲ್ಲ. ಅವರು ಇಸ್ಲಾಮ್‌ನಲ್ಲಿರದ ಸಿದ್ಧಾಂತದ ಅನುಯಾಯಿಗಳಾಗಿದ್ದಾರೆ’’ ಎಂದು ಫ್ರಾನ್ಸ್‌ನ ನಾಗರಿಕ ಹಕ್ಕುಗಳ ಹೋರಾಟಗಾರ ಯಾಸಿರ್ ಲೋವಟಿ ಹೇಳಿದರು.

‘‘ಚರ್ಚ್‌ನ ಒಳಗೆ ಮಹಿಳೆಯೊಬ್ಬರ ತಲೆ ಕಡಿಯಲಾಗಿದೆ. ಅಂದರೆ ಈ ಕೃತ್ಯವನ್ನು ಮಾಡುವವರಿಗೂ ಧರ್ಮಕ್ಕೂ ಸಂಬಂಧವಿಲ್ಲ. ಅವರಲ್ಲಿ ನೈತಿಕ ಸೀಮಾರೇಖೆಗಳಿಲ್ಲ’’ ಎಂದು ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X