ಅ.31ರಂದು ದೇಶದ ಮೊದಲ ರಾಷ್ಟ್ರೀಯ ಕಾರ್ಮಿಕ ಸಂಘಟನೆ ಎಐಟಿಯುಸಿ ಶತಮಾನೋತ್ಸವ
ಬೆಂಗಳೂರು, ಅ. 30: ದೇಶದ ಮೊಟ್ಟ ಮೊದಲ ರಾಷ್ಟ್ರೀಯ ಕಾರ್ಮಿಕ ಸಂಘಟನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್(ಎಐಟಿಯುಸಿ) ಶತಮಾನೋತ್ಸವದ ಅಂಗವಾಗಿ ನಾಳೆ(ಅ.31) ಬೆಳಗ್ಗೆ 10:30ಕ್ಕೆ ನಗರದ ವೈಯಾಲಿ ಕಾವಲ್ ಸಮೀಪದಲ್ಲಿನ ಘಾಟೆ ಭವನದಲ್ಲಿ ಎಐಟಿಯುಸಿ ಶತಮಾನೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಎಐಟಿಯುಸಿ ಹೋರಾಟದ ಇತಿಹಾಸ ಕುರಿತು ಕಿರು ಪುಸ್ತಕ ಬಿಡುಗಡೆ ಮಾಡಲಾಗುತ್ತಿದೆ. ಅಲ್ಲದೆ, ಎಐಟಿಯುಸಿ ರಾಜ್ಯ ಮಂಡಳಿ ಅಧ್ಯಕ್ಷ ಎಚ್.ವಿ.ಅನಂತ ಸುಬ್ಬರಾವ್, ಕಾರ್ಯಾಧ್ಯಕ್ಷ ಎಚ್.ಮಹದೇವನ್, ಭಾರತ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀಧರ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದು, ಭಾಷಣ ಮಾಡಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಎಂ.ಡಿ.ಹರಿಗೋವಿಂದ ತಿಳಿಸಿದ್ದಾರೆ.
Next Story