Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಏರ್‌ಪೋರ್ಟ್ ಖಾಸಗಿ ತೆಕ್ಕೆಗೆ !

ಮಂಗಳೂರು ಏರ್‌ಪೋರ್ಟ್ ಖಾಸಗಿ ತೆಕ್ಕೆಗೆ !

ಇನ್ನು ‘ಅದಾನಿ ಏರ್‌ಪೋರ್ಟ್’

ವಾರ್ತಾಭಾರತಿವಾರ್ತಾಭಾರತಿ31 Oct 2020 5:29 PM IST
share
ಮಂಗಳೂರು ಏರ್‌ಪೋರ್ಟ್ ಖಾಸಗಿ ತೆಕ್ಕೆಗೆ !

ಮಂಗಳೂರು, ಅ.31: ಅಂತಾರಾಷ್ಟ್ರೀಯ ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರಕಾರದ ಯೋಜನೆಯನ್ವಯ ಇಂದು ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಗೆ ನಿರ್ವಹಣೆಗಾಗಿ ಹಸ್ತಾಂತರದ ಪ್ರಕ್ರಿಯೆ ನಿನ್ನೆ ತಡರಾತ್ರಿ (ರಾತ್ರಿ 12 ಗಂಟೆಗೆ )ನಡೆದಿದೆ.

ಈ ಮೂಲಕ ಇನ್ನು ಮುಂದೆ ಮಂಗಳೂರು ವಿಮಾನ ನಿಲ್ದಾಣ ‘ಅದಾನಿ ಏರ್‌ಪೋರ್ಟ್’ ಬದಲಾಗಿದೆ. ವಿಮಾನಗಳ ಹಾರಾಟ ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ನಿರ್ವಹಣೆಯ ಸಂಪೂರ್ಣ ಹೊಣೆಯನ್ನು ಅದಾನಿ ಸಮೂಹ ಸಂಸ್ಥೆ ನಿರ್ವಹಿಸಲಿದೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಾದ ವಿ.ವಿ. ರಾವ್ ಅವರು ಅದಾನಿ ಮಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್‌ನ ಸಿಇಒ ಅಶುತೋಷ್ ಚಂದ್ರ ಹಾಗೂ ಅದಾನಿ ಎರ್‌ಪೋರ್ಟ್ಸ್‌ನ ಸಿಇಒ ಬೆಹ್ನಾಡ್ ಝಂಡಿ ಅವರಿಗೆ ಹಸ್ತಾಂತರಿಸಿದರು.

50 ವರ್ಷಗಳ ಲೀಸ್‌ಗೆ ಅದಾನಿ ಸಂಸ್ಥೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯ ಜವಾಬ್ದಾರಿಯನ್ನು ಅದಾನಿ ಸಂಸ್ಥೆಗೆ ಹಸ್ತಾಂತರಿಸಲಾಗಿದ್ದು, ಒಂದು ವರ್ಷದ ಅವಧಿಗೆ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಅದಾನಿ ಸಂಸ್ಥೆ ಜತೆಯಾಗಿ ಕಾರ್ಯ ನಿರ್ವಹಿಸಲಿದೆ. ಈ ಸಂದರ್ಭ ಹಣ ವಿನಿಯೋಗ, ಟರ್ಮಿನಲ್‌ನಲ್ಲಿ ವಾಣಿಜ್ಯ ಚಟುವಟಿಕೆ ಸೇರಿದಂತೆ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಅದಾನಿ ಸಂಸ್ಥೆ ನಿರ್ವಹಿಸಲಿದೆ.

ಪ್ರಾಧಿಕಾರವು ವಿಮಾನ ಆಗಮನ- ನಿರ್ಗಮನ ವಿಚಾರಕ್ಕೆ ಸಂಬಂಧಿಸಿ ವ್ಯವಸ್ಥೆಯ ಬಗ್ಗೆ ಮಾರ್ಗದರ್ಶಕನಾಗಿ ಕಾರ್ಯ ನಿರ್ವಹಿಸಲಿದೆ. ಸಂಪೂರ್ಣವಾಗಿ ಅದಾನಿ ಸಂಸ್ಥೆಗೆ ವಿಮಾನ ನಿಲ್ದಾಣದ ಹಸ್ತಾಂತರದ ಬಳಿಕವೂ ವಿಮಾನ ಆಗಮನ- ನಿರ್ಗಮನದ ಉಸ್ತುವಾರಿಯನ್ನು ಪ್ರಾಧಿಕಾರ ವಹಿಸಲಿದೆ. ಭದ್ರತಾ ಸಿಬ್ಬಂದಿ ಹಾಗೂ ಏರ್‌ಲೈನ್ ಸಿಬ್ಬಂದಿ ಹೊರತುಪಡಿಸಿ ಟರ್ಮಿನಲ್ ಕಟ್ಟಡ, ರನ್ ವೇ, ಎಲೆಕ್ಟ್ರಿಕಲ್, ಸಿವಿಲ್ ಸೇರಿದಂತೆ ಎಲ್ಲಾ ವಿಚಾರವನ್ನು ಅದಾನಿ ಸಂಸ್ಥೆ ನಿರ್ವಹಿಸಲಿದೆ.

ಅದಾನಿ ಸಂಸ್ಥೆ ಇದೀಗ ಅಧಿಕೃತ ನಿರ್ವಹಣೆಯನ್ನು ವಹಿಸಿಕೊಂಡಿರುವುದರಿಂದ ಕೋಟ್ಯಾಂತರ ರೂ. ಹೂಡಿಕೆ ಮಾಡುವ ಸಾಧ್ಯತೆಯಿದೆ. ಬಹುನಿರೀಕ್ಷೆಯ ರನ್‌ವೇ ವಿಸ್ತರಣೆ, ಹೊಸದಿಲ್ಲಿ-ಮುಂಬೈ ಏರ್‌ಪೋರ್ಟ್ ಮಾದರಿಯಲ್ಲಿ ಮಂಗಳೂರಿನಲ್ಲೂ ಪ್ರತ್ಯೇಕ ಕಾಂಪ್ಲೆಕ್ಸ್, ಮಾಲ್‌ಗಳು ಬರಲಿವೆ. ಪ್ರಯಾಣಿಕರಿಗೆ ವಿಧಿಸುವ ಶುಲ್ಕದ ಪ್ರಮಾಣ, ಟರ್ಮಿನಲ್ ಒಳಗಿನ ವಾಣಿಜ್ಯ ಮಳಿಗೆಗಳ ಮಾಸಿಕ ಬಾಡಿಗೆ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯು ಅದಾನಿ ಸಂಸ್ಥೆಗೆ ಶುಕ್ರವಾರ ತಡಾತ್ರಿ 12 ಗಂಟೆಗೆ ಹಸ್ತಾಂತರವಾಗಿದೆ. ಹಸ್ತಾಂರಗೊಂಡ ತಕ್ಷಣವೇ ಮಂಗಳೂರು ವಿಮಾನ ನಿಲ್ದಾಣದ ಹೆಸರು ಕೂಡಾ ಅದಾನಿ ಏರ್‌ಪೋರ್ಟ್ ಎಂಬುದಾಗಿ ಬದಲಾವಣೆಗೊಂಡಿದೆ. ವಿಮಾನ ನಿಲ್ದಾಣದ ಒಳಗೆ ಹಾಗೂ ಹೊರಗಡೆ ಅದಾನಿ ಏರ್‌ಪೋರ್ಟ್ ನಾಮಫಲಕ ಹಾಕಲಾಗಿದ್ದು, ವಿಮಾನ ನಿಲ್ದಾಣದ ಆಗಮನ ಮತ್ತು ನಿರ್ಗಮನ ರಸ್ತೆಯ ದ್ವಾರ ಇರುವ ಕೆಂಜಾರು ಬಜಪೆ ಹೆದ್ದಾರಿಯಲ್ಲಿರುವ ನಾಮಫಲಕದಲ್ಲೂ ಅದಾನಿ ಏರ್‌ಪೋರ್ಟ್ ಹೆಸರು ಸೇರ್ಪಡೆಗೊಂಡಿದೆ.

ಹಸ್ತಾಂತರದ ಬಳಿಕ ಬೆಳಗ್ಗೆ 1.45ಕ್ಕೆ ಮಂಗಳೂರಿನಿಂದ ದುಬೈಗೆ ಪ್ರಯಾಣಿಸಿದ ವಿಮಾನದ ಪ್ರಯಾಣಿಕರಿಗೆ ಸಿಹಿ ಹಂಚುವ ಮೂಲಕ ಅದಾನಿ ಸಂಸ್ಥೆಯ ಪ್ರಮುಖರು ಸಂಭ್ರಮ ಹಂಚಿಕೊಂಡರು. ಹಸ್ತಾಂತರ ಪ್ರಕ್ರಿಯೆ ಕುರಿತಂತೆ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X