Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರ್ಮಲಾ ಸೀತಾರಾಮನ್ ಜೊತೆ ಕಾರ್ಯ...

ನಿರ್ಮಲಾ ಸೀತಾರಾಮನ್ ಜೊತೆ ಕಾರ್ಯ ನಿರ್ವಹಣೆ ಆರ್ಥಿಕ ಸುಧಾರಣೆಗೆ ಪೂರಕವಲ್ಲ ಎಂದನಿಸಿತ್ತು

ಮಾಜಿ ವಿತ್ತಕಾರ್ಯದರ್ಶಿ ಎಸ್.ಸಿ.ಗರ್ಗ್

ವಾರ್ತಾಭಾರತಿವಾರ್ತಾಭಾರತಿ31 Oct 2020 10:09 PM IST
share
ನಿರ್ಮಲಾ ಸೀತಾರಾಮನ್ ಜೊತೆ ಕಾರ್ಯ ನಿರ್ವಹಣೆ ಆರ್ಥಿಕ ಸುಧಾರಣೆಗೆ ಪೂರಕವಲ್ಲ ಎಂದನಿಸಿತ್ತು

ಹೊಸದಿಲ್ಲಿ,ಅ.31: ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲೇ ಆಗ ವಿತ್ತಕಾರ್ಯದರ್ಶಿಯಾಗಿದ್ದ ತಾನು ಇಲಾಖೆಯಿಂದ ನಿರ್ಗಮಿಸಬೇಕೆಂದು ಬಯಸಿದ್ದರು ಎಂದು ಸುಭಾಷ ಚಂದ್ರ ಗರ್ಗ್ ಅವರು ಆರೋಪಿಸಿದ್ದಾರೆ.

ಸೀತಾರಾಮನ್ ಜೊತೆ ಕಾರ್ಯ ನಿರ್ವಹಿಸುವುದು ಕಷ್ಟವಾಗಲಿದೆ ಮತ್ತು ಅದು ಭಾರತದ 10 ಲಕ್ಷ ಕೋಟಿ ಡಾ.ಆರ್ಥಿಕತೆಯನ್ನು ನಿರ್ಮಿಸುವ ಗುರಿಸಾಧನೆಗಾಗಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳಲು ಪೂರಕವಾಗುವುದಿಲ್ಲ ಎನ್ನುವುದು ಆರಂಭದಲ್ಲೇ ಸ್ಪಷ್ಟವಾಗಿತ್ತು ಎಂದು ಗರ್ಗ್ ಶನಿವಾರ ಪ್ರಕಟಗೊಂಡ ಬ್ಲಾಗ್‌ನಲ್ಲಿ ಹೇಳಿದ್ದಾರೆ.

ಆರ್ಥಿಕ ನೀತಿ ವಿಷಯಗಳು ಮತ್ತು ತನ್ನೊಂದಿಗೆ ಕೆಲಸ ಮಾಡುವ ಅಧಿಕಾರಿಗಳ ಕುರಿತು ಸೀತಾರಾಮನ್ ವಿಭಿನ್ನ ವ್ಯಕ್ತಿತ್ವ,ಜ್ಞಾನ,ಕೌಶಲ ಮತ್ತು ನಿಲುವನ್ನು ಹೊಂದಿದ್ದರು ಎಂದಿರುವ ಗರ್ಗ್,ಅವರು ತನ್ನ ಬಗ್ಗೆ ಕೆಲವೊಂದು ಪೂರ್ವಗ್ರಹಗಳನ್ನು ಹೊತ್ತುಕೊಂಡೇ ಬಂದಿದ್ದರು,ಇದಕ್ಕೆ ಕಾರಣಗಳು ತನಗೆ ಇನ್ನೂ ಸ್ಪಷ್ಟವಾಗಿಲ್ಲ. ಅವರಿಗೆ ತನ್ನಲ್ಲಿ ವಿಶ್ವಾಸವಿದ್ದಂತಿರಲಿಲ್ಲ,ಅವರಿಗೆ ತನ್ನೊಂದಿಗೆ ಕೆಲಸ ಮಾಡುವುದೂ ಇಷ್ಟವಿರಲಿಲ್ಲ ಎಂದಿದ್ದಾರೆ.

1983ರ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದ ಗರ್ಗ್ ಇದೇ ಮೊದಲ ಬಾರಿಗೆ ಸೀತಾರಾಮನ್‌ರನ್ನು ದೂರಿದ್ದಾರೆ. ಈ ಹಿಂದೆ ತನ್ನ ದಿಢೀರ್ ಸ್ವಯಂ ನಿವೃತ್ತಿಯ ಕುರಿತು ಮಾತನಾಡುವಾಗ ಗರ್ಗ್,ತನ್ನ ಕೆಲವು ನಿರ್ಧಾರಗಳು ತನ್ನ ಮೇಲಿನವರಿಗೆ ಇಷ್ಟವಾಗಿಲ್ಲದಿರಬಹುದು ಎಂದು ಹೇಳಿದ್ದರು.

2017 ಜೂನ್‌ನಲ್ಲಿ ವಿತ್ತ ಸಚಿವಾಲಯದಲ್ಲಿ ಕಾರ್ಯದರ್ಶಿ(ಆರ್ಥಿಕ ವ್ಯವಹಾರಗಳು)ಯಾಗಿ ನಿಯೋಜಿತರಾಗಿದ್ದ ಗರ್ಗ್ 2019 ಮಾರ್ಚ್‌ನಲ್ಲಿ ವಿತ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಅದೇ ವರ್ಷದ ಜುಲೈನಲ್ಲಿ ವಿದ್ಯುತ್ ಸಚಿವಾಲಯಕ್ಕೆ ಎತ್ತಂಗಡಿಯಾಗಿದ್ದ ಅವರು 2019 ಅಕ್ಟೋಬರ್‌ನಲ್ಲಿ ಐಎಎಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X