Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕನಿಷ್ಠ ಸರಕಾರ,ಗರಿಷ್ಠ ಆಡಳಿತ’: ಐಎಎಸ್...

‘ಕನಿಷ್ಠ ಸರಕಾರ,ಗರಿಷ್ಠ ಆಡಳಿತ’: ಐಎಎಸ್ ಪ್ರೊಬೇಷನರಿಗಳಿಗೆ ಪ್ರಧಾನಿ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ31 Oct 2020 11:53 PM IST
share
‘ಕನಿಷ್ಠ ಸರಕಾರ,ಗರಿಷ್ಠ ಆಡಳಿತ’: ಐಎಎಸ್ ಪ್ರೊಬೇಷನರಿಗಳಿಗೆ ಪ್ರಧಾನಿ ಕಿವಿಮಾತು

 ಅಹ್ಮದಾಬಾದ್,ಅ.31: ‘ಕನಿಷ್ಠ ಸರಕಾರ ಮತ್ತು ಗರಿಷ್ಠ ಆಡಳಿತ ’ ಮಂತ್ರವನ್ನು ಪಾಲಿಸುವ ಮೂಲಕ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನಿರ್ಧಾರಗಳನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪ್ರೊಬೇಷನರಿ ಐಎಎಸ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸರ್ದಾರ್ ವಲ್ಲಭ ಭಾಯಿ ಪಟೇಲರ 145ನೇ ಜಯಂತಿಯ ಅಂಗವಾಗಿ ಗುಜರಾತಿನ ಕೇವಡಿಯಾದಲ್ಲಿ ಅವರಿಗೆ ಗೌರವಗಳನ್ನು ಸಲ್ಲಿಸಿದ ಬಳಿಕ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪ್ರೊಬೇಷನರಿ ಐಎಎಸ್‌ಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ಭಾರತವು ತನ್ನ ಸ್ವಾತಂತ್ರ್ಯದ 75ನೇ ವರ್ಷವನ್ನು ಪ್ರವೇಶಿಸುತ್ತಿರುವ ನಿರ್ಣಾಯಕ ಕಾಲಘಟ್ಟದಲ್ಲಿ ನೀವು ಸೇವೆಗೆ ಸೇರುತ್ತಿದ್ದೀರಿ. ಸರಕಾರವೊಂದು ಕೇವಲ ನೀತಿಗಳ ಮೇಲೆ ನಡೆಯುವುದಿಲ್ಲ. ನೀತಿಗಳನ್ನು ಜನರಿಗಾಗಿ ರೂಪಿಸಲಾಗುತ್ತದೆ ಮತ್ತು ಅವರು ಅದರಲ್ಲಿ ಭಾಗಿಯಾಗುವ ಅಗತ್ಯವಿದೆ. ಜನರು ಸರಕಾರದ ನೀತಿಗಳು ಮತ್ತು ಕಾರ್ಯಕ್ರಮಗಳ ಫಲಾನುಭವಿಗಳಲ್ಲ,ಅವರು ನಿಜವಾದ ಪ್ರೇರಕ ಶಕ್ತಿಯಾಗಿದ್ದಾರೆ. ಹೀಗಾಗಿ ನಾವು ಸರಕಾರದಿಂದ ಆಡಳಿತದತ್ತ ಸಾಗಬೇಕಿದೆ ’ ಎಂದು ಹೇಳಿದರು.

‘ಆರಾಮದಾಯಕ, ಹೆಸರು ಮತ್ತು ಪ್ರಸಿದ್ಧಿಯನ್ನು ತರುವ ಮಾರ್ಗ ಹಾಗೂ ಹೋರಾಟದ,ಕಷ್ಟಗಳ ಮತ್ತು ಸಮಸ್ಯೆಗಳ ಮಾರ್ಗ, ಹೀಗೆ ಎರಡು ಮಾರ್ಗಗಳು ನಿಮ್ಮ ಮುಂದಿವೆ. ಆದರೆ ನನ್ನ ಅನುಭವದಿಂದ ಹೇಳುವುದಾದರೆ ನೀವು ಸುಲಭ ಮಾರ್ಗವನ್ನು ಆಯ್ಕೆ ಮಾಡಿಕೊಂಡರೆ ನಿಜವಾದ ಕಷ್ಟಗಳನ್ನು ಎದುರಿಸುತ್ತೀರಿ ’ ಎಂದ ಮೋದಿ, ದೇಶವು ಈಗ ಸಾಗುತ್ತಿರುವ ತಿರುವಿನಲ್ಲಿ ನಿಮ್ಮ ಪಾತ್ರವು ಕನಿಷ್ಠ ಸರಕಾರ,ಗರಿಷ್ಠ ಆಡಳಿತವಾಗಿದೆ. ನಿಮ್ಮ ಹಸ್ತಕ್ಷೇಪವನ್ನು ಕಡಿಮೆ ಮಾಡಿಕೊಳ್ಳುವ ಜೊತೆಗೆ ಜನಸಾಮಾನ್ಯರ ಸಬಲೀಕರಣವನ್ನೂ ನೀವು ಖಚಿತಪಡಿಸಬೇಕಾಗುತ್ತದೆ. ನೀವು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಅದು ದೇಶದ ಹಿತಾಸಕ್ತಿಯಲ್ಲಿರಬೇಕು, ದೇಶದ ಏಕತೆ ಮತ್ತು ಸಾರ್ವಭೌಮತೆಯನ್ನು ಬಲಗೊಳಿಸುವ ಉದ್ದೇಶವನ್ನು ಹೊಂದಿರಬೇಕು ಹಾಗೂ ಭಾರತದ ಸಾಂವಿಧಾನಿಕ ಸ್ಫೂರ್ತಿಯನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X