Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಂತ್ರಜ್ಞಾನ ಲಭ್ಯತೆಯ ಕೊರತೆಯಿಂದ...

ತಂತ್ರಜ್ಞಾನ ಲಭ್ಯತೆಯ ಕೊರತೆಯಿಂದ ಸೃಷ್ಟಿಯಾಗಿರುವ ಅಸಮಾನತೆ ನಿವಾರಣೆಯಾಗಬೇಕು: ಮು.ನ್ಯಾ.ಬೋಬ್ಡೆ

ವಾರ್ತಾಭಾರತಿವಾರ್ತಾಭಾರತಿ31 Oct 2020 11:56 PM IST
share
ತಂತ್ರಜ್ಞಾನ ಲಭ್ಯತೆಯ ಕೊರತೆಯಿಂದ ಸೃಷ್ಟಿಯಾಗಿರುವ ಅಸಮಾನತೆ ನಿವಾರಣೆಯಾಗಬೇಕು: ಮು.ನ್ಯಾ.ಬೋಬ್ಡೆ

 ನಾಗ್ಪುರ (ಮಹಾರಾಷ್ಟ್ರ),ಅ.31: ಕೆಲವರಿಗೆ ಡಿಜಿಟಲ್ ತಂತ್ರಜ್ಞಾನದ ಅಲಭ್ಯತೆಯಿಂದಾಗಿ ಕೊರೋನ ವೈರಸ್ ಸಾಂಕ್ರಾಮಿಕವು ಅನಿವಾರ್ಯವಾಗಿಸಿದ ನ್ಯಾಯಾಲಯಗಳ ಆನ್‌ಲೈನ್ ಕಲಾಪಗಳು ಅಸಮಾನತೆಯನ್ನು ಸೃಷ್ಟಿಸಿವೆ ಮತ್ತು ಇದು ನಿವಾರಣೆಯಾಗುವ ಅಗತ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಾಧೀಶ ಎಸ್.ಎ.ಬೋಬ್ಡೆ ಅವರು ಶನಿವಾರ ಇಲ್ಲಿ ಹೇಳಿದರು. ಇದೇ ವೇಳೆ,ಸಾಂಕ್ರಾಮಿಕದ ನಡುವೆಯೂ ದೇಶದಲ್ಲಿಯ ನ್ಯಾಯಾಲಯಗಳು ಕಾರ್ಯನಿರತವಾಗಿದ್ದು ತನಗೆ ಹೆಮ್ಮೆಯನ್ನುಂಟು ಮಾಡಿದೆ ಎಂದರು.

ಅವರು ನ್ಯಾಯಾಂಗ ಅಧಿಕಾರಿಗಳ ತರಬೇತಿ ಸಂಸ್ಥೆಯಲ್ಲಿ ಮಹಾರಾಷ್ಟ್ರ ಸಾರಿಗೆ ಇಲಾಖೆಗಾಗಿ ನ್ಯಾಯಕೌಶಲ ಇ-ಸಂಪನ್ಮೂಲ ಕೇಂದ್ರ ಮತ್ತು ವರ್ಚುವಲ್ ಕೋರ್ಟ್ ಉದ್ಘಾಟಿಸಿ ಮಾತನಾಡುತ್ತಿದ್ದರು.

ನ್ಯಾಯಕೌಶಲ ಕೇಂದ್ರವು ದೇಶದ ಯಾವುದೇ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇ-ಫೈಲ್ ಮಾಡಲು ಸೌಲಭ್ಯವನ್ನೊದಗಿಸುವ ಮೊದಲ ಇ-ಸಂಪನ್ಮೂಲ ಕೇಂದ್ರವಾಗಿದೆ.

ಕೊರೋನ ವೈರಸ್ ಪಿಡುಗು ಆರಂಭವಾದ ಬಳಿಕ ನ್ಯಾಯಾಲಯಗಳು ತಮ್ಮ ಕೆಲಸ ಮುಂದುವರಿಸಿದ್ದರೂ,ನ್ಯಾಯವನ್ನು ಪಡೆಯುವುದು ತಂತ್ರಜ್ಞಾನವನ್ನು ಅವಲಂಬಿಸಿತ್ತು. ಇದು ತಂತ್ರಜ್ಞಾನವನ್ನು ಬಳಸಲು ಸಾಧ್ಯವಿದ್ದವರು ಮತ್ತು ಸಾಧ್ಯವಿಲ್ಲದವರ ನಡುವೆ ವ್ಯತ್ಯಾಸವನ್ನುಂಟು ಮಾಡಿದ್ದು,ಇದು ಅನುದ್ದಿಷ್ಟ ಅಸಮಾನತೆಯನ್ನು ಸೃಷ್ಟಿಸಿದೆ. ವೃತ್ತಿ ಅವಕಾಶಗಳ ಅಲಭ್ಯತೆಯಿಂದಾಗಿ ಕೆಲವು ವಕೀಲರು ತರಕಾರಿ ವ್ಯಾಪಾರಕ್ಕೆ ಇಳಿಯುವಂತಾಗಿತ್ತು. ಇನ್ನು ಕೆಲವರು ತಮ್ಮ ವೃತ್ತಿಗೆ ಇತಿಶ್ರೀ ಹೇಳಲು ಮತ್ತು ಇನ್ನು ಕೆಲವರು ತಮ್ಮ ಬದುಕಿಗೇ ಅಂತ್ಯ ಹಾಡಲು ಬಯಸಿದ್ದರು ಎನ್ನುವುದನ್ನು ತನ್ನ ಗಮನಕ್ಕೆ ತರಲಾಗಿದೆ. ಹೀಗಾಗಿ ತಂತ್ರಜ್ಞಾನ ಎಲ್ಲೆಡೆ ಲಭ್ಯವಾಗುವಂತೆ ಮಾಡುವುದು ಮುಖ್ಯವಾಗಿದೆ ಎಂದು ನ್ಯಾ.ಬೋಬ್ಡೆ ಹೇಳಿದರು.

ಕೆಲವು ರಾಜ್ಯಗಳು ವೈ-ಫೈ ಸಂಪರ್ಕವನ್ನು ಒದಗಿಸುವ ಮೊಬೈಲ್ ವ್ಯಾನ್‌ಗಳನ್ನು ಪರಿಚಯಿಸಿದ್ದು,ಇದನ್ನು ಕಕ್ಷಿದಾರರು ಮತ್ತು ವಕೀಲರು ಬಳಸಿಕೊಳ್ಳಬಹುದು ಎಂದ ಅವರು,ಇಂದು ಉದ್ಘಾಟನೆಗೊಂಡಿರುವ ಇ-ಕೇಂದ್ರವು ಈ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ. ಇಂತಹ ಇನ್ನಷ್ಟು ಕೇಂದ್ರಗಳು ಆರಂಭವಾಗಲಿವೆ. ತಂತ್ರಜ್ಞಾನ ಲಭ್ಯತೆಯ ಕೊರತೆಯಿಂದಾಗಿ ಸೃಷ್ಟಿಯಾಗಿರುವ ಅಸಮಾನತೆಯ ನಿವಾರಣೆಗಾಗಿ ಈ ಕೆಲಸವನ್ನು ಸಮರೋಪಾದಿಯಲ್ಲಿ ಮಾಡಬೇಕಿದೆ ಎಂದರು.

ಮೊದಲು ತಾವು ನ್ಯಾಯಾಲಯಗಳಿಗೆ ಹಾಜರಾಗುತ್ತಿರುವಾಗ ತಮ್ಮನ್ನು ಗಮನಿಸಲಾಗುತ್ತಿತ್ತು ಮತ್ತು ತಮಗೆ ಕೆಲಸ ದೊರೆಯುತ್ತಿತ್ತು,ಆದರೆ ನ್ಯಾಯಾಲಯಗಳ ಆನ್‌ಲೈನ್ ಕಲಾಪಗಳಿಂದಾಗಿ ಇದು ಸಾಧ್ಯವಾಗುತ್ತಿಲ್ಲ ಎಂದು ಕಿರಿಯ ವಕೀಲರು ಹೇಳುತ್ತಿದ್ದಾರೆ. ಆನ್‌ಲೈನ್ ಸ್ಕ್ರೀನ್‌ಗಳಲ್ಲಿ ಹಿರಿಯ ನ್ಯಾಯವಾದಿಗಳು ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ ಮತ್ತು ಇದರಿಂದಾಗಿ ಕಿರಿಯ ವಕೀಲರಿಗೆ ವೃತ್ತಿ ಅವಕಾಶಗಳು ಕಡಿಮೆಯಾಗುತ್ತಿವೆ ಎಂದು ನ್ಯಾ.ಬೋಬ್ಡೆ ಹೇಳಿದರು.

                  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X