Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಆಲೂಗಡ್ಡೆ ದರ ಏರಿಕೆ ಈರುಳ್ಳಿಗಿಂತಲೂ...

​ಆಲೂಗಡ್ಡೆ ದರ ಏರಿಕೆ ಈರುಳ್ಳಿಗಿಂತಲೂ ಅಧಿಕ!

ವಾರ್ತಾಭಾರತಿವಾರ್ತಾಭಾರತಿ1 Nov 2020 9:40 AM IST
share
​ಆಲೂಗಡ್ಡೆ ದರ ಏರಿಕೆ ಈರುಳ್ಳಿಗಿಂತಲೂ ಅಧಿಕ!

ಹೊಸದಿಲ್ಲಿ, ನ.1: ದೇಶದಲ್ಲಿ ಗೋಧಿ ಹೊರತುಪಡಿಸಿದರೆ ಅಗತ್ಯ ಆಹಾರ ವಸ್ತುಗಳ ಸರಾಸರಿ ಚಿಲ್ಲರೆ ಬೆಲೆ ಕಳೆದ ಒಂದು ವರ್ಷದಲ್ಲಿ ಗಣನೀಯ ಏರಿಕೆಯಾಗಿದೆ. ಆಲೂಗಡ್ಡೆ ದರ ಅತಿಹೆಚ್ಚು ಏರಿಕೆಯಾಗಿದ್ದು, ಒಂದು ವರ್ಷದಲ್ಲಿ ಶೇಕಡ 92ರಷ್ಟು ಹೆಚ್ಚಿದೆ. ಶೇಕಡ 44ರಷ್ಟು ಬೆಲೆ ಏರಿಕೆ ಆಗಿರುವ ಈರುಳ್ಳಿ ಎರಡನೇ ಸ್ಥಾನದಲ್ಲಿದೆ. ಈ ಬೆಲೆ ಏರಿಕೆ ತಾತ್ಕಾಲಿಕವಾಗಿದ್ದು, ಪೂರೈಕೆ ಹೆಚ್ಚಿದ ತಕ್ಷಣ ಬೆಲೆ ಯಥಾಸ್ಥಿತಿಗೆ ಬರಲಿದೆ ಎಂದು ತಜ್ಞರು ಹೇಳಿದರೂ, ಅತ್ಯಧಿಕ ಆಹಾರ ಹಣದುಬ್ಬರಕ್ಕೆ ಜನಸಾಮಾನ್ಯರು ತತ್ತರಿಸಿದ್ದಾರೆ.

ಗ್ರಾಹಕ ವ್ಯವಹಾರಗಳ ಸಚಿವಾಲಯದ ಸರಾಸರಿ ಸಗಟು ಬೆಲೆ ಕಳೆದ ಒಂದು ವರ್ಷದಲ್ಲಿ ಶೇಕಡ 108ರಷ್ಟು ಹೆಚ್ಚಳ ದಾಖಲಿಸಿದ್ದು, ಕ್ವಿಂಟಾಲ್‌ಗೆ 1,739ರಿಂದ 3,633ಕ್ಕೇರಿದೆ. ಈರುಳ್ಳಿ ಬೆಲೆ ಕ್ವಿಂಟಲ್‌ಗೆ 5,645 ರೂಪಾಯಿ ಆಗಿದ್ದು, ಇದು ಕಳೆದ ವರ್ಷದ ಬೆಲೆಗೆ ಹೋಲಿಸಿದರೆ ಶೇಕಡ 47ರಷ್ಟು ಅಧಿಕ.

ಭಾರತೀಯ ಅಡುಗೆಯಲ್ಲಿ ಸಾಮಾನ್ಯವಾಗಿ ಬಳಕೆಯಾಗುವ ಈ ಎರಡರ ಜತೆಗೆ ಬೇಳೆಕಾಳುಗಳ ಬೆಲೆ ಕೂಡಾ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಿದೆ. ಕಳೆದ ಕೆಲ ತಿಂಗಳುಗಳಿಂದ ಆಹಾರ ಹಣದುಬ್ಬರ ಹೆಚ್ಚಳ ಒಟ್ಟಾರೆ ಹಣದುಬ್ಬರ ಹೆಚ್ಚಳಕ್ಕೂ ಕಾರಣವಾಗಿದೆ. ಐದು ವರ್ಷಗಳ ಹಿಂದಿನ ಅಂಕಿ ಸಂಖ್ಯೆಗೆ ಹೋಲಿಸಿದರೆ ಆಲೂಗಡ್ಡೆ ಬೆಲೆ ಶೇಕಡ 158ರಷ್ಟು ಏರಿಕೆ ಕಂಡಿದೆ. ಪ್ರತಿ ಕೆಜಿಗೆ 16.7 ರೂಪಾಯಿ ಇದ್ದುದು ಇದೀಗ 43 ರೂಪಾಯಿಗೆ ಹೆಚ್ಚಿದೆ. ಅಲೂಗಡ್ಡೆ ಬೆಲೆ ಇನ್ನಷ್ಟು ಹೆಚ್ಚಿದರೆ ದಾಸ್ತಾನಿಗೆ ಮಿತಿ ಹೇರುವ ಅವಕಾಶ ಸರಕಾರಕ್ಕಿದೆ. ಆದರೆ ಇದಕ್ಕೂ ಮುನ್ನ ಬೆಲೆ ಏರಿಕೆ ತಡೆಗೆ ಆಲೂಗಡ್ಡೆ ಆಮದು ಸೇರಿದಂತೆ ಇತರ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮೂಲಗಳು ಹೇಳಿವೆ. ದೇಶದಲ್ಲಿ ತರಕಾರಿ, ಮಾಂಸ, ಮೀನು ಮತ್ತು ಬೇಳೆಕಾಳುಗಳ ಬೆಲೆ ಗಣನೀಯವಾಗಿ ಹೆಚ್ಚಿದೆ.

ಹಣದುಬ್ಬರ ಏರಿಕೆ ತಡೆಯುವ ಕ್ರಮವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಬಡ್ಡಿದರ ಕಡಿತವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. "ಹಲವು ತಿಂಗಳುಗಳಿಂದ ಹಣದುಬ್ಬರ ಪ್ರಮಾಣ ಸಹಿಸಿಕೊಳ್ಳುವ ಮಟ್ಟಕ್ಕಿಂತ ಅಧಿಕ ಇದ್ದು, ವಿತ್ತೀಯ ನೀತಿ ಸಮಿತಿ ನಿರ್ಧರಿಸಿರುವಂತೆ ಪೂರೈಕೆ ವ್ಯವಸ್ಥೆಯಲ್ಲಿ ಆಗಿರುವ ಆಘಾತ ಇದಕ್ಕೆ ಮುಖ್ಯ ಕಾರಣ. ದೇಶದ ಆರ್ಥಿಕತೆ ಅನ್‌ಲಾಕ್ ಆಗುತ್ತಿದ್ದಂತೆ ಮುಂಬರುವ ತಿಂಗಳುಗಳಲ್ಲಿ ಇದು ಯಥಾಸ್ಥಿತಿಗೆ ಬರುವ ಸಾಧ್ಯತೆ ಇದೆ" ಎಂದು ಎಂಪಿಸಿ ಹೇಳಿಕೆ ನೀಡಿತ್ತು.

ಟೊಮ್ಯಾಟೊ, ಆಲೂಗಡ್ಡೆ ಮತ್ತು ಈರುಳ್ಳಿಯಂಥ ಪ್ರಮುಖ ತರಕಾರಿಗಳ ಬೆಲೆ ಮೇಲೆ ಒತ್ತಡ ಇದ್ದು, ಮೂರನೇ ತ್ರೈಮಾಸಿಕದಲ್ಲಿ ಪೂರೈಕೆ ಸರಿಯಾಗುವ ಮೂಲಕ ಇದು ನಿವಾರಣೆಯಾಗಲಿವೆ ಎಂದು ಕೇಂದ್ರೀಯ ಬ್ಯಾಂಕ್ ಅಭಿಪ್ರಾಯಪಟ್ಟಿದೆ. ಇನ್ನೊಂದೆಡೆ ಆಮದು ಸುಂಕವನ್ನು ಹೆಚ್ಚಿಸಿರುವ ಕಾರಣದಿಂದ ಬೇಳೆಕಾಳು ಮತ್ತು ಎಣ್ಣೆಬೀಜ ಬೆಲೆ ಸ್ಥಿರವಾಗಿರುವ ಸಾಧ್ಯತೆ ಇದೆ ಎಂದು ಆರ್‌ಬಿಐ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X