Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಂಧೀಜಿಯವರನ್ನು ‘ಪಾಕಿಸ್ತಾನದ ಜನಕ’...

ಗಾಂಧೀಜಿಯವರನ್ನು ‘ಪಾಕಿಸ್ತಾನದ ಜನಕ’ ಎಂದು ಕರೆದಿದ್ದ ಬಿಜೆಪಿ ನಾಯಕ ಐಐಎಂಸಿಯಲ್ಲಿ ಪ್ರೊಫೆಸರ್ ಆಗಿ ನೇಮಕ

ವಾರ್ತಾಭಾರತಿವಾರ್ತಾಭಾರತಿ1 Nov 2020 6:07 PM IST
share
ಗಾಂಧೀಜಿಯವರನ್ನು ‘ಪಾಕಿಸ್ತಾನದ ಜನಕ’ ಎಂದು ಕರೆದಿದ್ದ ಬಿಜೆಪಿ ನಾಯಕ ಐಐಎಂಸಿಯಲ್ಲಿ ಪ್ರೊಫೆಸರ್ ಆಗಿ ನೇಮಕ

ಹೊಸದಿಲ್ಲಿ, ನ.1: ಕಳೆದ ವರ್ಷ ಮಹಾತ್ಮಾ ಗಾಂಧೀಜಿಯವರನ್ನು ‘ಪಾಕಿಸ್ತಾನದ ಜನಕ’ ಎಂದು ಬಣ್ಣಿಸಿದ್ದ ಮಧ್ಯಪ್ರದೇಶ ಬಿಜೆಪಿ ಮಾಧ್ಯಮ ಘಟಕದ ಮಾಜಿ ಅಧ್ಯಕ್ಷ ಅನಿಲ್ ಕುಮಾರ ಸೌಮಿತ್ರ ಅವರನ್ನು ದಿಲ್ಲಿಯ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (ಐಐಎಂಸಿ)ನಲ್ಲಿ ಪ್ರೊಫೆಸರ್ ಆಗಿ ನೇಮಕ ಮಾಡಲಾಗಿದೆ.

ಸೌಮಿತ್ರ ನೇಮಕವು ವಿವಾದವೊಂದನ್ನು ಹುಟ್ಟುಹಾಕಿದ್ದು, ರಾಷ್ಟ್ರಪಿತನನ್ನು ಅವಮಾನಿಸಿದ್ದಕ್ಕಾಗಿ ಅವರನ್ನು ಪುರಸ್ಕರಿಸಲಾಗಿದೆ ಎಂದು ಟೀಕಾಕಾರರು ಹೇಳುತ್ತಿದ್ದಾರೆ.

2014ರಲ್ಲಿ ನರೇಂದ್ರ ಮೋದಿಯವರು ಭಾರತದ ಪ್ರಧಾನಿ ಹುದ್ದೆಗೇರಿದಾಗಿನಿಂದ ಬಿಜೆಪಿ ಮತ್ತು ಆರೆಸ್ಸೆಸ್ ಭಾರತದ ವಿಭಜನೆಗಾಗಿ ಗಾಂಧೀಜಿಯವರನ್ನು ದೂರುವುದರಿಂದ ದೂರವುಳಿದಿವೆ. ಆದರೆ ಸಂಘ ಪರಿವಾರ ಸಂಘಟನೆಗಳ ಮನಸ್ಸಿನಿಂದ ಈ ಅಭಿಪ್ರಾಯ ಮರೆಯಾಗಿಲ್ಲ.

ಗಾಂಧೀಜಿ ವಿರುದ್ಧ ಟೀಕೆಗಾಗಿ ಕಳೆದ ವರ್ಷ ಸೌಮಿತ್ರ ಅವರನ್ನು ಅಮಾನತುಗೊಳಿಸಿದಾಗ ಬಿಜೆಪಿಯು ಸ್ಪಷ್ಟೀಕರಣವೊಂದನ್ನು ನೀಡಿತ್ತು. ಸೌಮಿತ್ರರ ಸಾಮಾಜಿಕ ಜಾಲತಾಣ ಪೋಸ್ಟ್‌ಗಳು ಪಕ್ಷದ ನೀತಿಗಳು,ಪರಿಕಲ್ಪನೆಗಳು ಮತ್ತು ತತ್ತ್ವಗಳಿಗೆ ವಿರುದ್ಧವಾಗಿವೆ ಹಾಗೂ ಪಕ್ಷದ ವರ್ಚಸ್ಸಿಗೆ ಚ್ಯುತಿಯನ್ನುಂಟು ಮಾಡಿವೆ ಎಂದು ಅದು ಹೇಳಿತ್ತು.

‘ಅವರು (ಗಾಂಧೀಜಿ) ರಾಷ್ಟ್ರಪಿತರಾಗಿದ್ದಾರೆ ನಿಜ, ಆದರೆ ಪಾಕಿಸ್ತಾನದ್ದು. ದೇಶವು ಅವರಂತಹ ಕೋಟ್ಯಂತರ ಪುತ್ರರನ್ನು ಹೊಂದಿದೆ. ಕೆಲವರು ಅರ್ಹರಾಗಿದ್ದಾರೆ, ಇನ್ನು ಕೆಲವರು ಅನರ್ಹರಾಗಿದ್ದಾರೆ’ ಎಂದು ಸೌಮಿತ್ರ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಬಳಿಕ ಬಿಜೆಪಿ ಅವರ ವಿರುದ್ಧ ಶಿಸ್ತುಕ್ರಮವನ್ನು ಕೈಗೊಂಡಿತ್ತು.

ಮಧ್ಯಪ್ರದೇಶದಲ್ಲಿ ಬಿಜೆಪಿಯ ಮುಖವಾಣಿಯಾಗಿರುವ ‘ಚರೈವೇತಿ’ ಮಾಸಿಕದ ಸಂಪಾದಕರಾಗಿದ್ದಾಗ ‘ಚರ್ಚ್ ಕೆ ನರಕ್ ಮೆ ಏಕ್ ನನ್‌ಕಾ ಜೀವನ್ (ಚರ್ಚ್‌ನ ನರಕದಲ್ಲಿ ನನ್‌ವೋರ್ವರ ಜೀವನ)’ ಎಂಬ ಲೇಖನವನ್ನು ಪ್ರಕಟಿಸಿದ್ದಕ್ಕಾಗಿ 2013ರಲ್ಲಿ ಸೌಮಿತ್ರರನ್ನು ಪಕ್ಷದ ಹುದ್ದೆಯಿಂದ ತೆಗೆಯಲಾಗಿತ್ತು. ಕೆಥೋಲಿಕ್ ಚರ್ಚ್‌ಗಳಲ್ಲಿ ನನ್‌ಗಳ ಲೈಂಗಿಕ ಶೋಷಣೆ ಸಾಮಾನ್ಯವಾಗಿದೆ ಎಂಬ ಆಧಾರರಹಿತ ಪ್ರತಿಪಾದನೆಯನ್ನು ಲೇಖನವು ಒಳಗೊಂಡಿತ್ತು.

ಮಾಜಿ ಲೋಕಸಭಾ ಸ್ಪೀಕರ್, ಆಗಿನ ಇಂದೋರ್ ಸಂಸದೆ ಮತ್ತು ಸಂಘ ಪರಿವಾರದ ಪಂಡಿತ ದೀನದಯಾಳ್ ವಿಚಾರ ಪ್ರಕಾಶನದ ಅಧ್ಯಕ್ಷೆ ಯಾಗಿದ್ದ ಸುಮಿತ್ರಾ ಮಹಾಜನ್ ಅವರಿಗೆ ಪತ್ರವನ್ನು ಬರೆದಿದ್ದ ಸೌಮಿತ್ರ,ತನ್ನನ್ನು ಅಪರಾಧಿಯಂತೆ ನಡೆಸಿಕೊಳ್ಳಲಾಗುತ್ತಿದೆ.ತನ್ನ ಆರೆಸ್ಸೆಸ್ ಹಿನ್ನೆಲೆ ಮತ್ತು ಸೈದ್ಧಾಂತಿಕ ಬದ್ಧತೆಯಿಂದಾಗಿ ತಾನು ‘ಚರೈವೇತಿ ’ಯ ಸಂಪಾದಕನಾಗಿ ಆಯ್ಕೆಯಾಗಿದ್ದೆ ಎಂದು ಹೇಳಿಕೊಂಡಿದ್ದರು. ಅವರು ಪತ್ರದ ಪ್ರತಿಗಳನ್ನು ಆರೆಸ್ಸೆಸ್ ನಾಯಕರಾದ ಮೋಹನ್ ಭಾಗವತ,ಸುರೇಶ ಜೋಶಿ ಮತ್ತು ಸುರೇಶ ಸೋನಿ,ಬಿಜೆಪಿ ನಾಯಕರಾದ ರಾಜನಾಥ ಸಿಂಗ್ ಮತ್ತು ಎಲ್.ಕೆ.ಆಡ್ವಾಣಿ ಹಾಗೂ ಹಾಲಿ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಸೇರಿದಂತೆ ರಾಜ್ಯನಾಯಕರಿಗೂ ರವಾನಿಸಿದ್ದರು.

ಇದೀಗ 60ಕ್ಕೂ ಹೆಚ್ಚಿನ ಅಭ್ಯರ್ಥಿಗಳ ಸಂದರ್ಶನಗಳ ಬಳಿಕ ಸೌಮಿತ್ರರನ್ನು ಐಐಎಂಸಿಯ ಪ್ರೊಫೆಸರ್ ಆಗಿ ನೇಮಕಗೊಳಿಸಲಾಗಿದೆ. ಐಐಎಂಸಿ ಅ.20ರಂದು ಎರಡು ವರ್ಷಗಳ ಪ್ರೊಬೇಷನ್ ಅವಧಿಗೆ ಅವರ ನೇಮಕಾತಿಯನ್ನು ಅಧಿಸೂಚಿಸಿದ್ದು, ಅ.26ರಂದು ಆದೇಶವೊಂದರ ಮೂಲಕ ಅವರು ಕರ್ತವ್ಯಕ್ಕೆ ಸೇರುವ ದಿನಾಂಕವನ್ನು ದೃಢಪಡಿಸಲಾಗಿದೆ.

ರಾಷ್ಟ್ರೀಯ ಮಾಧ್ಯಮಗಳ ಹಲವಾರು ಕರೆಗಳು ಮತ್ತು ಎಸ್‌ಎಂಎಸ್‌ಗಳಿಗೆ ಸೌಮಿತ್ರ ಪ್ರತಿಕ್ರಿಯಿಸಿಲ್ಲ. ಅವರ ನೇಮಕದ ಕುರಿತು ಪ್ರತಿಕ್ರಿಯಿಸಲು ಐಐಎಂಸಿಯ ಮಹಾ ನಿರ್ದೇಶಕ ಸಂಜಯ್ ದ್ವಿವೇದಿ ಅವರು ನಿರಾಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X