Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ದಸರಾ ಆಚರಣೆಗೂ ರಾಜವಂಶಸ್ಥರಿಗೂ...

ಮೈಸೂರು ದಸರಾ ಆಚರಣೆಗೂ ರಾಜವಂಶಸ್ಥರಿಗೂ ಯಾವುದೇ ಸಂಬಂಧವಿಲ್ಲ: ಪ್ರೊ.ನಂಜರಾಜೇ ಅರಸ್

''ಸಾರ್ವಜನಿಕರ ಹಣದಿಂದ ರಾಜವಂಶಸ್ಥರಿಗೆ ಹಣ ಕೊಡಬೇಕಾಗಿಲ್ಲ''

ವಾರ್ತಾಭಾರತಿವಾರ್ತಾಭಾರತಿ1 Nov 2020 8:38 PM IST
share
ಮೈಸೂರು ದಸರಾ ಆಚರಣೆಗೂ ರಾಜವಂಶಸ್ಥರಿಗೂ ಯಾವುದೇ ಸಂಬಂಧವಿಲ್ಲ: ಪ್ರೊ.ನಂಜರಾಜೇ ಅರಸ್

ಮೈಸೂರು,ನ.1: ಇವರ ಸ್ವಂತ ಹಣದಲ್ಲಿ ಮೈಸೂರು ರಾಜವಂಶಸ್ಥರಿಗೆ 40 ಲಕ್ಷ ಅಲ್ಲ, 40 ಕೋಟಿ ರೂ ಬೇಕಾದರೂ ನೀಡಲಿ. ಆದರೆ ಸಾರ್ವಜನಿಕರ ತೆರಿಗೆ ಹಣದಿಂದಲ್ಲ ಎಂದು ಇತಿಹಾಸ ತಜ್ಞ ಪ್ರೊ.ನಂಜರಾಜೇ ಅರಸ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಅಂದಿನ ಮಹರಾಜರುಗಳಾದ ನಾಲ್ವಡಿ ಕೃಷ್ಣರಾಜ ಒಡೆಯರ್, ಜಯಚಾಮರಾಜ ಒಡೆಯರ್ ಅವರ ಕೊಡುಗೆ ಈ ನಾಡಿಗೆ ಸಾಕಷ್ಟಿದೆ. ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ಈಗಿನ ರಾಜ ರಾಜವಂಶಸ್ಥ ಕೊಡುಗೆ ಏನಿದೆ ಎಂದು ಪ್ರಶ್ನಿಸಿದರು.

ಮೈಸೂರು ದಸರಾ ಆಚರಣೆಗೂ ರಾಜವಂಶಸ್ಥರಿಗೂ ಯಾವುದೇ ಸಂಬಂಧವಿಲ್ಲ, ಅಂತಹದರಲ್ಲಿ ಅವರಿಗೆ ಗೌರವ ಸಂಭಾವನೆಯಾಗಿ ಏಕೆ 40 ಲಕ್ಷ ರೂ. ನೀಡಬೇಕು. ಚಿನ್ನದ ಅಂಬಾರಿ ಸರ್ಕಾರದ ಸ್ವತ್ತು. ಅದನ್ನು ಪಡೆಯಲು ಇವರಿಗೆ ಬಾಡಿಗೆ ರೂಪದಲ್ಲಿ ಇಷ್ಟೊಂದು ಹಣ ನೀಡಬೇಕೆ ಎಂದ ಅವರು, ಈಗಿನ ರಾಜವಂಶಸ್ಥರೇನು ಆಕಾಶದಿಂದ ಇಳಿದು ಬಂದಿಲ್ಲ ಎಂದು ಹರಿಹಾಯ್ದರು.

ಮೈಸೂರು ರಾಜವಂಶಸ್ಥರಿಗೆ ಸರ್ಕಾರ ನೀಡಿರುವ ಗೌರವ ಸಂಭಾವನೆ ಸಾರ್ವಜನಿಕರ ಭಿಕ್ಷೆ, ಈಗಿನ ರಾಜವಂಶಸ್ಥೆ ಭಿಕ್ಷೆಯನ್ನು ಪಡೆಯುತ್ತಿದ್ದಾರೆ. ಅವರಿಗೆ ನಿಜವಾದ ಗೌರವ ಮಾನವೀಯತೆ ಇದ್ದರೆ ಇಂತಹ ಸಂದರ್ಭದಲ್ಲಿ ಆ ಹಣವನ್ನು ಕೊರೋನ ವಾರಿಯರ್ಸ್‍ಗೆ ನೀಡಬಹುದಿತ್ತು. ಅಂತಹ ಮಾನವೀಯ ಗುಣ ಅವರಿಗಿಲ್ಲ ಎಂದು ಕಿಡಿಕಾರಿದರು.

ರಾಜವಂಶಸ್ಥರಿಗೆ ಹಿಂದಿನಿಂದಲೂ ಗೌರವ ಧನ ನೀಡುತ್ತಿರಲಿಲ್ಲ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಗಳಾಗಿದ್ದಾಗ ಶ್ರೀಕಂಠದತ್ತ ಒಡೆಯರ್ ಅರಮನೆ ನಿರ್ವಹಣಾ ವೆಚ್ಚಕ್ಕೆ ಸ್ವಲ್ಪ ಹಣ ನೀಡುವಂತೆ ಕೇಳಿಕೊಂಡರು. ಆಗ ಎಸ್.ಎಂ.ಕೃಷ್ಣ ಅವರು 5 ಸಾವಿರ ರೂ. ನೀಡಿದರು. ಅದು ವರ್ಷ ವರ್ಷ ನೀಡುತ್ತಾ ಬರಲಾಯಿತು. ಅಲ್ಲಿಂದ 2015 ರವರೆಗೆ ಸುಮಾರು 4 ಕೋಟಿ ರೂ. ಅಷ್ಟು ಹಣ ನೀಡಲಾಗಿದೆ. ಇಷ್ಟು ಹಣದಲ್ಲಿ ಎರಡು ಚಿನ್ನದ ಅಂಬಾರಿಯನ್ನೇ ಮಾಡಿಸಬಹುದಿತ್ತು ಎಂದು ಹೇಳಿದರು.

ಚಿನ್ನದ ಅಂಬಾರಿ ಸರ್ಕಾರದ ಸ್ವತ್ತು. ಅದನ್ನು ಜಂಬೂ ಸವಾರಿ ವೇಳೆ ನೀಡಲು ಪ್ರಮೋದಾದೇವಿ ಒಡೆಯರ್ ಹಣ ಕೇಳುತ್ತಿದ್ದಾರೆ. ಹಣ ನೀಡದಿದ್ದರೆ ಚಿನ್ನದ ಅಂಬಾರಿ ಕೊಡುವುದಿಲ್ಲ ಎಂದು ಬ್ಲಾಕ್ ಮೇಲ್ ಮಾಡುತ್ತಾರೆ. ಅದಕ್ಕೆ ಸರ್ಕಾರದವರು ಹಣ ನೀಡುತ್ತಿದ್ದಾರೆ. ಇವರಿಗೆ ನಿಜವಾಗಲೂ ಮಾನ ಮರ್ಯಾದೆ ಇದ್ದರೆ ಅವರಿಗೆ ಹಣ ನೀಡಬಾರದು ಎಂದು ಹೇಳಿದರು.

ರಾಜವಂಶಸ್ಥರಿಗೆ ನೀಡುತ್ತಿರುವ ಹಣದಲ್ಲಿ ನನ್ನದೂ ಪಾಲಿದೆ. ಹಾಗಾಗಿ ನಾನು ಪ್ರಶ್ನೆ ಮಾಡುತ್ತೇನೆ. ಅವರಿಗೆ ನೀಡುವ ಹಣದ ಬಗ್ಗೆ ಯಾರೂ ಪ್ರಶ್ನೆ ಮಾಡಬಾರದು ಎಂದರೆ ಹೇಗೆ ? ಸೋಮಶೇಖರ್ ಅವರ ಮನೆಯ ಹಣವನ್ನು ತಂದು ಕೊಡಲಿ. ಇದನ್ನು ಪ್ರಶ್ನೆ ಮಾಡಬಾರದು ಎಂದು ಹೇಳಲು ಸೋಮಶೇಖರ್ ಯಾರು ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ಬರೀ ಸುಳ್ಳುಗಳನ್ನೇ ಹೇಳಿಕೊಂಡು ತಿರುಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಶಾಸಕನ ವರೆಗೂ ಬರೀ ಸುಳ್ಳುಗಳೆ. ಈ ಹಿಂದೆ ಮೈಸೂರಿಗೆ ಬರುವ ಯಾವುದೇ ರಾಜಕಾರಣಿಗಳು ಚಾಮುಂಡಿ ಬೆಟ್ಟಕ್ಕೆ ಹೋಗಿ ಶ್ರೀಚಾಮುಂಡೇಶ್ವರಿ ದೇವಿ ದರ್ಶನ ಮಾಡಿಕೊಂಡು ಬರುತ್ತಿದ್ದರು. ಆದರೆ ಬಿಜೆಪಿಯವರ ಅಧಿಕಾರಕ್ಕೆ ಬಂದ ಮೇಲೆ ಇನ್ನೊಂದು ಹೊಸ ಸಂಪ್ರದಾಯವನ್ನು ಹುಟ್ಟು ಹಾಕಿದ್ದಾರೆ. ಅರಮನೆಗೆ ಬಂದು ಮತ್ತೊಬ್ಬ ದೇವಿ ದರ್ಶನ ಮಾಡುವುದನ್ನು ಪಾಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X