Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಬಿಸಿಎಸ್ ಪದ್ಧತಿ ಕೈ ಬಿಡುವಂತೆ...

ಸಿಬಿಸಿಎಸ್ ಪದ್ಧತಿ ಕೈ ಬಿಡುವಂತೆ ಆಗ್ರಹಿಸಿ ಸಾಹಿತಿಗಳು, ಚಿಂತಕರಿಂದ ಸಿಎಂಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ1 Nov 2020 8:56 PM IST
share
ಸಿಬಿಸಿಎಸ್ ಪದ್ಧತಿ ಕೈ ಬಿಡುವಂತೆ ಆಗ್ರಹಿಸಿ ಸಾಹಿತಿಗಳು, ಚಿಂತಕರಿಂದ ಸಿಎಂಗೆ ಪತ್ರ

ಬೆಂಗಳೂರು, ನ.1 : ಸಿಬಿಸಿಎಸ್ ಪದ್ದತಿಯನ್ನು ಕೈ ಬಿಟ್ಟು ಕನ್ನಡ ಬೋಧನೆಯನ್ನು ಅವಶ್ಯಕ ವಿಷಯ ಎಂದು ಕಡ್ಡಾಯಗೊಳಿಸುವಂತೆ ಹಿರಿಯ ಸಾಹಿತಿಗಳಾದ ಪ್ರೊ.ಬರಗೂರು ರಾಮಚಂದ್ರಪ್ಪ, ದೇವನೂರು ಮಹದೇವ, ಡಾ.ಪುರುಷೋತ್ತಮ ಬಿಳಿಮಲೆ, ಎಂ.ಡಿ.ಒಕ್ಕುಂದ ಸೇರಿದಂತೆ ಹಲವು ಹಿರಿಯ ಸಾಹಿತಿಗಳು, ಚಿಂತಕರು ಹಾಗೂ ಉಪನ್ಯಾಸಕರು ಮುಖ್ಯಮಂತ್ರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಸ್ನಾತಕ ಹಾಗೂ ಸ್ನಾತಕೋತ್ತರ ಹಂತಗಳಲ್ಲಿ ಸಿ.ಬಿ.ಸಿ.ಎಸ್. ಪದ್ಧತಿಯನ್ನು ಅಳವಡಿಸಿಕೊಳ್ಳಲು ಆದೇಶಿಸಿದ್ದು ಅದರ ಪ್ರಕ್ರಿಯೆಆರಂಭವಾಗಿದೆ. ಸಿ.ಬಿ.ಸಿ.ಎಸ್. (ಚೊಯ್ಸ್ ಬೇಸ್ಡ್‍ಕ್ರೆಡಿಟ್ ಸಿಸ್ಟಮ್ ಆಯ್ಕೆಯಾಧಾರಿತ ಗಳಿಕೆಯ ಪದ್ದತಿ) ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಗಳ ಅಧ್ಯಯನಕ್ಕೆ ತುಂಬ ಕಡಿಮೆ ಅವಕಾಶವನ್ನು ಕಲ್ಪಿಸುತ್ತಿದೆ. ಈ ಹೊಸ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಳ್ಳುವಲ್ಲಿ ಪದವಿ ಹಂತದಲ್ಲಿ ಕನ್ನಡ ಅಧ್ಯಯನಕ್ಕೆ ಹಾಗೂ ಕನ್ನಡ ಅಧ್ಯಾಪಕರಿಗೆ ತೀವ್ರ ಆತಂಕ ಹಾಗೂ ತೊಂದರೆಗಳು ನಿರ್ಮಾಣವಾಗುತ್ತಿವೆ. ಹಾಗಾಗಿ ಸಿ.ಬಿ.ಸಿ.ಎಸ್ ಪದ್ದತಿಯನ್ನು ಕೈ ಬಿಡಬೇಕು. ಬಿಡದೆ ಹೋದಲ್ಲಿ ಹೋರಾಟವನ್ನು ನಡೆಸುವುದಾಗಿ ಎಚ್ಚರಿಸಿದ್ದಾರೆ.

ಕರ್ನಾಟಕದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಕನ್ನಡವನ್ನು ಆವಶ್ಯಕ ಹಾಗೂ ಐಚ್ಛಿಕ ವಿಷಯವಾಗಿ ಬೋಧಿಸಲಾಗುತ್ತಿದ್ದು ಕನ್ನಡ ಆವಶ್ಯಕ ವಿಷಯದ ಕಾರ್ಯ ಭಾರವನ್ನು ಕಡಿತಗೊಳಿಸಲಾಗಿದೆ. ಸಿ.ಬಿ.ಸಿ.ಎಸ್. ಪದ್ಧತಿಯನ್ನು ಜಾರಿಗೆ ತರುವಲ್ಲಿ, ಬರುವ ಮೂರು ವರ್ಷಗಳಲ್ಲಿ ಕನ್ನಡ ವಿಷಯದ 20 ರಿಂದ 30 ತಾಸುಗಳ ಬೋಧನಾ ಕಾರ್ಯಭಾರದ ಕೊರತೆ ಎದುರಾಗುವ ಸಾಧ್ಯತೆಯಿದೆ. ಪದವಿ ಹಂತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬೋಧಿಸಬೇಕೆಂಬ ಹಿಂದಿನ ಸರಕಾರದ ಆಜ್ಞೆಯನ್ನು ಕಡೆಗಣಸಿ, ಉನ್ನತ ಶಿಕ್ಷಣ ಪರಿಷತ್ತು ಯಾವ ಭಾಷೆಯನ್ನಾದರೂ ಕಲಿಯಬಹುದೆಂದು ತಿದ್ದುಪಡಿಯನ್ನು ತಂದಿದೆ. ಇದು ಅತ್ಯಂತ ಆತಂಕಕಾರಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. 

ಈ ಕಾರಣಗಳಿಂದ ಕನ್ನಡ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಕನ್ನಡ ವಿಷಯದ ಅತಿಥಿ ಉಪನ್ಯಾಸಕರು ಬರುವ ವರ್ಷದಿಂದಲೇ ಕೆಲಸ ಕಳೆದುಕೊಳ್ಳುತ್ತಾರೆ. ಮುಂಬರುವ ದಿನಗಳಲ್ಲಿ ಕನ್ನಡ ಸ್ನಾತಕೋತ್ತರ ಪದವೀಧರರಿಗೆ ಕನ್ನಡ ಪ್ರಾಧ್ಯಾಪಕರ ಹುದ್ದೆಗಳು ಕೈ ತಪ್ಪಲಿವೆ. ಕರ್ನಾಟಕದಲ್ಲಿ ಕನ್ನಡವನ್ನು ಪದವಿ ಹಾಗೂ ಸ್ನಾತಕೋತ್ತರ ಹಂತದಲ್ಲಿ ಅಧ್ಯಯನ ಮಾಡುವ ಕನ್ನಡದ ಮಕ್ಕಳ ಪಾಲಿನ ಅನ್ನವನ್ನು ಕಸಿದು ಕೊಳ್ಳುವ ಸಂಕಟ ಎದುರಾಗಿದೆ. ಇದು ಕೇವಲ ಕಾರ್ಯಭಾರ ಮತ್ತು ಉದ್ಯೋಗಾವಕಾಶದ ಪ್ರಶ್ನೆ ಮಾತ್ರವಲ್ಲ, ಪದವಿ ಹಂತದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಹೋರಾಟಗಳ ಅಧ್ಯಯನಕ್ಕೆ ಆ ಮೂಲಕ ನಾಡು-ನುಡಿ ಕುರಿತಂತೆ ಹೊಸ ತಲೆಮಾರಿನಲ್ಲಿ ಸಹಜವಾಗಿ ಅರಳಬೇಕಾದ ಅರಿವು, ಚಿಂತನೆ ಹಾಗೂ ಮುನ್ನೋಟಗಳಿಗೆ ದೊಡ್ಡ ಹಿನ್ನಡೆಯಾಗಿದೆ. ಹೀಗಾಗಿ ತಾವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಸಿ ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸುತ್ತೇವೆ. ಈ ನಿಟ್ಟಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಕನ್ನಡ ಅಧ್ಯಾಪಕರ ಪರಿಷತ್ತು ಆರಂಭಿಸಿರುವ ತೀವ್ರ ಹೋರಾಟವನ್ನು ಬೆಂಬಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಬೇಡಿಕೆಗಳು: ಎಲ್ಲ ಪದವಿಗಳಲ್ಲೂ ಆರೂ ಸೆಮಿಸ್ಟರ್ ಗಳಿಗೆ ಕನ್ನಡ ಆವಶ್ಯಕ ವಿಷಯವನ್ನು ಕಡ್ಡಾಯಗೊಳಿಸಬೇಕು. ಕನ್ನಡೇತರರಿಗೆ `ಕನ್ನಡ ಕಲಿ-ನಲಿ' ಮಾದರಿಯ ಪ್ರಾಥಮಿಕ ಪಠ್ಯವನ್ನು ನಿಗದಿಪಡಿಸಬೇಕು. ನಾಡು ನುಡಿ ಎಂಬ ಕಾರಣಕ್ಕೆ ಕನ್ನಡ ಆವಶ್ಯಕ ವಿಷಯದ ಬೋಧನಾ ಕಾರ್ಯಭಾರವನ್ನು ಮೊದಲಿನಂತೆ 5 ಗಂಟೆಗೆ ನಿಗದಿಪಡಿಸಬೇಕು. ಎಲ್ಲ ಪದವಿಗೂ ಪ್ರತ್ಯೇಕ ಪಠ್ಯ ನಿಗದಿಗೊಳಿಸಬೇಕು. ಬಿ.ಎ. ಕನ್ನಡ ಆನರ್ಸನ್ನು ಸದರಿ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಅವಕಾಶವನ್ನು ಕಲ್ಪಿಸಬೇಕು ಮತ್ತು ನಾಡು ನುಡಿ ಎಂಬ ಕಾರಣಕ್ಕೆ ಐಚ್ಛಿಕ ಕನ್ನಡದಂತೆ ಕನಿಷ್ಠ ವಿದ್ಯಾರ್ಥಿಗಳ ಸಂಖ್ಯೆಯನ್ನು 5ಕ್ಕೆ ನಿಗದಿಪಡಿಸಬೇಕು. ಪ್ರತಿ ತರಗತಿಯ ವಿದ್ಯಾರ್ಥಿಗಳ ಗರಿಷ್ಠ ಸಂಖ್ಯೆಯನ್ನು ನಾಡು ನುಡಿಯ ರಕ್ಷಣೆಯ ಕಾರಣಕ್ಕೆ 40ಕ್ಕೆ ನಿಗದಿಗೊಳಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X