Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ವರ್ಷ ಜಾಹೀರಾತುಗಳಿಗಾಗಿ ಮೋದಿ...

ಕಳೆದ ವರ್ಷ ಜಾಹೀರಾತುಗಳಿಗಾಗಿ ಮೋದಿ ಸರಕಾರ ವ್ಯಯಿಸಿದ ತೆರಿಗೆದಾರರ ಹಣ ಎಷ್ಟು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ1 Nov 2020 9:17 PM IST
share
ಕಳೆದ ವರ್ಷ ಜಾಹೀರಾತುಗಳಿಗಾಗಿ ಮೋದಿ ಸರಕಾರ ವ್ಯಯಿಸಿದ ತೆರಿಗೆದಾರರ ಹಣ ಎಷ್ಟು ಗೊತ್ತೇ ?

ಹೊಸದಿಲ್ಲಿ, ನ.1: ಕಳೆದ ಹಣಕಾಸು ವರ್ಷದಲ್ಲಿ ವೃತ್ತಪತ್ರಿಕೆಗಳು, ವಿದ್ಯುನ್ಮಾನ ಮಾಧ್ಯಮಗಳು, ಹೋರ್ಡಿಂಗ್‌ಗಳು ಇತ್ಯಾದಿಗಳಲ್ಲಿ ಜಾಹೀರಾತುಗಳ ಮೂಲಕ ತನ್ನ ಪ್ರಚಾರಕ್ಕಾಗಿ ನರೇಂದ್ರ ಮೋದಿ ಸರಕಾರವು 713.20 ಕೋ.ರೂ. ತೆರಿಗೆದಾರರ ಹಣವನ್ನು ವೆಚ್ಚ ಮಾಡಿದೆ.

ಆರ್‌ಟಿಐ ಕಾರ್ಯಕರ್ತ ಜತಿನ್ ದೇಸಾಯಿ ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿರುವ ಬ್ಯೂರೊ ಆಫ್ ಔಟ್‌ರೀಚ್ ಆ್ಯಂಡ್ ಕಮ್ಯುನಿಕೇಷನ್, ಕೇಂದ್ರ ಸರಕಾರವು 2019-20ರಲ್ಲಿ ಜಾಹೀರಾತುಗಳಿಗಾಗಿ ಪ್ರತಿದಿನ ಸರಾಸರಿ 1.95 ಕೋ.ರೂ.ಗಳನ್ನು ವ್ಯಯಿಸಿದೆ ಎಂದು ತಿಳಿಸಿದೆ.

ಮುದ್ರಿತ ಜಾಹೀರಾತುಗಳಿಗೆ 295.05 ಕೋ.ರೂ., ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತುಗಳಿಗೆ 317.05 ಕೋ.ರೂ. ಮತ್ತು ಹೊರಾಂಗಣ ಜಾಹೀರಾತುಗಳಿಗಾಗಿ 101.10 ಕೋ.ರೂ.ಗಳನ್ನು ಪಾವತಿಸಲಾಗಿದೆ ಎಂದು ಆರ್‌ಟಿಐ ಉತ್ತರದಲ್ಲಿ ತಿಳಿಸಲಾಗಿದೆ. ಆದರೆ ವಿದೇಶಿ ಮಾಧ್ಯಮಗಳಲ್ಲಿ ಪ್ರಚಾರಕ್ಕಾಗಿ ಜಾಹೀರಾತುಗಳಿಗೆ ಸರಕಾರವು ವೆಚ್ಚ ಮಾಡಿರುವ ಹಣದ ಬಗ್ಗೆ ಯಾವುದೇ ಮಾಹಿತಿಯನ್ನು ಅದು ಒದಗಿಸಿಲ್ಲ.

2019, ಜೂನ್‌ನಲ್ಲಿ ಮುಂಬೈನ ಆರ್‌ಟಿಐ ಕಾರ್ಯಕರ್ತ ಅನಿಲ್ ಗಲಗಲಿ ಅವರ ಅರ್ಜಿಗೆ ಉತ್ತರಿಸಿದ್ದ ಸಚಿವಾಲಯವು ಮುದ್ರಣ, ವಿದ್ಯುನ್ಮಾನ ಮತ್ತು ಹೊರಾಂಗಣ ಮಾಧ್ಯಮಗಳಲ್ಲಿ ಜಾಹೀರಾತುಗಳಿಗಾಗಿ ತಾನು 3,767.2651 ಕೋ.ರೂ.ತೆರಿಗೆದಾರರ ಹಣವನ್ನು ವ್ಯಯಿಸಿದ್ದಾಗಿ ತಿಳಿಸಿತ್ತು.

ಒಂದು ವರ್ಷ ಮೊದಲು, 2018 ಮೇ ತಿಂಗಳಿನಲ್ಲಿ ಸಚಿವಾಲಯವು ಗಲಗಲಿಯವರಿಗೆ ನೀಡಿದ್ದ ಇನ್ನೊಂದು ಆರ್‌ಟಿಐ ಉತ್ತರದಲ್ಲಿ ಮೋದಿ ಸರಕಾರವು 2014, ಜೂನ್‌ನಲ್ಲಿ ಅಧಿಕಾರಕ್ಕೆ ಬಂದಾಗಿನಿಂದ 4343.26 ಕೋ.ರೂ.ಗಳನ್ನು ಮಾಧ್ಯಮಗಳಲ್ಲಿ ಜಾಹೀರಾತುಗಳು ಮತ್ತು ಪ್ರಚಾರಕ್ಕಾಗಿ ವ್ಯಯಿಸಿದೆ ಎಂದು ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X