Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ಉಲ್ಬಣ: ಬ್ರಿಟನ್‌ನಲ್ಲಿ ನಾಲ್ಕು...

ಕೊರೋನ ಉಲ್ಬಣ: ಬ್ರಿಟನ್‌ನಲ್ಲಿ ನಾಲ್ಕು ವಾರ ಲಾಕ್‌ಡೌನ್

ವಾರ್ತಾಭಾರತಿವಾರ್ತಾಭಾರತಿ1 Nov 2020 10:28 PM IST
share
ಕೊರೋನ ಉಲ್ಬಣ: ಬ್ರಿಟನ್‌ನಲ್ಲಿ ನಾಲ್ಕು ವಾರ ಲಾಕ್‌ಡೌನ್

ಲಂಡನ್, ನ.1: ಕೊರೋನ ವೈರಸ್ ಹಾವಳಿ ಉಲ್ಬಣಿಸುವ ಸಾಧ್ಯತೆಯಿದೆಯೆಂದು ಆಸ್ಪತ್ರೆಗಳು ಹಾಗೂ ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ದೇಶಾದ್ಯಂತ ನಾಲ್ಕು ವಾರಗಳ ಕೋವಿಡ್-19 ಲಾಕ್‌ಡೌನ್ ಘೋಷಿಸಿದ್ದಾರೆ.

ಮಂಗಳವಾರದಿಂದ ಲಾಕ್‌ಡೌನ್ ಜಾರಿಗೆ ಬರಲಿದ್ದು, ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ ಉಳಿದ ಸಮಯದಲ್ಲಿ ಜನರು ಮನೆಯಲ್ಲೇ ಉಳಿದುಕೊಳ್ಳಬೇಕೆಂದು ನೂತನ ಕಾನೂನಿನಲ್ಲಿ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಉದ್ಯೋಗ, ಶಿಕ್ಷಣ ಅಥವಾ ಜಿಮ್ ಮತ್ತಿತರ ಚಟುವಟಿಕೆಗಳಿಗೆ ಲಾಕ್‌ಡೌನ್‌ನಿಂದ ವಿನಾಯ್ತಿ ನೀಡಲಾಗಿದೆ. ಆದರೆ ಅವಶ್ಯಕ ವಸ್ತುಗಳ ಸಾಮಾಗ್ರಿಗಳ ಮಳಿಗೆಗಳನ್ನು ಮುಚ್ಚುಗಡೆಗೊಳಿಸಲಾಗಿದೆ.

ಈ ವರ್ಷದ ಆರಂಭದಲ್ಲಿ ಬ್ರಿಟನ್ ಲಾಕ್‌ಡೌನ್ ಘೋಷಿಸಿದಾಗ ಶಾಲೆಗಳು, ಕಾಲೇಜುಗಳು ಹಾಗೂ ವಿವಿಗಳನ್ನು ಮುಚ್ಚುಗಡೆಗೊಳಿಸಲಾಗಿದೆ. ಆದರೆ ನೂತನ ಲಾಕ್‌ಡೌನ್‌ನಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ. ಪಬ್ ಹಾಗೂ ರೆಸ್ಟಾರೆಂಟ್‌ಗಳನ್ನು ಮುಚ್ಟಲು ಆದೇಶಿಸಲಾಗಿದೆ. ನೂತನ ನಿರ್ಬಂಧಗಳು ಡಿಸೆಂಬರ್ 2ರವರೆಗೆ ಮುಂದುವರಿಯುವ ನಿರೀಕ್ಷಯಿದೆ ಎಂದು ಮೂಲಗಳು ಹೇಳಿವೆ.

 ಶನಿವಾರ ಬೆಳಗ್ಗೆ ಡೌನಿಂಗ್ ಸ್ಟ್ರೀಟ್‌ನಲ್ಲಿ ತನ್ನ ಅಧಿಕೃತ ನಿವಾಸದಲ್ಲಿ ಸಂಪುಟದ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪ್ರಧಾನಿ ಬೋರಿಸ್ ಜಾನ್ಸನ್ ಅವರು ‘‘ಕ್ರಮ ಕೈಗೊಳ್ಳಲೇಬೇಕಾದ ಸಮಯ ಈಗ ಬಂದಿದೆ, ಯಾಕೆಂದರೆ ನಮಗೆ ಬೇರೆ ಯಾವುದೇ ಪರ್ಯಾಯ ಮಾರ್ಗವಿಲ್ಲ’’ ಎಂದು ಹೇಳಿದರು.

‘‘ಪ್ರಕೃತಿಯ ಎದುರು ನಾವು ವಿನೀತರಾಗಬೇಕಿದೆ. ಯುರೋಪ್‌ನ ಹೆಚ್ಚಿನೆಡೆ ಇರುವಂತೆ ಬ್ರಿಟನ್‌ನಲ್ಲಿಯೂ ಕೋರೋನ ವೈರಸ್ ನಮ್ಮ ವೈಜ್ಞಾನಿಕ ಸಲಹೆಗಾರರು ಅಂದಾಜಿಸಿದ್ದಕ್ಕಿಂತಲೂ ವೇಗವಾಗಿ ಹರಡುತ್ತಿದೆ’’ ಎಂದು ಜಾನ್ಸನ್ ತಿಳಿಸಿದರು.

ಕೊರೋನ ವೈರಸ್ ಹಾವಳಿಯಿಂದ ತತ್ತರಿಸಿರುವ ಬ್ರಿಟನ್‌ನಲ್ಲಿ ಈಗ ಸೋಂಕಿತರ ಸಂಖ್ಯೆ 10 ಲಕ್ಷವನ್ನು ದಾಟಿದೆ. ಶನಿವಾರ ಒಂದೇ ದಿನದಲ್ಲಿ 22 ಸಾವಿರ ಮಂದಿಗೆ ಹೊಸತಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ತಾಸುಗಳಲ್ಲಿ 1,239 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಇದು ಏಪ್ರಿಲ್‌ನಿಂದೀಚೆಗೆ ಒಂದು ದಿನದ ಗರಿಷ್ಠ ಏರಿಕೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X