Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2021ರ ಎಪ್ರಿಲ್-ಜೂನ್ ಈ ಅವಧಿಯಲ್ಲಿ...

2021ರ ಎಪ್ರಿಲ್-ಜೂನ್ ಈ ಅವಧಿಯಲ್ಲಿ ಕೊರೋನ ಲಸಿಕೆ ವಿತರಿಸುವ ನಿರೀಕ್ಷೆ ಇದೆ ಎಂದ ಭಾರತ್ ಬಯೊಟೆಕ್

ವಾರ್ತಾಭಾರತಿವಾರ್ತಾಭಾರತಿ1 Nov 2020 11:03 PM IST
share
2021ರ ಎಪ್ರಿಲ್-ಜೂನ್ ಈ ಅವಧಿಯಲ್ಲಿ ಕೊರೋನ ಲಸಿಕೆ ವಿತರಿಸುವ ನಿರೀಕ್ಷೆ ಇದೆ ಎಂದ ಭಾರತ್ ಬಯೊಟೆಕ್

ಹೊಸದಿಲ್ಲಿ, ನ.1: ಮುಂದಿನ ವರ್ಷದ ದ್ವಿತೀಯ ತ್ರೈಮಾಸಿಕದಲ್ಲಿ ಕೋವಿಡ್-19 ಲಸಿಕೆಯನ್ನು ವಿತರಿಸುವ ಯೋಜನೆಯಿದೆ ಎಂದು ಭಾರತ್ ಬಯೊಟೆಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಸಾಯಿಪ್ರಸಾದ್ ಹೇಳಿದ್ದಾರೆ.

   ದೇಶದ ಔಷಧ ನಿಯಂತ್ರಕ ಪ್ರಾಧಿಕಾರದ ಅನುಮೋದನೆ ದೊರೆತರೆ ಮುಂದಿನ ವರ್ಷದ ದ್ವಿತೀಯ ತ್ರೈಮಾಸಿಕ (ಎಪ್ರಿಲ್‌ನಿಂದ -ಜೂನ್) ಅವಧಿಯಲ್ಲಿ ಕೋವಿಡ್ ಲಸಿಕೆಯನ್ನು ಮಾರುಕಟ್ಟೆಗೆ ಪರಿಚಯಿಸಬಹುದು. ಆದರೆ ಈಗ ಮೂರನೇ ಹಂತದ ಪರೀಕ್ಷಾ ಪ್ರಯೋಗ ನಡೆಸುವ ಬಗ್ಗೆ ಸಂಸ್ಥೆ ಗಮನ ಕೇಂದ್ರೀಕರಿಸಿದೆ. ಕೊವಾಕ್ಸಿನ್ ಲಸಿಕೆಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ಐಸಿಎಂಆರ್), ರಾಷ್ಟ್ರೀಯ ವೈರಾಣು ಸಂಸ್ಥೆ(ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ) ಜಂಟಿಯಾಗಿ ಅಭಿವೃದ್ಧಿಪಡಿಸುತ್ತಿದೆ. ಕಳೆದ ಹಂತದ ಪರೀಕ್ಷಾ ಪ್ರಯೋಗದ ವರದಿಯನ್ನು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಸಲ್ಲಿಸಿದ್ದು ಅವರಿಂದ ಅನುಮೋದನೆ ದೊರಕಿದೊಡನೆ ಮೂರನೇ ಹಂತದ ಪರೀಕ್ಷಾ ಪ್ರಯೋಗ ನಡೆಸಲಾಗುವುದು ಎಂದು ಸಾಯಿಪ್ರಸಾದ್ ಹೇಳಿದ್ದಾರೆ.

  ಮೂರನೇ ಹಂತದ ಪರೀಕ್ಷೆಯನ್ನು ಸುಮಾರು 14 ರಾಜ್ಯಗಳ 25ರಿಂದ 30 ನಗರಗಳಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳಿಗೆ ತಲಾ ಎರಡು ಡೋಸ್ ಲಸಿಕೆ ನೀಡಲಾಗುತ್ತದೆ. ಒಂದು ಆಸ್ಪತ್ರೆಯಲ್ಲಿ ಸುಮಾರು 2,000 ಅಭ್ಯರ್ಥಿಗಳು ಪರೀಕ್ಷಾ ಪ್ರಯೋಗಕ್ಕೆ ನೋಂದಾಯಿಸಿಕೊಳ್ಳಬಹುದು. ಲಸಿಕೆ ಅಭಿವೃದ್ಧಿಪಡಿಸಲು 350-400 ಕೋಟಿ ರೂ.ಯಷ್ಟು ಮೊತ್ತವನ್ನು ಹೂಡಿಕೆ ಮಾಡಲಾಗಿದ್ದು ಇದರಲ್ಲಿ ಮುಂದಿನ 6 ತಿಂಗಳು ನಡೆಯಲಿರುವ ತೃತೀಯ ಹಂತದ ಪರೀಕ್ಷಾ ಪ್ರಯೋಗದ ವೆಚ್ಚವೂ ಸೇರಿದೆ.

 ಲಸಿಕೆ ಸಿದ್ಧವಾದ ಬಳಿಕ ಅದನ್ನು ಸರಕಾರಕ್ಕೆ ಮಾತ್ರವಲ್ಲ ಖಾಸಗಿ ಸಂಸ್ಥೆಗಳಿಗೂ ಒದಗಿಸಲಾಗುವುದು. ಅಲ್ಲದೆ, ರಫ್ತು ಮಾಡುವ ಬಗ್ಗೆ ಕೆಲವು ದೇಶಗಳೊಂದಿಗೆ ಪ್ರಾಥಮಿಕ ಹಂತದ ಮಾತುಕತೆ ನಡೆಯುತ್ತಿದೆ. ಲಸಿಕೆಯ ದರವನ್ನು ಇದುವರೆಗೆ ನಿಗದಿಗೊಳಿಸಿಲ್ಲ. ಲಸಿಕೆಯ ಉತ್ಪಾದನೆ ಆರಂಭವಾದಾಗ ತಗುಲಿದ ಒಟ್ಟು ವೆಚ್ಚವನ್ನು ಪರಿಗಣಿಸಿ ದರ ನಿಗದಿಗೊಳಿಸಲಾಗುವುದು ಎಂದು ಪ್ರಸಾದ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X