Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆಳಗಾವಿ ವಿವಾದ: ಕನ್ನಡ ರಾಜ್ಯೋತ್ಸವದ...

ಬೆಳಗಾವಿ ವಿವಾದ: ಕನ್ನಡ ರಾಜ್ಯೋತ್ಸವದ ದಿನ ತೋಳಿಗೆ ಕಪ್ಪು ರಿಬ್ಬನ್ ಕಟ್ಟಿ ಪ್ರತಿಭಟಿಸಿದ ಮಹಾರಾಷ್ಟ್ರ ಸಚಿವರು

ವಾರ್ತಾಭಾರತಿವಾರ್ತಾಭಾರತಿ2 Nov 2020 12:25 AM IST
share
ಬೆಳಗಾವಿ ವಿವಾದ: ಕನ್ನಡ ರಾಜ್ಯೋತ್ಸವದ ದಿನ ತೋಳಿಗೆ ಕಪ್ಪು ರಿಬ್ಬನ್ ಕಟ್ಟಿ ಪ್ರತಿಭಟಿಸಿದ ಮಹಾರಾಷ್ಟ್ರ ಸಚಿವರು

  ಮುಂಬೈ, ನ. 1: ಕರ್ನಾಟಕ ರಾಜ್ಯ ಉದಯದ ದಿನವಾದ ನವೆಂಬರ್ 1ನ್ನು ‘ಕಪ್ಪು ದಿನ’ವನ್ನಾಗಿ ಆಚರಿಸಿದ ಬೆಳಗಾವಿ ಮರಾಠಿ ಮಾತನಾಡುವ ಜನರಿಗೆ ಬೆಂಬಲ ವ್ಯಕ್ತಪಡಿಸಲು ಮಹಾರಾಷ್ಟ್ರ ಸಂಪುಟ ಸಚಿವರು ರವಿವಾರ ತೋಳಿಗೆ ಕಪ್ಪು ರಿಬ್ಬನ್ ಕಟ್ಟಿಕೊಂಡಿದ್ದರು.

ಬೆಳಗಾವಿ ಈ ಹಿಂದಿನ ಬಾಂಬೆ ಪ್ರೆಸಿಡೆನ್ಸಿಯ ಭಾಗ ಎಂದು ಮಹಾರಾಷ್ಟ್ರ ಪ್ರತಿಪಾದಿಸುತ್ತಿದೆ. ಆದರೆ, ಪ್ರಸ್ತುತ ಭಾಷೆ ಆಧಾರದಲ್ಲಿ ಬೆಳಗಾವಿ ಕರ್ನಾಟಕದಲ್ಲಿ ಇದೆ. ಬೆಳಗಾವಿ ಹಾಗೂ ಇತರ ಗಡಿ ಪ್ರದೇಶದ ಕುರಿತ ಎರಡು ರಾಜ್ಯಗಳ ನಡುವಿನ ವಿವಾದ ಹಲವು ವರ್ಷಗಳಿಂದ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ.

ಮಹಾರಾಷ್ಟ್ರದ ಜಲ ಸಂಪನ್ಮೂಲ ಸಚಿವ ಹಾಗೂ ಎನ್‌ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ರವಿವಾರ ತೋಳಿಗೆ ಕಪ್ಪು ರಿಬ್ಬನ್ ಕಟ್ಟಿಕೊಂಡು ಕಚೇರಿಗೆ ಹಾಜರಾದರು. ರಾಜ್ಯ ನಗರಾಭಿವೃದ್ಧಿ ಸಚಿವ ಹಾಗೂ ಶಿವಸೇನೆ ನಾಯಕ ಏಕನಾಥ್ ಶಿಂಧೆ ಥಾಣೆಯಲ್ಲಿ ಕಪ್ಪು ರಿಬ್ಬನ್ ಬಿಡುಗಡೆಗೊಳಿಸಿದರು.

ಗಡಿ ಪ್ರದೇಶದಲ್ಲಿ ಇರುವ ನಮ್ಮ ಸಹೋದರರಿಗೆ ಬೆಂಬಲ ವ್ಯಕ್ತಪಡಿಸಲು ರಾಜ್ಯ ಸರಕಾರದ ಎಲ್ಲ ಸಚಿವರು ಹಾಗೂ ಎನ್‌ಸಿಪಿ ಕಾರ್ಯಕರ್ತರು ತೋಳಿಗೆ ಕಪ್ಪು ರಿಬ್ಬನ್ ಕಟ್ಟಿಕೊಂಡಿದ್ದೇವೆ ಎಂದು ಪಾಟೀಲ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವ ಹೊರತಾಗಿಯೂ ಕರ್ನಾಟಕದಿಂದ ಮರಾಠಿ ಮಾತನಾಡುವ ಜನರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಬೆಳಗಾವಿ ಹಾಗೂ ಮರಾಠಿ ಮಾತನಾಡುವ ಜನರಿರುವ ಇತರ ಪ್ರದೇಶಗಳು ಮಹಾರಾಷ್ಟ್ರದ ಭಾಗವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಏಕನಾಥ್ ಶಿಂಧೆ ಹಾಗೂ ಸಚಿವ ಛಗನ್ ಭುಜಬಲ್ ಕರ್ನಾಟಕದ ಮರಾಠಿ ಜನರಿಗೆ ಬರೆದೆ ಪತ್ರದಲ್ಲಿ, ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್ ಹಾಗೂ ಮರಾಠಿ ಮಾತನಾಡುವ ಜನರಿರುವ ಇತರ ಪ್ರದೇಶಗಳ ಶಿಕ್ಷಣ, ಸಾಮಾಜಿಕ ನ್ಯಾಯ, ಮರಾಠಿ ಭಾಷೆಯ ಸಂರಕ್ಷಣೆ ಹಾಗೂ ಇತರ ವಿಷಯಗಳ ಬಗ್ಗೆ ಮಹಾರಾಷ್ಟ್ರ ಸರಕಾರ ಬದ್ಧವಾಗಿದೆ ಎಂದಿದ್ದಾರೆ.

ಗಡಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಪರಿಹರಿಸಲು ಮಹಾರಾಷ್ಟ್ರ ಸರಕಾರದ ಪ್ರಯತ್ನದ ಮೇಲ್ವಿಚಾರಣೆಗಾಗಿ ಈ ಇಬ್ಬರು ಸಚಿವರನ್ನು ಕಳೆದ ವರ್ಷ ಸಂಯೋಜಕರನ್ನಾಗಿ ನಿಯೋಜಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X