Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವಸ್ಥಾನದ ಸಂಪರ್ಕ ರಸ್ತೆಗೆ ಜಮೀನು...

ದೇವಸ್ಥಾನದ ಸಂಪರ್ಕ ರಸ್ತೆಗೆ ಜಮೀನು ಒದಗಿಸಿದ ಮಲಪ್ಪುರಂ ಮಸೀದಿ

ದಲಿತ ಕುಟುಂಬಗಳ ದಶಕಗಳ ಕನಸು ನನಸು

ವಾರ್ತಾಭಾರತಿವಾರ್ತಾಭಾರತಿ2 Nov 2020 2:18 PM IST
share
ದೇವಸ್ಥಾನದ ಸಂಪರ್ಕ ರಸ್ತೆಗೆ ಜಮೀನು ಒದಗಿಸಿದ ಮಲಪ್ಪುರಂ ಮಸೀದಿ

ತಿರುವನಂತಪುರ: ಕೇರಳದ ಮಲಪ್ಪುರಂ ಜಿಲ್ಲೆಯ ಮುತ್ತುವಳ್ಳೂರು ಪಂಚಾಯತ್ ಪ್ರದೇಶದ ಕೆಲ ದಲಿತ  ಕುಟುಂಬಗಳಿಗೆ  ಕಳೆದ ಕೆಲ ದಶಕಗಳಿಂದ ಒಂದು ಕನಸಿತ್ತು. ಅದೇನೆಂದರೆ ಗುಡ್ಡದ ಮೇಲಿರುವ ತಮ್ಮ ಕಾಲನಿ ಸಮೀಪದ ಪುಟ್ಟ ದೇವಾಲಯಕ್ಕೆ ಮುಖ್ಯ ರಸ್ತೆಯ ಮುಖಾಂತರ ಒಂದು ಸಂಪರ್ಕ ರಸ್ತೆ ಬೇಕೆಂಬುದು ಅವರ ಬಹು ಕಾಲದ ಬೇಡಿಕೆಯಾಗಿತ್ತು.

ಹಲವಾರು ವರ್ಷಗಳಿಂದ ಈ ಕುಟುಂಬಗಳು ತಮ್ಮ ಮನೆಗಳನ್ನು ತಲುಪಲು ಹಾಗೂ ಹತ್ತಿರದಲ್ಲಿಯೇ ಇರುವ ಕೊಝಿಕೋಡನ್ ಮುಚ್ಚಿತದಂ ಭಗವತಿ ದೇವಸ್ಥಾನ ತಲುಪಲು ಪುಟ್ಟದಾದ ಬೆಟ್ಟವೊಂದನ್ನು ಏರಬೇಕಿತ್ತು. ಅವರ ಮನೆಗಳಿಂದ ಆ ದೇವಳವನ್ನು ತಲುಪಲು ಇಕ್ಕಟ್ಟಾದ ಹಾದಿಯೊಂದು ಮಾತ್ರವಿತ್ತು. ಈ ದೇವಳ ಹಾಗೂ ಕಾಲನಿಯ ಸುತ್ತಲಿನ ಜಾಗ ಪರತ್ತಕುಡ್ ಜುಮಾ ಮಸೀದಿಗೆ ಸೇರಿತ್ತು.

ದೇವಸ್ಥಾನದ ಸಮಿತಿಯು ಮಸೀದಿಯ ಆಡಳಿತ ಸಮಿತಿಯನ್ನು ಭೇಟಿಯಾಗಿ ಸಂಪರ್ಕ ಹಾದಿಗಾಗಿ ಮನವಿ ಸಲ್ಲಿಸಿದ  ಕೂಡಲೇ  ಮುಖ್ಯ ರಸ್ತೆಯಿಂದ ಕಾಲನಿ ಹಾಗೂ ಅಲ್ಲಿಂದ ದೇವಸ್ಥಾನಕ್ಕೆ  ಅಗಲವಾದ ಹಾದಿಯನ್ನು ಉಚಿತವಾಗಿ ನಿರ್ಮಿಸಲು ಹಾಗೂ ತನ್ನ ಜಮೀನಿನ ಒಂದು ಭಾಗವನ್ನು ನೀಡಲು ಮಸೀದಿ ಆಡಳಿತ ಮುಂದೆ ಬಂದಿದೆ.

``ಈ ಪ್ರದೇಶದಲ್ಲಿ ಎಲ್ಲಾ ಧರ್ಮದವರೂ ವಾಸಿಸುತ್ತಾರೆ ನಾವು ಎಲ್ಲರನ್ನೂ ಗೌರವಿಸುತ್ತೇವೆ,'' ಎಂದು ಮಸೀದಿ ಆಡಳಿತ ಸಮಿತಿಯ ಕಾರ್ಯದರ್ಶಿ ಶಿಹಾಬ್ ಹೇಳುತ್ತಾರೆ.

ಆರಂಭದಲ್ಲಿ ಜಮೀನನ್ನು ದೇವಳದ ಆಡಳಿತಕ್ಕೆ ನೀಡಲು ಮಸೀದಿ ನಿರ್ಧರಿಸಿದರೂ ಮುತ್ತುವಳ್ಳೂರು ಪಂಚಾಯತ್ ಅಧ್ಯಕ್ಷ ಅಹ್ಮದ್ ಸಗೀರ್ ಅವರು ಈ ವಾರ್ಡ್ ಸದಸ್ಯರೂ ಆಗಿರುವುದರಿಂದ ದೇವಸ್ಥಾನಕ್ಕೆ ಮೆಟ್ಟಲುಗಳನ್ನು ನಿರ್ಮಿಸಲು ಹಣ ಮಂಜೂರುಗೊಳಿಸುವ ಭರವಸೆ ನೀಡಿದ್ದರು. ಇದನ್ನು ಪರಿಗಣಿಸಿ ಜಮೀನನ್ನು ಪಂಚಾಯತ್‍ಗೆ ಹಸ್ತಾಂತರಿಸಲಾಯಿತು ನಂತರ ದೇವಸ್ಥಾನದ ತನಕ  ಹಾಗೂ ಕಾಲನಿ ನಿವಾಸಿಗಳ ಮನೆಗಳ ತನಕ ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X