Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್ಥಿಕ ಸಂಕಷ್ಟದಿಂದ ಗುಜರಿ...

ಆರ್ಥಿಕ ಸಂಕಷ್ಟದಿಂದ ಗುಜರಿ ವ್ಯಾಪಾರಕ್ಕಿಳಿದ ಸಿನೆಮಾ ನಿರ್ದೇಶಕ !

ಲಾಕ್‌ಡೌನ್‌ನಿಂದ ಯಾಕೂಬ್ ಗುಲ್ವಾಡಿಯ ಚಲನಚಿತ್ರ ಪ್ರದರ್ಶನ ರದ್ದು

ವಾರ್ತಾಭಾರತಿವಾರ್ತಾಭಾರತಿ2 Nov 2020 9:26 PM IST
share
ಆರ್ಥಿಕ ಸಂಕಷ್ಟದಿಂದ ಗುಜರಿ ವ್ಯಾಪಾರಕ್ಕಿಳಿದ ಸಿನೆಮಾ ನಿರ್ದೇಶಕ !

ಕುಂದಾಪುರ, ನ.2: ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಿತ್ರ ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ, ಕೊರೋನ ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಮತ್ತೆ ಗುಜರಿ ಅಂಗಡಿಯತ್ತ ಮುಖ ಮಾಡಿದ್ದಾರೆ.

‘ರಿಸರ್ವೆಶನ್’ ಮತ್ತು ‘ಟ್ರಿಪಲ್ ತಲಾಕ್’ನಂತಹ ಸೂಕ್ಷ್ಮ ಸಂವೇದನೆಯ ಸಿನೆಮಾಗಳನ್ನು ಮಾಡಿದ ಯಾಕೂಬ್ ಖಾದರ್ ಗುಲ್ವಾಡಿ, ಕಳೆದ 25 ವರ್ಷ ಗಳಿಂದ ಬದುಕು ಕಟ್ಟಿಕೊಳ್ಳಲು, ಪುಸ್ತಕ ಪ್ರೀತಿ ಬೆಳೆಸಲು ಮತ್ತು ಬಹಳ ಮುಖ್ಯ ವಾಗಿ ಸಿನೆಮಾ ತಯಾರಿಸಲು ಕಾರಣವಾದ ಗುಜರಿ  ವ್ಯಾಪಾರಕ್ಕೆ ಮತ್ತೆ ಮೊರೆ ಹೋಗಿದ್ದಾರೆ.

ಕುಂದಾಪುರ ತಾಲೂಕಿನ ಗುಲ್ವಾಡಿಯ ಖಾದರ್, ಆರನೆ ತರಗತಿಯಲ್ಲಿ ಇರುವಾಗ ಅರ್ಧಕ್ಕೆ ಶಾಲೆ ಬಿಟ್ಟು ಸೈಕಲಿನಲ್ಲಿಯೇ ಗುಜರಿ ವ್ಯಾಪಾರ ನಡೆಸುವ ಕಾಯಕದಲ್ಲಿ ತೊಡಗಿಸಿಕೊಂಡವರು. ಅಂದು ಇವರು, ಗುಜರಿಗೆ ಬಂದ ಪುಸ್ತಕ ಗಳನ್ನು ಓದಿ, ಓದುವ ಹುಚ್ಚನ್ನು ಮೈಗೂಡಿಸಿಕೊಂಡರು.

ಗುಲಾಬಿ ಟಾಕೀಸ್ ಸಿನೆಮಾದಲ್ಲಿ ಕುಂದಾಪುರ ಕನ್ನಡ ಮತ್ತು ಬ್ಯಾರಿ ಭಾಷೆ, ಸಾಂಸ್ಕೃತಿಕ ವಿಚಾರಗಳಿಗಾಗಿ ನಿರ್ದೇಶಕ ಗಿರೀಶ್ ಕಾಸರವಳ್ಳಿ, 2006ರಲ್ಲಿ ಗುಲ್ವಾಡಿ ಅವರನ್ನು ಸಂಪರ್ಕಿಸಿದರು. ಅಂದಿನಿಂದ ಸಿನೆಮಾ ಬಗ್ಗೆ ಅರಿತುಕೊಂಡ ಖಾದರ್, 2012-13ರಲ್ಲಿ ನಿಖಿಲ್ ಮಂಜು ಅವರ ಹಜ್ ಮತ್ತು ಗೆರೆಗಳು ಸಿನೆಮಾದಲ್ಲಿ ಕೆಲಸ ಹಾಗೂ ಪಾತ್ರ ಮಾಡಿದ್ದರು.

2016-17ರಲ್ಲಿ ಸ್ವತಃ ಖಾದರ್ ಅವರೇ ಸಿನೆಮಾ ನಿರ್ದೇಶನಕ್ಕೆ ಇಳಿದು, ರಿಸವೇರ್ಷನ್ ಚಿತ್ರ ತಯಾರಿಸಿದರು. ಬಳಿಕ ‘ಟ್ರಿಪಲ್ ತಲಾಕ್’ ಸಿನೆಮಾವನ್ನು ಕೂಡ ಮಾಡಿದರು. ಇವು ಎರಡೂ ಸಿನೆಮಾ ಕೂಡ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡವು.

ಕೊರೋನದಿಂದ ಅಡ್ಡಿ: ಕಳೆದ ವರ್ಷ ಖಾದರ್, ಮುಂಬೈಯ ಹಿರಿಯ ಸ್ನೇಹಿತರ ಸಹಕಾರದಿಂದ ತನ್ನದೇ ನಿರ್ದೇಶನದಲ್ಲಿ ಬಹಳ ನಿರೀಕ್ಷೆಯೊಂದಿಗೆ ‘ಟ್ರಿಪಲ್ ತಲಾಕ್’ ಬ್ಯಾರಿ ಭಾಷೆಯ ಚಲನಚಿತ್ರವನ್ನು ತಯಾರಿಸಿದ್ದರು. ಈ ಸಿನೆಮಾ 54 ದೇಶಗಳಲ್ಲಿ ಪ್ರದರ್ಶನ ಕಾಣಬೇಕಾಗಿತ್ತು ಮತ್ತು ಅನೇಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇದನ್ನು ಕಳುಹಿಸಲಾಗಿತ್ತು. ಆದರೆ ಕೊರೋನ ಕಾರಣಗಳಿಂದ ಅನೇಕ ಚಿತ್ರೋತ್ಸವಗಳು ರದ್ದುಗೊಂಡವು.

‘ಈ ಸಿನಿಮಾವನ್ನು ಎರಡು ವರ್ಷಗಳಿಂದ ತುಂಬಾ ಕಷ್ಟಪಟ್ಟು ಹಾಗೂ ಸಾಲ ಮಾಡಿ ತಯಾರಿಸಿದ್ದೆ. ಇದರಿಂದ ಬಹಳ ಒತ್ತಡಕ್ಕೆ ಒಳಗಾಗಿ ಮಾನಸಿಕವಾಗಿ ಜರ್ಜರಿತಗೊಂಡಿದ್ದೇನೆ.’ ಎಂದು ಯಾಕೂಬ್ ಖಾದರ್ ಗುಲ್ವಾಡಿ ತಿಳಿಸಿದರು.

ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಕಳೆದ ಮೂರು ತಿಂಗಳಿನಿಂದ ಗೆಳೆಯನ ಸಹಕಾರದಿಂದ ಗುಲ್ವಾಡಿಯಲ್ಲಿ ಮತ್ತೆ ಗುಜರಿ ಅಂಗಡಿಯನ್ನು ಆರಂಭಿಸಿದ್ದೇನೆ. ಈ ಮಧ್ಯೆ ಪತಿ ತೀರಿ ಹೋದ ಬಳಿಕ ಪತ್ನಿ ಮರೆಯಲ್ಲಿರುವ ‘ಇದ್ದತ್’ ಸಿನೆಮಾ ವನ್ನು ತಯಾರಿಸುವ ಆಲೋಚನೆ ಮಾಡಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಇದೀಗ ಆಫಿಕಾದ ನೈಜೀರಿಯಾದಲ್ಲಿ ನಡೆಯುವ ಪ್ರತಿಷ್ಠಿತ 17ನೆ ಅಬುಜಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2020ಕ್ಕೆ ಬ್ಯಾರಿ ಭಾಷೆಯ ಸಿನಿಮಾ ಟ್ರಿಪಲ್ ತಲಾಕ್ ಆಯ್ಕೆಯಾಗಿದೆ. ಶ್ರೇಷ್ಠ ನಿರ್ದೇಶಕ ಹಾಗೂ ಶ್ರೇಷ್ಠ ನಟಿ ವಿಭಾಗದಲ್ಲಿ ಈ ಚಿತ್ರ ಸ್ಪರ್ಧೆಯಲ್ಲಿದೆ ಎಂದು ಯಾಕೂಬ್ ಖಾದರ್ ಸಂತೋಷ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X