Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಕ್ಯಾಲಿಕಟ್ ನಲ್ಲಿ ರಾಜ್ಯದ ಮೊದಲ...

ಕೇರಳದ ಕ್ಯಾಲಿಕಟ್ ನಲ್ಲಿ ರಾಜ್ಯದ ಮೊದಲ ಟೆಲಿ-ಐಸಿಯು ಸ್ಥಾಪನೆ

ಸರಕಾರಿ ಬೀಚ್ ಆಸ್ಪತ್ರೆಯಲ್ಲಿ ಮೈತ್ರಾ ಆಸ್ಪತ್ರೆಯಿಂದ ಸೌಲಭ್ಯ

ವಾರ್ತಾಭಾರತಿವಾರ್ತಾಭಾರತಿ3 Nov 2020 12:49 PM IST
share
ಕೇರಳದ ಕ್ಯಾಲಿಕಟ್  ನಲ್ಲಿ ರಾಜ್ಯದ ಮೊದಲ ಟೆಲಿ-ಐಸಿಯು ಸ್ಥಾಪನೆ

ಕ್ಯಾಲಿಕಟ್ : ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ಮೊದಲ ಟೆಲಿ-ಐಸಿಯು ಇಲ್ಲಿನ ಸರಕಾರಿ ಬೀಚ್ ಆಸ್ಪತ್ರೆಯಲ್ಲಿ ಪ್ರಾರಂಭವಾಗಿದೆ. ಟೆಲಿ ಐಸಿಯು ಎಂದರೆ ತೀವ್ರ ನಿಗಾ ವಿಭಾಗದಲ್ಲಿ ರೋಗಿಯ ಆರೈಕೆ ಮಾಡುವ ವೈದ್ಯಕೀಯ ಸಿಬ್ಬಂದಿಗೆ ತಜ್ಞ ವೈದ್ಯರು ಎಲ್ಲಿಂದ ಬೇಕಾದರೂ ಸಮಾಲೋಚನೆ ಮಾಡಿ ಚಿಕಿತ್ಸೆ ಮುಂದುವರಿಸುವ ವ್ಯವಸ್ಥೆ. ತೀವ್ರ ನಿಗಾ ತಜ್ಞರ ಕೊರತೆಯಿಂದ ರೋಗಿಗಳಿಗೆ ಚಿಕಿತ್ಸೆ ತಡವಾಗದಂತೆ ನೋಡಿಕೊಳ್ಳಲು ಈ ವ್ಯವಸ್ಥೆ ಸಹಕಾರಿಯಾಗಿದೆ. 

ಕ್ಯಾಲಿಕಟ್ ಮೈತ್ರಾ ಆಸ್ಪತ್ರೆಯಲ್ಲಿರುವ ನಿಯಂತ್ರಣ ಕೇಂದ್ರದ ಮೂಲಕ  ತೀವ್ರ ನಿಗಾ ಘಟಕದ ತಜ್ಞ ವೈದ್ಯರು ದಿನದ 24 ಗಂಟೆಯೂ  ಸರಕಾರಿ ಬೀಚ್ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಟೆಲಿ ಐಸಿಯು ನಲ್ಲಿರುವ ರೋಗಿಗಳ ಮೇಲ್ವಿಚಾರಣೆ ನಡೆಸಿ ಚಿಕಿತ್ಸೆ ನೀಡುವ ನಿರೀಕ್ಷೆಯಿದೆ.

ರವಿವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಈ ಸೌಲಭ್ಯವನ್ನು ಉದ್ಘಾಟಿಸಿದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ, ಸರಕಾರಿ ಸ್ವಾಮ್ಯದ ಆಸ್ಪತ್ರೆಗಳಲ್ಲಿ ಐಸಿಯು ಕೊರತೆಯನ್ನು ನೀಗಿಸಲು ಆರೋಗ್ಯ ಇಲಾಖೆಯು ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಟೆಲಿ-ಐಸಿಯು ಸೌಲಭ್ಯವನ್ನು ಸ್ಥಾಪಿಸಲು ಯೋಚಿಸುತ್ತಿದೆ ಎಂದು ಹೇಳಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಎನ್ಎಚ್ಎಂ ನಿಧಿಯ ಸಹಾಯದಿಂದ ಬೀಚ್ ಆಸ್ಪತ್ರೆಯಲ್ಲಿ 22 ಹಾಸಿಗೆಗಳೊಂದಿಗೆ ಹೊಸ ಐಸಿಯು ಸ್ಥಾಪಿಸಿತ್ತು. ಮೈತ್ರಾ ಆಸ್ಪತ್ರೆ  ಅಧಿಕಾರಿಗಳು ಜನರಲ್ ಆಸ್ಪತ್ರೆಯ ಐಸಿಯುನಲ್ಲಿ ಹೈ-ಡೆಫಿನಿಷನ್ ಕ್ಯಾಮರಾಗಳು ಹಾಗೂ ಸಾಫ್ಟ್ ವೇರ್ಗಳನ್ನು ಸ್ಥಾಪಿಸಿದ್ದಾರೆ.ರೋಗಿಗಳ ಮೇಲೆ 24 ಗಂಟೆಗಳ ಕಾಲ ನಿಗಾ ಇಡಲು ಕ್ಯಾಮರಾವನ್ನು ಮೈತ್ರಾ ಆಸ್ಪತ್ರೆಯ ನಿಯಂತ್ರಣ ಕೇಂದ್ರಕ್ಕೆ ಸಂಪರ್ಕ ಕಲ್ಪಿಸಲಾಗಿದೆ.

ಟೆಲಿ-ಐಸಿಯು ತಜ್ಞ ವೈದ್ಯರ ಕೊರತೆಯನ್ನು ನೀಗಿಸುವುದಲ್ಲದೆ, ಸೋಂಕಿನ ನಿಯಂತ್ರಣ, ಉತ್ತಮ ಆರೋಗ್ಯ ಫಲಿತಾಂಶವನ್ನು ಖಚಿತಪಡಿಸಲು ಔಷಧ ದೋಷಗಳನ್ನು ಕಡಿಮೆ ಮಾಡಲು ಹಲವಾರು ಆರೈಕೆ ಸೌಲಭ್ಯಗಳನ್ನು ಒದಗಿಸುವ ನಿರೀಕ್ಷೆಯಿದೆ.

ವೈದ್ಯರಿಗೆ ಡಿಜಿಟಲ್ ಪರಿಹಾರದ ಸಾಧನ ನೀಡುವ ಮೂಲಕ ಆರೋಗ್ಯ ಸೇವೆಯ ಸವಾಲುಗಳನ್ನು ಪರಿಹರಿಸಲು, ತಾಂತ್ರಿಕ ಸಂಶೋಧನೆಯ ಪೂರ್ಣ ಲಾಭ ಪಡೆಯಲು  ಇದು ಸರಿಯಾದ ಸಮಯ. ಆರೋಗ್ಯ ಸಚಿವಾಲಯದೊಂದಿಗೆ ಸಹಭಾಗಿತ್ವದಲ್ಲಿರುವುದಕ್ಕೆ ಸಂತೋಷವಾಗಿದೆ ಎಂದು ಮೈತ್ರಾ ಆಸ್ಪತ್ರೆಯ ಅಧ್ಯಕ್ಷ ಫೈಝಲ್ ಕೊಟ್ಟಿಕೊಲ್ಲನ್ ಹೇಳಿದ್ದಾರೆ. ಈ ಹೊಸ ಕೇಂದ್ರವನ್ನು ನಡೆಸಲು ಫೈಝಲ್ ಅವರ ಫೈಝಲ್ ಅಂಡ್ ಶಬಾನಾ ಫೌಂಡೇಶನ್ ಆರ್ಥಿಕ ಸಹಕಾರ ನೀಡಲಿದೆ. 

ದೇಶದಲ್ಲಿ ಮೂರು ಲಕ್ಷಕ್ಕೂ ಅಧಿಕ ಐಸಿಯು ಹಾಸಿಗೆಗಳಿವೆ. ಆದರೆ ದೇಶದಲ್ಲಿ 5000ಕ್ಕಿಂತಲೂ ಕಡಿಮೆ ಐಸಿಯು ತಜ್ಞರಿದ್ದಾರೆ . ಇಲ್ಲಿ ಅಂತರವು ದೊಡ್ಡದಾಗಿದೆ. ಇದಕ್ಕೆ ಪರಿಹಾರ ಲಭಿಸಿಲ್ಲ. ತಂತ್ರಜ್ಞಾನದ ಬಳಕೆಯ ಮೂಲಕ ನಾವು ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಲು ಸಾಧ್ಯ ಎಂದು ಮೈತ್ರಾ ಆಸ್ಪತ್ರೆಯ ನಿರ್ದೇಶಕ ಡಾ. ಅಲಿ ಫೈಝಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X