ನ.4ರಂದು ಸರಕಾರಗಳ ಆಡಳಿತ ವೈಫಲ್ಯ ಖಂಡಿಸಿ ಕುಕ್ಕೆಹಳ್ಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕಾಪು, ನ.3: ಸರಕಾರಗಳ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಕಾಪು ವಿಧಾನಸಭಾ ಕ್ಷೇತ್ರದ ಉಭಯ ಬ್ಲಾಕ್ ಸಮಿತಿಗಳ ನೇತೃತ್ವದಲ್ಲಿ ನ.4ರ ಬುಧವಾರ ಬೆಳಗ್ಗೆ 10:00ಗಂಟೆಗೆ ಕುಕ್ಕೆಹಳ್ಳಿ ಪಂಚಾಯತ್ ವಠಾರದಲ್ಲಿ ಮತ್ತು ಸಂಜೆ 3:30ಕ್ಕೆ ಕಟಪಾಡಿ ಪೇಟೆಯಲ್ಲಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಇದರಲ್ಲಿ ಮುಖ್ಯ ಭಾಷಣಕಾರರಾಗಿ ಖ್ಯಾತ ವಾಗ್ಮಿ ಹಾಗೂ ಕೆಪಿಸಿಸಿಯ ವಕ್ತಾರರಾದ ಸುಧೀರ್ ಕುಮಾರ್ ಮೂರೋಳಿ ಭಾಗವಹಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಬೇಕೆಂದು ಮಾಜಿ ಸಚಿವ ವಿನಯ್ ಕುಮಾರ ಸೊರಕೆ ಹಾಗೂ ಉಭಯ ಬ್ಲಾಕ್ ಸಮಿತಿ ಅಧ್ಯಕ್ಷರಾದ ನವೀನಚಂದ್ರ ಸುವರ್ಣ ಮತ್ತು ಪ್ರವೀಣ್ ಕುಮಾರ್ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ.
Next Story