Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರತದ ಸಂವಿಧಾನ ಅಪಾಯದಲ್ಲಿದೆ: ಸುಂದರ್...

ಭಾರತದ ಸಂವಿಧಾನ ಅಪಾಯದಲ್ಲಿದೆ: ಸುಂದರ್ ಮಾಸ್ತರ್

ವಾರ್ತಾಭಾರತಿವಾರ್ತಾಭಾರತಿ3 Nov 2020 7:49 PM IST
share
ಭಾರತದ ಸಂವಿಧಾನ ಅಪಾಯದಲ್ಲಿದೆ: ಸುಂದರ್ ಮಾಸ್ತರ್

ಉಡುಪಿ, ನ.3: ಭಾರತದಲ್ಲಿ ಸಂವಿಧಾನ ಅಪಾಯದಲ್ಲಿದೆ. ಆದುದರಿಂದ ನಾವೆಲ್ಲರೂ ಸಂವಿಧಾನದ ರಕ್ಷಣೆ ಮಾಡಿ ಈ ದೇಶದ ಏಕತೆಯನ್ನು ಉಳಿ ಸುವ ಕೆಲಸ ಮಾಡಬೇಕು ಎಂದು ದಸಂಸ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಹೇಳಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಕಾಪು ತಾಲೂಕು ಸಮಿತಿ ವತಿಯಿಂದ ರವಿವಾರ ಆಯೋಜಿಸಲಾದ ಕಾನೂನು ಮಾಹಿತಿ, ಕಂದಾಯ ಮಾಹಿತಿ ಹಾಗೂ ಗ್ರಾಪಂನಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ಪಾಂಗಾಳ ಗ್ರಾಮ ಶಾಖೆಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡುತಿದ್ದರು.

ಕಾನೂನು ಮಾಹಿತಿ ನೀಡಿದ ಕಾಪು ಪೋಲೀಸ್ ಠಾಣೆಯ ಉಪನೀರೀಕ್ಷಕ ರಾಜಶೇಖರ ಸಾಗನೂರು, ನಮ್ಮ ದೇಶಕ್ಕೆ ಸಂವಿಧಾನವೇ ಶ್ರೇಷ್ಠ ಧರ್ಮಗ್ರಂಥ. ಈ ದೇಶದ ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆಯೇ ನಡೆದುಕೊಳ್ಳ ಬೇಕು. ದಲಿತರು ದೂರು ನೀಡಲು ಠಾಣೆಗೆ ಬರುವುದೇ ಅಪರೂಪ. ಅಂಥದ್ದರಲ್ಲಿ ಸುಳ್ಳು ದೂರು ಕೊಡುತ್ತಾರೆ ಎಂಬ ಆರೋಪ ದೂರದ ಮಾತು ಎಂದು ತಿಳಿಸಿದರು.

ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್ ಕಂದಾಯ ಇಲಾಖೆಯ ಬಗ್ಗೆ ಮಾಹಿತಿ ನೀಡಿ, ಡಿಸಿ ಮನ್ನಾ ಭೂಮಿ, ಪಿಟಿಸಿಎಲ್ ಕಾಯಿದೆ, ಕಂದಾಯ ಇಲಾಖೆಯಿಂದ ದಲಿತರಿಗೆ ಸಿಗುವ ವಿವಿಧ ಸಹಾಯಧನಗಳು, ಪಿಂಚಣಿಗಳು ಮತ್ತು ಖಾತೆ ಬದಲಾವಯಾಗದೆ ಭೂಮಿ ಪೂರ್ವಜರ ಹೆಸರಲ್ಲೇ ಇರು ವುದರಿಂದ ಯಾವುದೇ ಸರಕಾರಿ ಸೌಲಭ್ಯಗಳಿಂದ ವಂಚಿತರಾದ ಕುಟುಂಬಗಳಿಗೆ ಖುದ್ದು ಸ್ಥಳಕ್ಕೆ ಬಂದು ಅದಾಲತ್ ನಡೆಸಿ ಮಹಜರು ಮಾಡಿ ಖಾತೆ ಬದಲಾವಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಮಾತನಾಡಿ, ಅಂಬೇಡ್ಕರ್ ನೀಡಿದ ಸಂವಿಧಾನದಿಂದ ನಾವು ಸವಲತ್ತುಗಳನ್ನು ಪಡೆದುಕೊಂಡಿದ್ದೇವೆ. ಬಾಬಾಸಾಹೇಬರು ನೀಡಿದ ಮೀಸಲಾತಿಯಿಂದಾಗಿ ನಾವು ಸರಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದೇವೆ. ಸವಲತ್ತುಗಳನ್ನು ಪಡೆದ ನಾವುಗಳು ನಮ್ಮ ಸ್ವಲ್ಪ ಆದಾಯವನ್ನಾದರೂ ನಮ್ಮ ಸಮಾಜದ ಸೇವೆಗಾಗಿ ಮೀಸಲಿಡಬೇಕು. ಆ ಮೂಲಕ ಅಂಬೇಡ್ಕರ್ ರ ಋಣವನ್ನು ತೀರಿಸಬೇಕು ಎಂದರು.

ಇನ್ನಂಜೆ ಗ್ರಾಪಂ ಪಿಡಿಓ ರಾಜೇಶ್ ಶೆಣೈ, ಪಂಚಾಯತ್‌ನಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ತಾಪಂ  ಸದಸ್ಯ ರಾಜೇಶ್ ಶೆಟ್ಟಿ, ಗ್ರಾಪಂ ಮಾಜಿ ಸದಸ್ಯ ನಾಗೇಶ್ ಭಂಡಾರಿ ಮಾತನಾಡಿದರು.

ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಪರಮೇಶ್ವರ್ ಉಪ್ಪೂರು, ಭಾಸ್ಕರ್ ಮಾಸ್ಟರ್ ಕುಂಜಿಬೆಟ್ಟು, ಶ್ಯಾಮಸುಂದರ್ ತೆಕ್ಕಟ್ಟೆ, ಮಂಜುನಾಥ್ ಬಾಳ್ಕುದ್ರು, ಅಣ್ಣಪ್ಪನಕ್ರೆ, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ರಾಜೇಂದ್ರ ಬೆಳ್ಳೆ, ಜಿಲ್ಲಾ ದಲಿತ ಕಲಾಮಂಡಳಿ ಸಂಚಾಲಕ ರವೀಂದ್ರ ಬಂಟಕಲ್ಲು, ತಾಲೂಕು ಸಂಚಾಲಕ ಶಂಕರ್‌ದಾಸ್ ಚೆಂಡ್ಕಳ, ವಿಠಲ್ ಉಚ್ಚಿಲ, ಶ್ರೀನಿವಾಸ ವಡ್ಡರ್ಸೆ, ಪಾಂಗಾಳ ಗ್ರಾಮ ಶಾಖೆಯ ಸಂಚಾಲಕ ಸುಧೀರ್ ಉಪಸ್ಥಿತರಿದ್ದರು. ದಸಂಸ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಸಂಚಾಲ ಎಸ್.ಎಸ್.ಪ್ರಸಾದ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X