Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ಬ್ಯಾಂಕುಗಳು ಸೇವಾಶುಲ್ಕಗಳನ್ನು...

ಸರಕಾರಿ ಬ್ಯಾಂಕುಗಳು ಸೇವಾಶುಲ್ಕಗಳನ್ನು ಹೆಚ್ಚಿಸಿಲ್ಲ:ವಿತ್ತ ಸಚಿವಾಲಯದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ3 Nov 2020 10:11 PM IST
share
ಸರಕಾರಿ ಬ್ಯಾಂಕುಗಳು ಸೇವಾಶುಲ್ಕಗಳನ್ನು ಹೆಚ್ಚಿಸಿಲ್ಲ:ವಿತ್ತ ಸಚಿವಾಲಯದ ಹೇಳಿಕೆ

ಹೊಸದಿಲ್ಲಿ,ನ.3: ಸಾರ್ವಜನಿಕ ಕ್ಷೇತ್ರದ ಬ್ಯಾಂಕು(ಪಿಎಸ್‌ಬಿ)ಗಳು ತಮ್ಮ ಸೇವಾಶುಲ್ಕಗಳಲ್ಲಿ ಯಾವುದೇ ಏರಿಕೆಯನ್ನು ಮಾಡಿಲ್ಲ ಎಂದು ಕೇಂದ್ರ ವಿತ್ತ ಸಚಿವಾಲಯವು ಮಂಗಳವಾರ ಸ್ಪಷ್ಟಪಡಿಸಿದೆ. ತನ್ಮಧ್ಯೆ ಖಾತೆಯೊಂದರಲ್ಲಿ ಪ್ರತಿ ತಿಂಗಳಿಗೆ ಉಚಿತ ನಗದು ಠೇವಣಿಗಳ ಸಂಖ್ಯೆಗೆ ಸಂಬಂಧಿಸಿದಂತೆ ತಾನು ಮಾಡಿದ್ದ ಬದಲಾವಣೆಗಳನ್ನು ಹಿಂದೆಗೆದುಕೊಳ್ಳಲು ಬ್ಯಾಂಕ್ ಆಫ್ ಬರೋಡಾ (ಬಿಒಬಿ) ನಿರ್ಧರಿಸಿದೆ.

 ಬಿಒಬಿ ಪ್ರತಿ ತಿಂಗಳಿಗೆ ಖಾತೆಯಲ್ಲಿ ಉಚಿತ ಹಣ ಜಮಾವಣೆ ಮತ್ತು ಹಣ ಹಿಂದೆಗೆದುಕೊಳ್ಳುವಿಕೆಗೆ ಸಂಬಂಧಿಸಿದಂತೆ ನ.1ರಿಂದ ಜಾರಿಯಾಗುವಂತೆ ಕೆಲವು ಬದಲಾವಣೆಗಳನ್ನು ಮಾಡಿತ್ತು. ಉಚಿತ ಹಣ ಜಮಾವಣೆಯನ್ನು ತಿಂಗಳಿಗೆ ಐದು ಸಲಕ್ಕೆ ಮತ್ತು ಹಣ ಹಿಂಪಡೆಯುವುದನ್ನು ಮೂರು ಸಲಕ್ಕೆ ಇಳಿಸಲಾಗಿತ್ತು. ಈ ಉಚಿತ ವಹಿವಾಟುಗಳನ್ನು ಮೀರಿದ ವಹಿವಾಟುಗಳ ಮೇಲಿನ ಶುಲ್ಕಗಳಲ್ಲಿ ಬದಲಾವಣೆಗಳನ್ನು ಮಾಡಿರಲಿಲ್ಲ ಎಂದು ವಿತ್ತ ಸಚಿವಾಲಯವು ತಿಳಿಸಿದೆ.

ಪ್ರಸಕ್ತ ಕೋವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬದಲಾವಣೆಗಳನ್ನು ಹಿಂದೆಗೆದುಕೊಳ್ಳಲು ತಾನು ನಿರ್ಧರಿಸಿರುವುದಾಗಿ ಬಿಒಬಿ ತಿಳಿಸಿದೆ. ಇತರ ಯಾವುದೇ ಸರಕಾರಿ ಬ್ಯಾಂಕು ಇತ್ತೀಚಿಗೆ ಇಂತಹ ಶುಲ್ಕಗಳನ್ನು ಹೆಚ್ಚಿಸಿಲ್ಲ ಎಂದೂ ಅದು ಹೇಳಿದೆ.

 ಆರ್‌ಬಿಐ ಮಾರ್ಗಸೂಚಿಗಳಂತೆ ಪಿಎಸ್‌ಬಿಗಳು ಸೇರಿದಂತೆ ಎಲ್ಲ ಬ್ಯಾಂಕುಗಳು ತಮ್ಮ ಸೇವೆಗಳಿಗೆ ವೆಚ್ಚಕ್ಕನುಗುಣವಾಗಿ ನ್ಯಾಯಯುತ,ಪಾರದರ್ಶಕ ಮತ್ತು ತಾರತಮ್ಯರಹಿತ ಶುಲ್ಕಗಳನ್ನು ವಿಧಿಸಬಹುದಾಗಿದೆ. ಕೋವಿಡ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸದ್ಯೋಭವಿಷ್ಯದಲ್ಲಿ ಬ್ಯಾಂಕ್ ಶುಲ್ಕಗಳನ್ನು ಹೆಚ್ಚಿಸುವ ಯಾವುದೇ ಉದ್ದೇಶವನ್ನು ತಾವು ಹೊಂದಿಲ್ಲ ಎಂದು ಇತರ ಪಿಎಸ್‌ಬಿಗಳೂ ತಿಳಿಸಿವೆ ಎಂದು ಸಚಿವಾಲಯವು ಹೇಳಿದೆ.

ಬ್ಯಾಂಕ್ ಶುಲ್ಕಗಳನ್ನು ಹೆಚ್ಚಿಸುವ ಕ್ರಮವನ್ನು ಪ್ರತಿಪಕ್ಷಗಳು ಪ್ರತಿಭಟಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X