Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಹಲವು...

ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಹಲವು ಎಡವಟ್ಟುಗಳು; ಹಲವರ ಹೆಸರು ಮೃತ ಮತದಾರರ ಪಟ್ಟಿಯಲ್ಲಿ !

ವಾರ್ತಾಭಾರತಿವಾರ್ತಾಭಾರತಿ3 Nov 2020 11:09 PM IST
share
ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ಹಲವು ಎಡವಟ್ಟುಗಳು; ಹಲವರ ಹೆಸರು ಮೃತ ಮತದಾರರ ಪಟ್ಟಿಯಲ್ಲಿ !

ಪಾಟ್ನಾ, ನ. 3: ಬಿಹಾರ ವಿಧಾನ ಸಭೆಯ 94 ಕ್ಷೇತ್ರಗಳಿಗೆ ಮಂಗಳವಾರ ನಡೆದ ಎರಡನೇ ಹಂತದ ಮತದಾನದ ಸಂದರ್ಭ ಪಾಟ್ನಾದ ಹಲವು ಕ್ಷೇತ್ರಗಳಲ್ಲಿ ಮತದಾರರು ಮತದಾನ ನಡೆಸಲು ತೊಂದರೆ ಅನುಭವಿಸಬೇಕಾಯಿತು. ಹಲವರು ಮತ ಚೀಟಿ ಇಲ್ಲದೆ ಮತದಾನದಿಂದ ವಂಚಿತರಾದರು. ಕೆಲವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿಗಾಗಿ ಹುಡುಕಾಡಿದರು.

ಆದರೆ, ಅಂತಿಮವಾಗಿ ಅವರ ಹೆಸರು ಮೃತ ಮತದಾರರ ಪಟ್ಟಿಯಲ್ಲಿತ್ತು. ಕೆಲವರ ಮತ ಚೀಟಿಯಲ್ಲಿ ಲಿಂಗತ್ವ ಬದಲಾಗಿತ್ತು. ಇನ್ನು ಕೆಲವರ ಸಂಬಂಧಗಳು ಬದಲಾಗಿದ್ದವು. ಯಾರದೋ ತಂದೆಯನ್ನು ಯಾರದೋ ಪತಿ ಎಂದು ದಾಖಲಿಸಲಾಗಿತ್ತು. ಕೆಲವರ ಮತ ಚೀಟಿಯ ಫೋಟೊಗಳು ಬದಲಾಗಿದ್ದವು. ತನ್ನ ತಾಯಿಯ ಹೆಸರು ಮೃತ ಮತದಾರರ ಪಟ್ಟಿಯಲ್ಲಿ ಇದ್ದುದು ನೋಡಿ ಅಚ್ಚರಿ ಉಂಟಾಯಿತು ಎಂದು ಕುಮ್ಹಾರರ್ ಕ್ಷೇತ್ರದ ಮತದಾರ ಶಂಭು ನಾಥ್ ಝಾ ಹೇಳಿದ್ದಾರೆ. ‘‘ನನ್ನ ತಾಯಿ ಬದುಕಿದ್ದಾರೆ. ಈಗಲೂ ಕ್ರಿಯಾಶೀಲರಾಗಿದ್ದಾರೆ. ನಾನು ಅವರ ಮತ ಚೀಟಿ ಪಡೆದುಕೊಂಡಿರಲಿಲ್ಲ. ನಾನು ಈ ಬಗ್ಗೆ ವಿಚಾರಣೆ ನಡೆಸಿದೆ. ಅಚ್ಚರಿ ಎಂಬಂತೆ ನನ್ನ ತಾಯಿಯ ಹೆಸರು ಮೃತಪಟ್ಟ ಮತದಾರರ ಪಟ್ಟಿಯಲ್ಲಿ ಇತ್ತು’’ ಎಂದು ಶಂಭುನಾಥ್ ಝಾ ಹೇಳಿದ್ದಾರೆ. ಕುತೂಹಲಕಾರಿ ವಿಚಾರ ಎಂದರೆ, ನನ್ನ ನೆರೆಯ ವ್ಯಕ್ತಿಯ ತಂದೆ ತೀರಿಕೊಂಡಿದ್ದಾರೆ.

ಆದರೆ, ಅವರು ತಂದೆಯ ಮತ ಚೀಟಿಯನ್ನು ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಕುಮ್ಹಾರರ್ ವಿಧಾನ ಸಭಾ ಕ್ಷೇತ್ರದ ಕಂಕಾರ್‌ಬಂಗ್‌ನ ಮತದಾರ ಪ್ರವೀಣ್ ಕುಮಾರ್, ಮತದಾರರ ಪಟ್ಟಿಯಲ್ಲಿ ನನ್ನ ಲಿಂಗತ್ವ ಬದಲಾಗಿದೆ. ನನ್ನ ಫೋಟೊದ ಬದಲು ಮಹಿಳೆಯ ಫೋಟೊ ಮುದ್ರಿಸಲಾಗಿದೆ ಎಂದಿದ್ದಾರೆ. ತನ್ನ ಮತದಾನದ ಚೀಟಿಯಲ್ಲಿ ತನ್ನ ತಂದೆಯನ್ನು ತನ್ನ ಪತಿ ಎಂದು ದಾಖಲಿಸಲಾಗಿದೆ ಎಂದು ಬಂಕಿಪುರ ಕ್ಷೇತ್ರದ ಕದಮ್ ಕುವಾನ್‌ನ ಮತದಾರೆ ರೇಖಾ ಹೇಳಿದ್ದಾರೆ. ಈ ಬಾರಿ ಮತದಾನದ ಚೀಟಿಯಲ್ಲಿ ಹಲವು ಲೋಪಗಳು ಕಂಡು ಬಂದಿದ್ದು, ಹಲವರಿಗೆ ಮತದಾನ ಮಾಡಲು ಸಾಧ್ಯವಾಗಿಲ್ಲ ಎಂದು ರಾಜೇಂದ್ರ ನಗರದ ಮತದಾರ ರಮೇಶ್ ಶುಕ್ಲಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X