Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದ ಭೂ ಕಾನೂನು ಜನವಿರೋಧಿ: ಗುಪ್ಕರ್...

ಕೇಂದ್ರದ ಭೂ ಕಾನೂನು ಜನವಿರೋಧಿ: ಗುಪ್ಕರ್ ಮೈತ್ರಿಕೂಟ ಟೀಕೆ

ವಾರ್ತಾಭಾರತಿವಾರ್ತಾಭಾರತಿ3 Nov 2020 11:51 PM IST
share
ಕೇಂದ್ರದ ಭೂ ಕಾನೂನು ಜನವಿರೋಧಿ: ಗುಪ್ಕರ್ ಮೈತ್ರಿಕೂಟ ಟೀಕೆ

ಶ್ರೀನಗರ, ನ.3: ಕೇಂದ್ರ ಸರಕಾರ ಇತ್ತೀಚೆಗೆ ಜಾರಿಗೊಳಿಸಿರುವ ನೂತನ ಭೂ ಕಾನೂನನ್ನು ಖಂಡಿಸಿರುವ ಗುಪ್ಕರ್ ಘೋಷಣೆಗಾಗಿನ ಜನತಾ ಮೈತ್ರಿಕೂಟ, ಇದು ಜನವಿರೋಧಿ, ಸಂವಿಧಾನ ವಿರೋಧಿ, ಪ್ರತಿಗಾಮಿಯಾಗಿದ್ದು ಜನರನ್ನು ದುರ್ಬಲಗೊಳಿಸುವ, ಜಮ್ಮು ಕಾಶ್ಮೀರದ ಜನಸಂಖ್ಯಾ ವಿಜ್ಞಾನವನ್ನು ಬದಲಿಸುವ ಗುರಿಯನ್ನು ಹೊಂದಿದೆ ಎಂದು ಟೀಕಿಸಿದೆ.

ಅಕ್ಟೋಬರ್ 26ರಂದು ಜಮ್ಮು ಕಾಶ್ಮೀರ ಆಡಳಿತದ ವಕ್ತಾರರು ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು ಜನರನ್ನು ದಾರಿ ತಪ್ಪಿಸುವ ಉದ್ದೇಶ ಹೊಂದಿದೆ ಎಂದು ಮೈತ್ರಿಕೂಟ ಮಂಗಳವಾರ ಬಿಡುಗಡೆಗೊಳಿಸಿರುವ ಹೇಳಿಕೆ ತಿಳಿಸಿದೆ. ಜಮ್ಮು ಕಾಶ್ಮೀರದ 90ಶೇ.ಕ್ಕೂ ಹೆಚ್ಚು ಕೃಷಿಭೂಮಿ ಆಗಿರುವುದರಿಂದ ಅದನ್ನು ಹೊರಗಿನವರಿಗೆ ಮಾರುವಂತಿಲ್ಲ. ಹೊಸ ಕಾನೂನಿನಲ್ಲಿ ಈ ಭೂಮಿ ಹೊರಗಿನವರ ವಶಕ್ಕೆ ಹೋಗುವುದನ್ನು ತಡೆಯಲಾಗಿದೆ ಮತ್ತು ಕೃಷಿ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ತ್ವರಿತ ಕೈಗಾರೀಕರಣ, ಆರ್ಥಿಕ ಅಭಿವೃದ್ಧಿ ಮತ್ತು ಉದ್ಯೋಗಾವಕಾಶ ಸೃಜಿಸುತ್ತದೆ ಎಂದು ಜಮ್ಮು ಕಾಶ್ಮೀರದ ಆಡಳಿತದ ಪರವಾಗಿ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ಸೋಮವಾರ ಸುದ್ಧಿಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದರು.

ಇದನ್ನು ವಿರೋಧಿಸಿರುವ ಮೈತ್ರಿಕೂಟ, 2019ರ ಆಗಸ್ಟ್‌ಗಿಂತ ಹಿಂದಿನ ಕಾನೂನು ಜಮ್ಮು ಕಾಶ್ಮೀರವನ್ನು ಇಡೀ ಭಾರತೀಯ ಉಪಖಂಡದಲ್ಲೇ ಅತ್ಯಂತ ಅಭಿವೃದ್ದಿಹೊಂದಿದ, ರೈತರ ಪರವಾದ ಪ್ರದೇಶವನ್ನಾಗಿಸಿತ್ತು ಎಂದು ಹೇಳಿದೆ. ಉಳುವವನಿಗೇ ಭೂಮಿ ಎಂಬ ಕಲ್ಪನೆಯನ್ನು ದೇಶದಲ್ಲಿ ಮೊದಲು ಜಾರಿಗೆ ತಂದಿದ್ದು ಜಮ್ಮು ಕಾಶ್ಮೀರ ರಾಜ್ಯ. ಕೆಲವೇ ಭೂಮಾಲಿಕರ ಕೈಯಲ್ಲಿ ಕೃಷಿ ಭೂಮಿ ಕೇಂದ್ರೀಕೃತವಾಗುವುದನ್ನು ತಪ್ಪಿಸಲು, ಓರ್ವ ರೈತನಿಗೆ ಗರಿಷ್ಟ 12.5 ಎಕರೆ ಭೂಮಿ ಹೊಂದಲು ಅವಕಾಶ ಮಾಡಿಕೊಡುವ 1976ರ ಕೃಷಿ ಸುಧಾರಣೆ ಕಾಯ್ದೆಯನ್ನು ಜಾರಿಗೊಳಿಸಿತ್ತು. ಇದು ಅಪ್ರಚಲಿತ ಕಾನೂನು ಎಂದು ಹೇಳುವವರು ಜಮ್ಮು-ಕಾಶ್ಮೀರದ ಇತಿಹಾಸದ ಬಗ್ಗೆ ಅಜ್ಞಾನಿಗಳಾಗಿದ್ದಾರೆ ಎಂದು ಮೈತ್ರಿಕೂಟ ಹೇಳಿದೆ.

ಜಮ್ಮು ಕಾಶ್ಮೀರದಲ್ಲಿ ಸಕಾಲದಲ್ಲಿ ಜಾರಿಗೊಳಿಸಿದ ಭೂಸುಧಾರಣಾ ಕಾನೂನಿನಿಂದಾಗಿ ರಾಜ್ಯದಲ್ಲಿ ಹಸಿವಿನಿಂದ ಸಾಯುವ ಪ್ರಕರಣ ವರದಿಯಾಗಿಲ್ಲ ಅಥವಾ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ ಮತ್ತು ಪ್ರತಿಯೊಬ್ಬರಿಗೂ ಮೂರು ಮೂಲ ಅಗತ್ಯಗಳಾದ ಆಹಾರ, ಬಟ್ಟೆ ಮತ್ತು ವಸತಿಯ ಸೌಲಭ್ಯ ದಕ್ಕಿದೆ. ಹೊಸ ಕಾನೂನು ಈ ಪರಿಸ್ಥಿತಿಯನ್ನು ಹದಗೆಡಿಸಲಿದೆ ಎಂದು ಮೈತ್ರಿಕೂಟ ಆಕ್ರೋಶ ವ್ಯಕ್ತಪಡಿಸಿದೆ. ಭೂಮಿಯ ಪರಭಾರೆ ಕಾಯ್ದೆಯು ರಾಜ್ಯದ ಪ್ರಜೆಗಳಲ್ಲದವರಿಗೆ ಭೂಮಿಯನ್ನು ವರ್ಗಾಯಿಸುವುದನ್ನು ನಿಷೇಧಿಸಿದ್ದು ಇದು ಅಪ್ರಚಲಿತ ಹೇಗಾಗುತ್ತದೆ ? ಜಮ್ಮು ಕಾಶ್ಮೀರದ ಶಾಶ್ವತ(ಕಾಯಂ) ಪ್ರಜೆಗಳ ಹಿತಾಸಕ್ತಿಯನ್ನು ರಕ್ಷಿಸುವ ಜೊತೆಗೆ, ಐಡಿಬಿಐ, ಐಸಿಐಸಿಐ ಮತ್ತಿತರ ಸಂಸ್ಥೆಗಳಿಗೆ ಭೂಮಿಯನ್ನು ಅಡಮಾನ ಇಡುವ ಮೂಲಕ ವರ್ಗಾಯಿಸುವ ಅವಕಾಶವನ್ನೂ ಭೂಮಿಯ ಪರಭಾರೆ ಕಾಯ್ದೆಯಲ್ಲಿ ನೀಡಲಾಗಿತ್ತು. ಇದು ಕೈಗಾರಿಕಾ ಅಭಿವೃದ್ಧಿಗೆ ಪೂರಕವಾದ ಅಂಶವಾಗಿದೆ ಎಂದು ಮೈತ್ರಿಕೂಟದ ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X