Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚುನಾವಣೆಯನ್ನು ನಾವು ಗೆದ್ದಿದ್ದೇವೆ, ...

ಚುನಾವಣೆಯನ್ನು ನಾವು ಗೆದ್ದಿದ್ದೇವೆ, ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ: ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ4 Nov 2020 1:59 PM IST
share
ಚುನಾವಣೆಯನ್ನು ನಾವು ಗೆದ್ದಿದ್ದೇವೆ,  ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ: ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಘೋಷಣೆ

ವಾಶಿಂಗ್ಟನ್, ನ. 4: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ, ಲಕ್ಷಾಂತರ ಮತಗಳ ಎಣಿಕೆ ಬಾಕಿಯಿರುವಂತೆಯೇ, ನಾನು ವಿಜಯಿಯಾಗಿದ್ದೇನೆ ಎಂಬುದಾಗಿ ದೇಶದ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಬುಧವಾರ ಮುಂಜಾನೆ ತಪ್ಪಾಗಿ ಘೋಷಿಸಿದ್ದಾರೆ.

ಇದಕ್ಕೂ ಮೊದಲು ಅವರ ಎದುರಾಳಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ತನ್ನ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಾ, ನನ್ನ ವಿಜಯದ ಬಗ್ಗೆ ನನಗೆ ಭರವಸೆಯಿದೆ ಎಂದು ಹೇಳಿದರು ಹಾಗೂ ಮತ ಎಣಿಕೆ ಪೂರ್ಣಗೊಳ್ಳಲು ಸಮಯ ತಗಲಬಹುದು ಎಂದು ಹೇಳಿದರು.

ಇದರ ಬೆನ್ನಿಗೇ ಶ್ವೇತಭವನದಲ್ಲಿ ಕಾಣಿಸಿಕೊಂಡ ಟ್ರಂಪ್, ನಾನು ವಿಜಯಿಯಾಗಿದ್ದೇನೆ ಎಂದು ಘೋಷಿಸಿದರು ಹಾಗೂ ನಾನು ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ ಎಂದರು.

‘‘ಈ ಚುನಾವಣೆಯನ್ನು ಗೆಲ್ಲಲು ನಾವು ತಯಾರಾಗುತ್ತಿದ್ದೆವು. ಪ್ರಾಮಾಣಿಕವಾಗಿ ಹೇಳುವುದಾದರೆ, ನಾವು ಈ ಚುನಾವಣೆಯನ್ನು ಗೆದ್ದಿದ್ದೇವೆ’’ ಎಂದು ಶ್ವೇತಭವನದಲ್ಲಿ ಮುಂಜಾನೆ 2:30ಕ್ಕೆ ಅಸಾಧಾರಣ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಿದ ಟ್ರಂಪ್ ಹೇಳಿದರು.

‘‘ಇದು ನಮ್ಮ ದೇಶಕ್ಕೆ ಮಾಡಿದ ದೊಡ್ಡ ವಂಚನೆಯಾಗಿದೆ. ಸರಿಯಾದ ರೀತಿಯಲ್ಲಿ ಕಾನೂನನ್ನು ಬಳಸಲು ನಾವು ಬಯಸಿದ್ದೇವೆ. ಹಾಗಾಗಿ, ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತಿದ್ದೇವೆ. ಎಲ್ಲ ಮತದಾನ ನಿಲ್ಲಬೇಕೆಂದು ನಾವು ಬಯಸುತ್ತೇವೆ’’ ಎಂದು ಅಧ್ಯಕ್ಷರು ಹೇಳಿದರು.

ಇದಕ್ಕೂ ಮೊದಲು ಅವರು ತನ್ನ ಕುಟುಂಬ ಸದಸ್ಯರೊಂದಿಗೆ ಶ್ವೇತಭವನ ನಿವಾಸದಲ್ಲಿ ಚುನಾವಣಾ ಫಲಿತಾಂಶವನ್ನು ವೀಕ್ಷಿಸುತ್ತಿದ್ದರು.

ಟ್ರಂಪ್ ಘೋಷಣೆ ‘ಆಘಾತಕಾರಿ’, ‘ಅಭೂತಪೂರ್ವ’

ಬೈಡನ್ ಪ್ರಚಾರ ತಂಡದಿಂದ ತಿರುಗೇಟು

ಚುನಾವಣೆಯಲ್ಲಿ ತಾನು ವಿಜಯಿಯಾಗಿದ್ದೇನೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಘೋಷಣೆಗೆ ತಿರುಗೇಟು ನೀಡಿರುವ ಪ್ರತಿಸ್ಪರ್ಧಿ ಜೋ ಬೈಡನ್ ಪ್ರಚಾರ ತಂಡವು, ಮತ ಎಣಿಕೆಯನ್ನು ನಿಲ್ಲಿಸುವ ಅಧ್ಯಕ್ಷರ ಪ್ರಯತ್ನವು ‘ಆಘಾತಕಾರಿ’ ಮತ್ತು ‘ಅಭೂತಪೂರ್ವ’ ಎಂಬುದಾಗಿ ಬಣ್ಣಿಸಿದೆ.

ಇದರ ವಿರುದ್ಧ ನ್ಯಾಯಾಲಯಗಳಲ್ಲಿ ಹೋರಾಡಲು ನಮ್ಮ ಕಾನೂನು ತಂಡವು ಸಿದ್ಧವಾಗಿದೆ ಎಂದು ಹೇಳಿದೆ.

‘‘ಮತ ಎಣಿಕೆ ಮುಗಿಯುವುದಿಲ್ಲ. ಕ್ರಮಬದ್ಧವಾಗಿ ಚಲಾವಣೆಯಾದ ಪ್ರತಿ ಮತದ ಎಣಿಕೆಯಾಗುವವರೆಗೆ ಮತ ಎಣಿಕೆ ಮುಂದುವರಿಯುತ್ತದೆ’’ ಎಂದು ಬೈಡನ್ ತಂಡ ಹೇಳಿದೆ.

ಚಲಾವಣೆಯಾಗಿರುವ ಎಲ್ಲ ಮತಗಳ ಎಣಿಕೆಯಾಗಬೇಕೆಂದು ಅಮೆರಿಕದ ಚುನಾವಣಾ ಕಾನೂನು ಹೇಳುತ್ತದೆ. ಸಾಮಾನ್ಯವಾಗಿ ಹಲವು ರಾಜ್ಯಗಳು ಮತಗಳನ್ನು ಎಣಿಸಲು ಹಲವು ದಿನಗಳನ್ನೇ ತೆಗೆದುಕೊಳ್ಳುತ್ತವೆ. ಈ ಬಾರಿ ಕೊರೋನ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹೆಚ್ಚಿನವರು ಅಧಿಕೃತ ಮತದಾನ ದಿನಾಂಕಕ್ಕೆ ಮುಂಚಿತವಾಗಿಯೇ ಅಂಚೆ ಮತಗಳನ್ನು ಚಲಾಯಿಸಿರುವುದರಿಂದ ಹೆಚ್ಚಿನ ಮತಗಳನ್ನು ಎಣಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X