Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲವ್ ಜಿಹಾದ್ ಹೆಸರಲ್ಲಿ ದೇಶಾದ್ಯಂತ ಭಾರೀ...

ಲವ್ ಜಿಹಾದ್ ಹೆಸರಲ್ಲಿ ದೇಶಾದ್ಯಂತ ಭಾರೀ ಪ್ರಮಾಣದಲ್ಲಿ ಮತಾಂತರ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ4 Nov 2020 8:28 PM IST
share
ಲವ್ ಜಿಹಾದ್ ಹೆಸರಲ್ಲಿ ದೇಶಾದ್ಯಂತ ಭಾರೀ ಪ್ರಮಾಣದಲ್ಲಿ ಮತಾಂತರ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು, ನ.4: ದೇಶಾದ್ಯಂತ ಲವ್ ಜಿಹಾದ್ ಹೆಸರಿನಲ್ಲಿ ದೊಡ್ಡ ಮಟ್ಟದ ಮತಾಂತರ ನಡೆಯುತ್ತಿದೆ. ಲವ್ ಜಿಹಾದ್ ಎಂಬುದು ಭಯೋತ್ಪಾದಕತೆಯ ಇನ್ನೊಂದು ಮುಖವಾಗಿದೆ. ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಜಾರಿಮಾಡಲು ಸಾಧ್ಯವಿರುವ ಮತಾಂತರ ಕಾಯ್ದೆಯನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸುವ ಅನಿವಾರ್ಯತೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಒಂದು ಕೋಮಿನ ಜನಸಂಖ್ಯೆಯನ್ನು ಹೆಚ್ಚಿಸಲು ಲವ್ ಜಿಹಾದ್ ಮೂಲಕ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗುತ್ತಿದೆ. ಇದನ್ನು ದೇಶದ ಬೇರೆ ಬೇರೆ ಸ್ಥಳಗಳಲ್ಲಿ ಮತಾಂಧರು ಮಾಡಿರುವ ಭಾಷಣಗಳು ಸಾಕ್ಷಿಯಾಗಿವೆ. ಓವೈಸಿಯಂತಹ ಕೋಮುವಾದಿಗಳು ಬಹಿರಂಗವಾಗಿ ಲವ್ ಜಿಹಾದ್‍ನ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ಇತ್ತೀಚೆಗೆ ಉಡುಪಿಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಯುವಕನೋರ್ವ ನಾಪತ್ತೆಯಾಗಿದ್ದು, ಇದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ ಎಂದ ಅವರು, ಈ ಪ್ರಕರಣವು ಬಹು ಯೋಜನಾಬದ್ಧವಾಗಿ ನಡೆದಿದೆ. ಚಿಕ್ಕ ಚಿಕ್ಕ ಬಾಲಕಿಯರನ್ನು ಸಹ ಪ್ರಚೋದನೆಗೆ ಒಳಪಡಿಸಿ ಹಣದ ಆಮಿಷವನ್ನು ತೋರಿಸಿ ಲವ್ ಜಿಹಾದ್ ಹೆಸರಿನಲ್ಲಿ ಸಮಾಜ ಪರಿವರ್ತನೆಯ ಹುನ್ನಾರ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಶೀಘ್ರ ಮತಾಂತರ ಕಾಯ್ದೆಯನ್ನು ಜಾರಿಗೊಳಿಸುವ ಅಗತ್ಯವಿದೆ. ಹಣದ ಆಮಿಷವೊಡ್ಡಿ ಏನು ಬೇಕಾದರೂ ಮಾಡಬಹುದೆಂಬ ಮನಸ್ಥಿತಿಯಲ್ಲಿರುವ ಒಂದು ಕೋಮಿನ ಜನರ ಷಡ್ಯಂತ್ರಕ್ಕೆ ಬಲಿಯಾಗುತ್ತಿರುವ ನಮ್ಮ ಧರ್ಮದ ಹೆಣ್ಣು ಮಕ್ಕಳನ್ನು ರಕ್ಷಿಸಲು ಶೀಘ್ರದಲ್ಲಿಯೇ ಮತಾಂತರ ಕಾಯ್ದೆಯನ್ನು ಜಾರಿಗೊಳಿಸಬೇಕೆಂದರು.

ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಮತಾಂತರ ಕಾಯ್ದೆಯನ್ನು ಜಾರಿಗೊಳಿಸುವ ಕುರಿತು ಮತಾಂತರ ಕಾಯ್ದೆ ಜಾರಿಯಲ್ಲಿರುವ ಬೇರೆ ಬೇರೆ ರಾಜ್ಯಗಳಲ್ಲಿ ಸಾಧಕ-ಬಾಧಕಗಳನ್ನು ಪರಿಗಣಿಸಿ, ಪೋಲೀಸ್ ಇಲಾಖೆಯ ವರದಿಯನ್ನಾಧರಿಸಿ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಬಹುದು ಎಂಬ ಬಗ್ಗೆ ಚರ್ಚೆಯಾಗುವ ಅಗತ್ಯವಿದೆ. ಮತಾಂತರ ಕಾಯ್ದೆ ಜಾರಿಗೊಳಿಸುವ ಬಗ್ಗೆ ವಿಶೇಷ ಚರ್ಚೆ ಮತ್ತು ಅಧ್ಯಯನ ಆಗಬೇಕು. ಗೃಹ ಸಚಿವರು, ಮುಖ್ಯಮಂತ್ರಿ, ಪೋಲೀಸ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಈ ಬಗ್ಗೆ ಮಾತನಾಡಲಿದ್ದೇನೆ. ನ್ಯಾಯಾಂಗ ವ್ಯವಸ್ಥೆಯಲ್ಲಿಯೂ ಕಾಯ್ದೆಗೆ ರಕ್ಷಣೆ ದೊರೆಯಬೇಕು ಎಂದರು.

ರಾಜರಾಜೇಶ್ವರಿ ನಗರ ಮತ್ತು ಶಿರಾದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಜಯ ಖಚಿತ. ನಾನು 2 ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದು, ಅಲ್ಲಿನ ಜನತೆ ಬಿಜೆಪಿಯ ಪರವಾಗಿದ್ದಾರೆ. ಶಿರಾ ಬಿಜೆಪಿಗೆ ಕಠಿಣವಾಗಿತ್ತು. ಆದರೆ ಕಳೆದ ಮೂರು ನಾಲ್ಕು ತಿಂಗಳಿನಿಂದ ಬಿಜೆಪಿಯ ಮುಖಂಡರು ಹಳ್ಳಿಗಳಲ್ಲಿ ಪ್ರವಾಸ ಮಾಡಿ ಹೊಸಬರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಪಕ್ಷವನ್ನು ಸದೃಢವಾಗಿ ಸಂಘಟನೆಯನ್ನು ಬಲಪಡಿಸುವ ಕೆಲಸವನ್ನು ಮಾಡಿದ್ದಾರೆ ಎಂದ ಅವರು, ಆರ್.ಆರ್ ನಗರದಲ್ಲಿ ಶೇಕಡವಾರು ಮತದಾನ ಕಡಿಮೆಯಾಗಿದ್ದು, ನಿರೀಕ್ಷೆಯಂತೆ ಗೆಲುವಿನ ಅಂತರ ಕಡಿಮೆಯಾದರೂ ಗೆಲುವು ನಮ್ಮದೇ. ಡಿಕೆ ರವಿ ತಾಯಿ ಹೇಳಿಕೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಶಿರಾದಲ್ಲಿ ಬಿಜೆಪಿ ಭಾರೀ ಮತಗಳ ಅಂತರದಿಂದ ಗೆಲ್ಲಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X