Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರುದ್ಯೋಗ,ವಲಸೆ ಕಾರ್ಮಿಕರ ಬಿಕ್ಕಟ್ಟು...

ನಿರುದ್ಯೋಗ,ವಲಸೆ ಕಾರ್ಮಿಕರ ಬಿಕ್ಕಟ್ಟು ಕುರಿತು ಮೋದಿ, ನಿತೀಶ್ ವಿರುದ್ಧ ರಾಹುಲ್ ಟೀಕಾಪ್ರಹಾರ

ವಾರ್ತಾಭಾರತಿವಾರ್ತಾಭಾರತಿ4 Nov 2020 8:43 PM IST
share
ನಿರುದ್ಯೋಗ,ವಲಸೆ ಕಾರ್ಮಿಕರ ಬಿಕ್ಕಟ್ಟು ಕುರಿತು ಮೋದಿ, ನಿತೀಶ್ ವಿರುದ್ಧ ರಾಹುಲ್ ಟೀಕಾಪ್ರಹಾರ

ಮಾಧೇಪುರ(ಬಿಹಾರ),ನ.4: ತನ್ನ ರಾಜಕೀಯ ಎದುರಾಳಿಗಳ ವಿರುದ್ಧ ಬುಧವಾರ ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು,ಕೊರೋನ ವೈರಸ್ ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನೆರವಾಗದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಈಗ ಅವರಿಂದ ಮತಗಳನ್ನು ಕೋರುತ್ತಿದ್ದಾರೆ ಎಂದು ಟೀಕಿಸಿದರು. ಹಿರಿಯ ಸಮಾಜವಾದಿ ನಾಯಕ ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ಯಾದವ್ ಸ್ಪರ್ಧಿಸಿರುವ ಬಿಹಾರಿಗಂಜ್ ‌ನಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್, ಉದ್ಯೋಗ ಸೃಷ್ಟಿ ಕುರಿತಂತೆ ಮೋದಿ ಮತ್ತು ನಿತೀಶ್ ರನ್ನು ತರಾಟೆಗೆತ್ತಿಕೊಂಡರು. ಯುವಜನರಿಗಾಗಿ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ಬಿಹಾರವನ್ನು ಬದಲಾಯಿಸುವ ಭರವಸೆ ನೀಡಿದ್ದ ನಿತೀಶ ಅದನ್ನು ಈಡೇರಿಸುವಲ್ಲಿ ವಿಫಲಗೊಂಡಿದ್ದಾರೆ. ಬಹಿರಂಗ ಸಭೆಗಳಲ್ಲಿ ಈ ಬಗ್ಗೆ ಪ್ರಶ್ನಿಸುತ್ತಿರುವ ಯುವಜನರಿಗೆ ನಿತೀಶ್ ಬೆದರಿಕೆಯೊಡ್ಡುತ್ತಿದ್ದಾರೆ ಎಂದರು.

ಗೋವಿನ ಜೋಳ ಮತ್ತು ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ವಿಷಯವನ್ನು ಪ್ರಸ್ತಾಪಿಸಿದ ಅವರು,ರೈತರಿಗೆ ಸಿಗಬೇಕಾದ ಹಣವು ವಾಸ್ತವದಲ್ಲಿ ಮಧ್ಯವರ್ತಿಗಳಿಗೆ ಸೇರುತ್ತಿದೆ ಎಂದರು.

ಮೋದಿ ಮತ್ತು ನಿತೀಶ್ ಕೊರೋನ ವೈರಸ್ ಲಾಕ್‌ಡೌನ್ ಸಮಯದಲ್ಲಿ ಕಾರ್ಮಿಕರಿಗೆ ಯಾವುದೇ ಸಹಾಯವನ್ನು ಮಾಡಿರಲಿಲ್ಲ,ಬದಲು ಅವರ ಮೇಲೆ ಲಾಠಿಪ್ರಹಾರ ಮಾಡಿಸಿದ್ದರು. ಈಗ ಇದೇ ಜನರ ಮತಗಳನ್ನು ಕೋರುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್,ಪ್ರಧಾನಿಯವರ ಹೃದಯದಲ್ಲಿ ರೈತರು ಮತ್ತು ಕಾರ್ಮಿಕರಿಗೆ ಸ್ವಲ್ಪವಾದರೂ ಸ್ಥಳವಿದ್ದಿದ್ದರೆ ಅವರು ಪ್ರಾಣತ್ಯಾಗ ಮಾಡುತ್ತಿದ್ದರೇ ಹೊರತು ಲಾಕ್‌ಡೌನ್ ಸಂದರ್ಭದಲ್ಲಿ ಮಾಡಿದ್ದ ಕೆಲಸಗಳನ್ನು ಮಾಡುತ್ತಿರಲಿಲ್ಲ. ಇಡೀ ಬಿಹಾರಕ್ಕೆ ಇದು ಗೊತ್ತಿದೆ ಎಂದರು.

ಇತ್ತೀಚಿಗೆ ಅಂಗೀಕರಿಸಿರುವ ಮೂರು ಕೃಷಿ ಕಾನೂನುಗಳ ಮೂಲಕ ಮೋದಿಯವರು ಅದಾನಿ ಮತ್ತು ಅಂಬಾನಿಯಂತಹ ನೂತನ ಮಧ್ಯವರ್ತಿಗಳ ಮಾರ್ಗವನ್ನು ಸುಗಮಗೊಳಿಸಿದ್ದಾರೆ. ಇಲ್ಲಿ ಬೆಳೆದ ಧಾನ್ಯಗಳು ದೊಡ್ಡ ಗೋದಾಮುಗಳನ್ನು ಸೇರುತ್ತಿವೆ ಮತ್ತು ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿವೆ. ನೂತನ ಕೃಷಿ ಕಾನೂನುಗಳಿಂದಾಗಿ ತರಕಾರಿಗಳು ಮತ್ತು ಇತರ ಆಹಾರ ಸಾಮಗ್ರಿಗಳ ಬೆಲೆಗಳು ಏರುತ್ತಿವೆ ಎಂದು ರಾಹುಲ್ ನುಡಿದರು.

ಶರದ್ ಯಾದವ್ ರನ್ನು ಹೊಗಳಿದ ರಾಹುಲ್, ಅವರು ತನಗೆ ಬಹಳಷ್ಟನ್ನು ಕಲಿಸಿದ್ದಾರೆ, ಒಂದು ರೀತಿಯಲ್ಲಿ ಅವರು ತನಗೆ ಗುರುವಾಗಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X