Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಿಸರ ಸೂಕ್ಷ್ಮ ವಲಯದ 50...

ಪರಿಸರ ಸೂಕ್ಷ್ಮ ವಲಯದ 50 ಕಿ.ಮೀ.ವಿಸ್ತೀರ್ಣದಲ್ಲಿ ಗಣಿಗಾರಿಕೆಯ ಇ-ಹರಾಜಿಗೆ ಅವಕಾಶವಿಲ್ಲ: ಸುಪ್ರೀಂ ಇಂಗಿತ

ವಾರ್ತಾಭಾರತಿವಾರ್ತಾಭಾರತಿ4 Nov 2020 11:00 PM IST
share
ಪರಿಸರ ಸೂಕ್ಷ್ಮ ವಲಯದ 50 ಕಿ.ಮೀ.ವಿಸ್ತೀರ್ಣದಲ್ಲಿ ಗಣಿಗಾರಿಕೆಯ ಇ-ಹರಾಜಿಗೆ ಅವಕಾಶವಿಲ್ಲ: ಸುಪ್ರೀಂ ಇಂಗಿತ

ಹೊಸದಿಲ್ಲಿ,ನ.4: ಜಾರ್ಖಂಡ್‌ನಲ್ಲಿ ಪರಿಸರ ಸೂಕ್ಷ್ಮ ವಲಯದ 50 ಕಿ.ಮೀ.ವಿಸ್ತೀರ್ಣದಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಯಾವುದೇ ಉದ್ದೇಶಿತ ಗಣಿಯನ್ನು ಇ-ಹರಾಜು ಮಾಡಕೂಡದು ಎಂದು ತಾನು ಆದೇಶಿಸಲು ಉದ್ದೇಶಿಸಿರುವುದಾಗಿ ಸರ್ವೋಚ್ಚ ನ್ಯಾಯಾಲಯವು ಬುಧವಾರ ಹೇಳಿದೆ.

ಅರಣ್ಯ ನಾಶವಾಗುವುದಿಲ್ಲ ಎನ್ನುವುದನ್ನು ಖಚಿತ ಪಡಿಸಲಿಕ್ಕಷ್ಟೇ ತಾನು ಬಯಸಿರುವುದಾಗಿ ತಿಳಿಸಿದ ಮು.ನ್ಯಾ.ಎಸ್.ಎ.ಬೋಬ್ಡೆ ನೇತೃತ್ವದ ಪೀಠವು,ಜಾರ್ಖಂಡ್‌ನಲ್ಲಿ ಉದ್ದೇಶಿತ ಗಣಿಗಾರಿಕೆ ನಿವೇಶನಕ್ಕೆ ಸಮೀಪದ ಯಾವುದೇ ಪ್ರದೇಶವು ಪರಿಸರ ಸೂಕ್ಷ್ಮವಲಯವಾಗಲು ಅರ್ಹತೆ ಪಡೆದಿದೆಯೇ ಎನ್ನುವುದನ್ನು ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಚಿಸುವ ಬಗ್ಗೆ ತಾನು ಚಿಂತನೆ ನಡೆಸಿರುವುದಾಗಿಯೂ ಹೇಳಿತು.

ಸರ್ವೋಚ್ಚ ನ್ಯಾಯಾಲಯದ ಸಲಹೆಯನ್ನು ವಿರೋಧಿಸಿದ ಕೇಂದ್ರವು,ಅಂತರದ ಮಾನದಂಡವನ್ನು ಅನ್ವಯಿಸಿದರೆ ಗೋವಾದಂತಹ ರಾಜ್ಯಗಳಲ್ಲಿ ಗಣಿಗಾರಿಕೆ ಅಸಾಧ್ಯವಾಗುತ್ತದೆ ಎಂದು ಬಲವಾಗಿ ಪ್ರತಿಪಾದಿಸಿತು.

ಗಣಿಗಾರಿಕೆ ಪ್ರದೇಶ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಮೀಪದಲ್ಲಿದೆ ಎನ್ನುವುದನ್ನು ನ್ಯಾಯಾಲಯದ ಗಮನಕ್ಕೆ ತಂದರೆ ದೇಶದ ಇತರ ಕಡೆಗಳಲ್ಲಿಯೂ ಅಂತಹ ಕಲ್ಲಿದ್ದಲು ಗಣಿಗಳ ಇ-ಹರಾಜಿಗೆ ತಾನು ತಡೆಯಾಜ್ಞೆಯನ್ನು ನೀಡಬಹುದು ಎಂದು ವಾಣಿಜ್ಯ ಉದ್ದೇಶಗಳಿಗಾಗಿ ಕಲ್ಲಿದ್ದಲು ಗಣಿಗಳನ್ನು ಹರಾಜು ಮಾಡುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಜಾರ್ಖಂಡ್ ಸರಕಾರವು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದ್ದ ಪೀಠವು ತಿಳಿಸಿತು.

ಪೀಠವು ಜಾರ್ಖಂಡ್‌ನ ಅರ್ಜಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಳನ್ನು ಮತ್ತು ಇತರ ಸಂಬಂಧಿತ ವಿಷಯಗಳನ್ನು ತನ್ನೆದುರು ಮಂಡಿಸಲು ಕೇಂದ್ರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ ಅವರಿಗೆ ಶುಕ್ರವಾರದವರೆಗೆ ಸಮಯಾವಕಾಶವನ್ನು ನೀಡಿತು.

ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿರುವ ಜಾರ್ಖಂಡ್‌ನ ಉದ್ದೇಶ ಏನು ಎನ್ನುವುದು ತನಗೆ ತಿಳಿದಿಲ್ಲ,ಆದರೆ ಅರಣ್ಯಗಳು ನಾಶವಾಗದಂತೆ ನೋಡಿಕೊಳ್ಳಲು ತಾನು ಬಯಸಿದ್ದೇನೆ ಎಂದ ಪೀಠವು,ಈ ವಿಷಯದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ ಸೊರೇನ್ ಅವರು ತುಂಬ ಉತ್ಸಾಹಿಯಾಗಿರುವಂತೆ ಕಂಡು ಬರುತ್ತಿದೆ,ಆದರೆ ಛೋಟಾನಾಗ್ಪುರ ಗೇಣಿ ಕಾಯ್ದೆಯ ಲಾಭವನ್ನು ಪಡೆದುಕೊಳ್ಳಲು ಅವರಿಗೂ ಸಾಧ್ಯವಾಗುವುದಿಲ್ಲ ಎನ್ನುವುದು ಸ್ಪಷ್ಟವಾಗಬೇಕು ಎಂದು ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X