Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚುನಾವಣಾ ಫಲಿತಾಂಶ ಪ್ರಶ್ನೆಗೀಡಾದರೆ...

ಚುನಾವಣಾ ಫಲಿತಾಂಶ ಪ್ರಶ್ನೆಗೀಡಾದರೆ ಮುಂದೇನು?

ವಾರ್ತಾಭಾರತಿವಾರ್ತಾಭಾರತಿ5 Nov 2020 9:47 PM IST
share
ಚುನಾವಣಾ ಫಲಿತಾಂಶ ಪ್ರಶ್ನೆಗೀಡಾದರೆ ಮುಂದೇನು?

ವಾಶಿಂಗ್ಟನ್, ನ. 5: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ, ಹಲವು ಮಹತ್ವದ ರಾಜ್ಯಗಳಿಂದ ತೃಪ್ತಿದಾಯಕ ಫಲಿತಾಂಶ ಬರುವ ಮುನ್ನವೇ, ನಾನು ಗೆದ್ದಿದ್ದೇನೆ ಎಂಬುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿಯೇ ಬಿಟ್ಟರು.

ಇದೊಂದು ಅಪ್ರಬುದ್ಧ ಹಾಗೂ ತಪ್ಪು ಹೆಜ್ಜೆ ಎಂಬುದಾಗಿ ಬಳಿಕ ಹಲವರು ಬಣ್ಣಿಸಿದರು. ಅಷ್ಟೇ ಅಲ್ಲ, ಅಂಚೆ ಮತಪತ್ರಗಳ ಎಣಿಕೆಯನ್ನು ತಕ್ಷಣ ನಿಲ್ಲಿಸಬೇಕೆಂದೂ ಟ್ರಂಪ್ ಒತ್ತಾಯಿಸಿದರು. ಇಂಥ ಮತ ಎಣಿಕೆಯು ‘ದೇಶದ ವಿರುದ್ಧ ಮಾಡುವ ವಂಚನೆ’ಯಾಗಿದೆ ಎಂಬುದಾಗಿಯೂ ಹೇಳಿಕೊಂಡರು.

ಚುನಾವಣಾ ಫಲಿತಾಂಶವು ಮುಂದಕ್ಕೆ ಹಲವು ವಿವಾದಗಳಿಗೆ, ನ್ಯಾಯಾಂಗ ಪ್ರಕ್ರಿಯೆಗಳಿಗೆ ಒಳಗಾಗಬಹುದು ಎಂಬ ಸೂಚನೆಯನ್ನು ಟ್ರಂಪ್‌ರ ಹೇಳಿಕೆಗಳು ನೀಡಿವೆ.

ಡೆಮಾಕ್ರಟಿಕ್ ಪಕ್ಷದ ಬೆಂಬಲಿಗರು ರಿಪಬ್ಲಿಕನ್ ಪಕ್ಷದ ಬೆಂಬಲಿಗರಿಗಿಂತ ತುಂಬಾ ಹೆಚ್ಚಿನ ಪ್ರಮಾಣದಲ್ಲಿ ಅಂಚೆ ಮತದಾನದಲ್ಲಿ ಪಾಲ್ಗೊಂಡಿದ್ದಾರೆ ಎನ್ನುವುದನ್ನು ಆರಂಭಿಕ ಅಂಕಿಅಂಶಗಳು ತಿಳಿಸಿವೆ. ಅಂಚೆ ಮತಗಳನ್ನು ಚುನಾವಣಾ ದಿನಕ್ಕಿಂತ ಮುಂಚೆ ಲೆಕ್ಕ ಮಾಡದ ಪೆನ್ಸಿಲ್ವೇನಿಯ ಮತ್ತು ವಿಸ್ಕಾನ್ಸಿನ್ ಮುಂತಾದ ರಾಜ್ಯಗಳಲ್ಲಿ, ಆರಂಭಿಕ ಫಲಿತಾಂಶವು ಟ್ರಂಪ್ ಪರವಾಗಿದ್ದವು. ಯಾಕೆಂದರೆ, ಆಗ ಅಂಚೆ ಮತಪತ್ರಗಳ ಎಣಿಕೆಯಾಗಿರಲಿಲ್ಲ.

ಅಂಚೆ ಮತಗಳ ಎಣಿಕೆಯಾಗುವ ಮುನ್ನವೇ ಟ್ರಂಪ್ ತನ್ನ ವಿಜಯವನ್ನು ಘೋಷಿಸಬಹುದು ಎನ್ನುವುದು ಡೆಮಾಕ್ರಟಿಕರ ಚಿಂತೆಯಾಗಿತ್ತು. ಹಾಗೂ ಅವರು ಊಹಿಸಿದಂತೆಯೇ ನಡೆಯಿತು. ನಾನು ಚುನಾವಣೆಯಲ್ಲಿ ಗೆದ್ದಿದ್ದೇನೆ ಹಾಗೂ ಅಂಚೆ ಮತಗಳ ಎಣಿಕೆಯನ್ನು ನಿಲ್ಲಿಸುವಂತೆ ಕೋರಿ ನ್ಯಾಯಾಲಯಕ್ಕೆ ಹೋಗುತ್ತೇನೆ ಎಂದು ಅವರು ಬುಧವಾರ ಘೋಷಿಸಿದರು.

ಫಲಿತಾಂಶವನ್ನು ನಿರ್ಧರಿಸುವ ಮಹತ್ವದ ರಾಜ್ಯಗಳಲ್ಲಿ ನಿಕಟ ಸ್ಪರ್ಧೆ ಏರ್ಪಟ್ಟಾಗ ಹಿನ್ನಡೆ ಅನುಭವಿಸಿದವರು ನ್ಯಾಯಾಲಯಗಳಿಗೆ ಹೋಗಬಹುದು. ರಾಜ್ಯಗಳಲ್ಲಿ ದಾಖಲಾದ ಪ್ರಕರಣಗಳು ಅಂತಿಮವಾಗಿ ಸುಪ್ರೀಂ ಕೋರ್ಟ್ ತಲುಪಬಹುದು.

 ಚುನಾವಣೆಗೆ ಕೆಲವೇ ದಿನಗಳು ಇರುವಾಗ ಟ್ರಂಪ್ ಆ್ಯಮಿ ಕಾನಿ ಬ್ಯಾರೆಟ್‌ರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶೆಯಾಗಿ ನೇಮಿಸಿದರು.

ಈಗ ಸುಪ್ರೀಂ ಕೋರ್ಟ್‌ನಲ್ಲಿ ಬಲಪಂಥೀಯರು 6-3 ಬಹುಮತ ಹೊಂದಿದ್ದಾರೆ. ಒಂದು ವೇಳೆ ವಿವಾದಿತ ಚುನಾವಣೆಯನ್ನು ನ್ಯಾಯಾಲಯಗಳು ನಿರ್ಧರಿಸಬೇಕಾದ ಸಂದರ್ಭ ಎದುರಾದರೆ, ಸುಪ್ರೀಂ ಕೋರ್ಟ್ ಟ್ರಂಪ್ ಪರವಾಗಿ ತೀರ್ಪು ನೀಡಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X