Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಗಂದೂರು ಮೇಲ್ವಿಚಾರಣ ಸಮಿತಿ...

ಸಿಗಂದೂರು ಮೇಲ್ವಿಚಾರಣ ಸಮಿತಿ ರದ್ದುಗೊಳಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ಬಿ.ಕೆ ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ6 Nov 2020 6:07 PM IST
share
ಸಿಗಂದೂರು ಮೇಲ್ವಿಚಾರಣ ಸಮಿತಿ ರದ್ದುಗೊಳಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ಬಿ.ಕೆ ಹರಿಪ್ರಸಾದ್

ಶಿವಮೊಗ್ಗ, ನ.06: ಸಿಗಂದೂರು ದೇವಾಲಯ ವಿಚಾರವಾಗಿ ಸರ್ಕಾರ ರಚಿಸಿರುವ ಮೇಲ್ವಿಚಾರಣ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲದಿದ್ದರೆ ಸಿಗಂದೂರಿನಿಂದ ಬೆಂಗಳೂರಿನವರೆಗೂ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯಸಭಾ ಮಾಜಿ ಸದಸ್ಯ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರ ರಚಿಸಿರುವ ಮೇಲ್ವಿಚಾರಣ ಸಮಿತಿಯಿಂದ ಹಿಂದುಳಿದ ವರ್ಗದವರ ಸ್ವಾಭಿಮಾನಕ್ಕೆ ಹೊಡೆತಕೊಟ್ಟಿದೆ. ಜಿಲ್ಲಾಧಿಕಾರಿಗಳು ಶೀಘ್ರದಲ್ಲೇ ಮೇಲ್ವಿಚಾರಣ ಸಮಿತಿಯನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ನನ್ನ ನೇತೃತ್ವದಲ್ಲೇ ಸಿಗಂದೂರಿನಿಂದ ಬೆಂಗಳೂರಿನವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳುತ್ತೇನೆ ಎಂದು ಹೇಳಿದರು.

ಸಿಗಂದೂರು ಹಿಂದುಳಿದವರ ಚೌಡಮ್ಮ ದೇವಿ ಅದನ್ನು ಚೌಡೇಶ್ವರಿ ಮಾಡಿರುವ ವೈದಿಕಶಾಹಿ ಅಲ್ಲಿ ಶೂದ್ರ ಸಂಪ್ರದಾಯಕ್ಕೆ ತಿಲಾಂಜಲಿ ಹೇಳಿದೆ. ಸರ್ಕಾರ ಕ್ಷುಲ್ಲಕ ಕಾರಣ ಇಟ್ಟುಕೊಂಡು ಮೇಲ್ವಿಚಾರಣೆ ಸಮಿತಿ ರಚಿಸಿರುವುದು ಹಿಂದುಳಿದವರ ಮೇಲೆ ನಡೆಸಿದ ಧಾರ್ಮಿಕ ಪ್ರಹಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಹಲವಾರು ದೇವಾಲಯ, ಮಂದಿರಗಳಲ್ಲಿ ಗಲಾಟೆಗಳು ಆಗಿವೆ. ಅಲ್ಲಿ ಯಾವುದೇ ಸಮಿತಿ ರಚಿಸಿಲ್ಲ. ಹಿಂದುಳಿದ ವರ್ಗಕ್ಕೆ ಸೇರಿದ ಸಿಗಂದೂರು ದೇವಾಲಯದ ಟ್ರಸ್ಟ್ ಮೇಲೆ ಯಾಕೆ ಸಮಿತಿ ರಚನೆ ಮಾಡಿದ್ದಿರಾ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಗಳು ನಾನು ಹಿಂದುಳಿದ ವರ್ಗದ ಪರ ಅಂತ ಘೋಷಣೆ ಮಾಡಿಕೊಳ್ಳುತ್ತಾರೆ. ಈಗ ಸಿಗಂದೂರು ದೇವಾಲಯ ವಿಚಾರವಾಗಿ ಹಿಂದುಳಿದವರ ವಿರುದ್ಧವಾಗಿದ್ದಾರೆ ಎಂದು ಆರೋಪಿಸಿದರು.

ಸಮಿತಿ ರಚನೆಯಲ್ಲಿ ಹಿಂದುತ್ವದ ಕೈವಾಡ ಇರುವುದು ಸ್ಪಷ್ಟವಾಗಿದೆ. ಜಿಲ್ಲಾಧಿಕಾರಿಗಳು ಅವರ ಕಛೇರಿಯಲ್ಲಿ ಮೇಲ್ಚಿಚಾರಣೆ ಸಮಿತಿ ರಚಿಸಿಲ್ಲ. ಬದಲಾಗಿ ಒಂದು ಸಂಘಟನೆಯ ಕೊಠಡಿಯಲ್ಲಿ ಕುಳಿತುಕೊಂಡು ಮೇಲ್ವಿಚಾರಣೆ ಸಮಿತಿ ರಚನೆ ಮಾಡಿ ಆದೇಶ ಮಾಡಿದ್ದಾರೆ. ಈ ಹಿಂದೆ ಹಿಂದುತ್ವವಾದಿಗಳು ಹಿಂದೂಸ್ಥಾನ್ ಪಾಕಿಸ್ಥಾನ್ ಎಂದು ಹೇಳಿ ಜನರನ್ನ ಒಡೆದು ಆಳಲಾಗುತ್ತಿತ್ತು. ಈಗ ಹಿಂದುಳಿದ ಜನ ಜಾಗೃತಗೊಂಡ ನಂತರ ಹಿಂದುತ್ವವಾದಿಗಳೇ ಹಿಂದುಳಿದವರನ್ನ ದಮನ ಪ್ರಕ್ರಿಯೆಗೆ ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಆರ್ಯ ಈಡಿಗ ಸಮುದಾಯದ ಅಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್, ಮಾಜಿ ಸೂಡಾ ಅಧ್ಯಕ್ಷ ಎನ್.ರಮೇಶ್, ಜೆಡಿಎಸ್ ನ ಜಿ.ಡಿ.ಮಂಜುನಾಥ್, ಪ್ರೊ.ಕಲ್ಲನ್,ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X