Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ವಿಟಾಮಿನ್ ಡಿ ಅತಿಸೇವನೆ ಆರೋಗ್ಯಕ್ಕೆ...

ವಿಟಾಮಿನ್ ಡಿ ಅತಿಸೇವನೆ ಆರೋಗ್ಯಕ್ಕೆ ಹಾನಿಕರ ಎನ್ನುವುದು ನಿಮಗೆ ಗೊತ್ತಿರಲಿ

ವಾರ್ತಾಭಾರತಿವಾರ್ತಾಭಾರತಿ6 Nov 2020 10:46 PM IST
share
ವಿಟಾಮಿನ್ ಡಿ ಅತಿಸೇವನೆ ಆರೋಗ್ಯಕ್ಕೆ ಹಾನಿಕರ ಎನ್ನುವುದು ನಿಮಗೆ ಗೊತ್ತಿರಲಿ

ವಿಟಾಮಿನ್ ಡಿ ಆರೋಗ್ಯಕ್ಕೆ ಮುಖ್ಯವಾಗಿದೆ, ಆದರೆ ಅದರ ಅತಿಯಾದ ಸೇವನೆ ಶರೀರದಲ್ಲಿ ನಂಜಿಗೆ ಕಾರಣವಾಗಬಲ್ಲದು. ಈ ಕೋವಿಡ್ ಕಾಲದಲ್ಲಿ ಜನರು ತಮ್ಮ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಿಕ್ಕಸಿಕ್ಕ ವಿಟಾಮಿನ್ ಮಾತ್ರೆಗಳನ್ನು ಸೇವಿಸುತ್ತಿದ್ದಾರೆ. ಇವುಗಳಲ್ಲಿ ವಿಟಾಮಿನ್ ಡಿ ಕೂಡ ಸೇರಿದೆ.

ವಿಟಾಮಿನ್ ಡಿ ನಿರೋಧಕ ವ್ಯವಸ್ಥೆಗೆ, ಸ್ನಾಯುಗಳಿಗೆ ಮತ್ತು ಜೀವಕೋಶಗಳ ಬೆಳವಣಿಗೆಗೆ ಒಳ್ಳೆಯದು ಹೌದು. ಅದು ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ. ಅದು ಹೃದಯವನ್ನೂ ರಕ್ಷಿಸುತ್ತದೆ. ವಿಟಾಮಿನ್ ಡಿ ಉಪಸ್ಥಿತಿಯಲ್ಲಿ ಮಾತ್ರ ಶರೀರವು ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳುತ್ತದೆ. ಹೀಗೆ ಕ್ಯಾಲ್ಸಿಯಂ ಚಯಾಪಚಯದಲ್ಲಿ ವಿಟಾಮಿನ್ ಡಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಅತಿಯಾಗಿ ವಿಟಾಮಿನ್ ಡಿ ಸೇವನೆಯ ಅಡ್ಡಪರಿಣಾಮಗಳು

► ವಾಕರಿಕೆ ಮತ್ತು ವಾಂತಿ

ಇವು ವಿಟಾಮಿನ್ ಡಿ ನಂಜಿನ ಅತ್ಯಂತ ಸಾಮಾನ್ಯ ಲಕ್ಷಣಗಳಾಗಿವೆ. ರಕ್ತದಲ್ಲಿ ಕ್ಯಾಲ್ಸಿಯಂ ಮಟ್ಟ ಹೆಚ್ಚಾದಾಗ ವಾಕರಿಕೆ ಮತ್ತು ವಾಂತಿ ಉಂಟಾಗುತ್ತವೆ. ಆದರೆ ಪ್ರತಿಯೊಬ್ಬರಿಗೂ ಹೀಗೆ ಆಗುವುದಿಲ್ಲ.

► ರಕ್ತದಲ್ಲಿ ಕ್ಯಾಲ್ಸಿಯಂ ಮಟ್ಟ ಏರಿಕೆ

ಶರೀರದಲ್ಲಿ ಅತಿಯಾದ ವಿಟಾಮಿನ್ ಡಿ ಅತಿಯಾದ ಕ್ಯಾಲ್ಸಿಯಮ್‌ಗೂ ಕಾರಣವಾಗುತ್ತದೆ. ಇದರಿಂದಾಗಿ ಅಂಗಾಂಶಗಳು ಮತ್ತು ಚರ್ಮದ ಮೇಲೆ ಕ್ಯಾಲ್ಸಿಯಂ ಸಂಗ್ರಹವಾಗುತ್ತದೆ. ಇಷ್ಟೇ ಅಲ್ಲ,ಅದು ಮೂಳೆಗಳ ಮೇಲೂ ಋಣಾತ್ಮಕ ಪರಿಣಾಮಗಳನ್ನು ಬೀರುತ್ತದೆ. ರಕ್ತದಲ್ಲಿ ಕ್ಯಾಲ್ಸಿಯಂ ಮಟ್ಟ ಹೆಚ್ಚಿದಾಗ ಅದು ಅಧಿಕ ರಕ್ತದೊತ್ತಡ,ಮೂಳೆ ನಷ್ಟ,ಮೂತ್ರಪಿಂಡ ಹಾನಿ,ಬಳಲಿಕೆ ಮತ್ತು ತಲೆಸುತ್ತು ಇತ್ಯಾದಿಗಳಿಗೂ ಕಾರಣವಾಗುತ್ತದೆ.

► ಮೂಳೆ ನಷ್ಟ

ಮೂಳೆಗಳ ಆರೋಗ್ಯಕ್ಕೆ ಅಗತ್ಯವಾಗಿರುವ ಕ್ಯಾಲ್ಸಿಯಂ ಚಯಾಪಚಯಕ್ಕೆ ವಿಟಾಮಿನ್ ಡಿ ನೆರವಾಗುತ್ತದೆ. ಆದರೆ ಪೋಷಕಾಂಶದ ರೂಪದಲ್ಲಿ ಅತಿಯಾಗಿ ವಿಟಾಮಿನ್ ಡಿ ಸೇವನೆಯು ರಕ್ತದಲ್ಲಿ ವಿಟಾಮಿನ್ ಕೆ2 ಮಟ್ಟ ಕಡಿಮೆಯಾಗಲು ಕಾರಣವಾಗುತ್ತದೆ. ಮೂಳೆಗಳ ಆರೋಗ್ಯವನ್ನು ಕಾಯ್ದುಕೊಳ್ಳುವಲ್ಲಿ ವಿಟಾಮಿನ್ ಕೆ2 ಪ್ರಮುಖ ಪಾತ್ರವನ್ನು ವಹಿಸುತ್ತದೆ.

► ಮೂತ್ರಪಿಂಡ ವೈಫಲ್ಯ

ಮೂತ್ರಪಿಂಡಗಳು ನಮ್ಮ ಶರೀರದಿಂದ ತ್ಯಾಜ್ಯಗಳನ್ನು ಹೊರಗೆ ಹಾಕುವ ಕೆಲಸವನ್ನು ಮಾಡುತ್ತವೆ. ಅತಿಯಾದ ವಿಟಾಮಿನ್ ಡಿ ಮೂಳೆಗಳ ಕಾರ್ಯ ನಿರ್ವಹಣೆಗೆ ವ್ಯತ್ಯಯವನ್ನುಂಟು ಮಾಡುವುದರಿಂದ ಅವು ಹೆಚ್ಚು ಕೆಲಸ ಮಾಡಬೇಕಾಗುತ್ತದೆ. ಇದು ದೀರ್ಘಕಾಲ ಮುಂದುವರಿದರೆ ಮೂತ್ರಪಿಂಡ ವೈಫಲ್ಯದ ಅಪಾಯವು ಹೆಚ್ಚುತ್ತದೆ.

► ಹೊಟ್ಟೆನೋವು,ಮಲಬದ್ಧತೆ ಅಥವಾ ಅತಿಸಾರ

ಇವು ಹೆಚ್ಚಾಗಿ ಜೀರ್ಣ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳಾಗಿವೆ. ವಿಟಾಮಿನ್ ಡಿ ಅತಿ ಸೇವನೆಯು ರಕ್ತದಲ್ಲಿ ಕ್ಯಾಲ್ಸಿಯಂ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಇದೂ ಇಂತಹ ಲಕ್ಷಣಗಳಿಗೆ ಕಾರಣವಾಗಬಲ್ಲದು.

 ನಮ್ಮ ಒಟ್ಟಾರೆ ಆರೋಗ್ಯಕ್ಕೆ ವಿಟಾಮಿನ್ ಡಿ ಅತ್ಯಂತ ಮುಖ್ಯವಾಗಿದೆ. ಆದರೆ ಯಾವುದೇ ಪೋಷಕಾಂಶವನ್ನು ಅತಿಯಾಗಿ ಅಥವಾ ಕಡಿಮೆಯಾಗಿ ಸೇವಿಸಿದರೆ ಅದು ಶರೀರಕ್ಕೆ ಹಾನಿಯನ್ನುಂಟು ಮಾಡುತ್ತದೆ. ವಿಟಾಮಿನ್ ಡಿ ಪಡೆಯಲು ಸೂರ್ಯನ ಬಿಸಿಲು ಮತ್ತು ಆಹಾರಗಳಂತಹ ನೈಸರ್ಗಿಕ ಮೂಲಗಳನ್ನು ನೆಚ್ಚಿಕೊಳ್ಳುವುದು ಒಳ್ಳೆಯದು. ಆದರೆ ಶರೀರದಲ್ಲಿ ವಿಟಾಮಿನ್ ಡಿ ಕೊರತೆಯಿದ್ದರೆ ಪೂರಕಗಳನ್ನು ಸೇವಿಸಬೇಕಾಗಬಹುದು. ಆದರೆ ಇಂತಹ ಪೂರಕಗಳನ್ನು ತೆಗೆದುಕೊಳ್ಳುವ ಮುನ್ನ ವೈದ್ಯರ ಸಲಹೆ ಕೋರುವುದು ಒಳ್ಳೆಯದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X